ಅಷ್ಟಮಿ ಪ್ರಯುಕ್ತ ಚಂದ್ರೋದಯ ಕಾಲದಲ್ಲಿ ಕೃಷ್ಣನಿಗೆ ಅರ್ಘ್ಯ ಪ್ರದಾನ
ಉಡುಪಿ, ಸೆಪ್ಟೆಂಬರ್ 11: ಶ್ರೀ ಕೃಷ್ಣಮಠದಲ್ಲಿ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ರಾತ್ರಿ ಕೃಷ್ಣ ದೇವರಿಗೆ ತುಳಸಿ ಅರ್ಚನೆ, ಮಹಾಪೂಜೆ ನೆರವೇರಿತು. ಪರ್ಯಾಯ ಶ್ರೀಗಳು ಮಹಾಪೂಜೆ ನೆರವೇರಿಸಿದರು.
ಬಳಿಕ ಪರ್ಯಾಯ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು, ಕೃಷ್ಣಾಪುರ ಮಠಾಧೀಶರಾದ ವಿದ್ಯಾಸಾಗರತೀರ್ಥ ಶ್ರೀಪಾದರು, ಅದಮಾರು ಮಠಾಧೀಶರಾದ ವಿಶ್ವಪ್ರಿಯತೀರ್ಥ ಶ್ರೀಪಾದರು, ಕಾಣಿಯೂರು ಮಠಾಧೀಶರಾದ ವಿದ್ಯಾವಲ್ಲಭತೀರ್ಥ ಶ್ರೀಪಾದರು, ಗರ್ಭಗುಡಿಯೊಳಗೆ ಕೃಷ್ಣ ದೇವರಿಗೆ ಅರ್ಘ್ಯ ಪ್ರದಾನ ಮಾಡಿದರು.
ಕೃಷ್ಣಮಠದಲ್ಲಿ ಭಕ್ತರಿಗೆ ವಿತರಿಸಲು ಈ ವರ್ಷ ಲಕ್ಷ ಚಕ್ಕುಲಿ, ಉಂಡೆ
ಅಷ್ಟಮಿಯಂದು ಚಂದ್ರೋದಯ ಸಮಯದಲ್ಲಿ (ರಾತ್ರಿ12.16) ತುಳಸೀಕಟ್ಟೆಯಲ್ಲಿ ಚಂದ್ರನಿಗೆ ಅರ್ಘ್ಯ ನೀಡುವುದು ಅಷ್ಟಮಿಯ ಪ್ರಮುಖ ಧಾರ್ಮಿಕ ವಿಧಿಗಳಲ್ಲೊಂದು. ಮಠಾಧೀಶರು ಅರ್ಘ್ಯ ನೀಡಿದ ನಂತರ ಭಕ್ತಾದಿಗಳಿಂದ ಅರ್ಘ್ಯಪ್ರಧಾನ ನಡೆಯಿತು. ಆದರೆ ಕೋವಿಡ್ ನಿರ್ಬಂಧದ ಹಿನ್ನೆಲೆಯಲ್ಲಿ ಕೆಲವೇ ಭಕ್ತರಷ್ಟೇ ಅರ್ಘ್ಯ ಪ್ರದಾನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
Recommended Video
ಸೆಪ್ಟೆಂಬರ್ 10 ರಿಂದ ಎರಡು ದಿನಗಳ ಕಾಲ ಕೃಷ್ಣ ಜನ್ಮಾಷ್ಟಮಿ ಆಚರಣೆ ನಡೆಯಲಿದ್ದು, ಕೋವಿಡ್-19 ಮಾರ್ಗಸೂಚನೆಗಳ ಪಾಲನೆಗಾಗಿ ವಿಟ್ಲಪಿಂಡಿ ಆಚರಣೆಗೆ ನೂರು ಜನ ಸೇರುವ ಅವಕಾಶವೂ ಇಲ್ಲ ಎಂದು ಉಡುಪಿ ಡಿಸಿ ಜಿ.ಜಗದೀಶ್ ಆದೇಶಿಸಿದ್ದರು.