ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಸ್ ನಲ್ಲೇ ಹೃದಯಾಘಾತ; 22 ವರ್ಷದ ಯುವಕ ಸಾವು

By ಉಡುಪಿ ಪ್ರತಿನಿಧಿ
|
Google Oneindia Kannada News

ಉಡುಪಿ, ಮಾರ್ಚ್ 10: ಬೆಂಗಳೂರಿನಿಂದ ಕುಂದಾಪುರಕ್ಕೆ ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿ ಪ್ರಯಾಣದ ನಡುವೆಯೇ ಹೃದಯಾಘಾತದಿಂದ ಮೃತಪಟ್ಟ ಘಟನೆ ಕುಂದಾಪುರದಲ್ಲಿ ನಡೆದಿದೆ.

ಕುಂದಾಪುರದ ಬಳ್ಕೂರು ದೇವಸ್ಥಾನ ಬೆಟ್ಟು ನಿವಾಸಿ ಶ್ರೀಧರ ಮೂರ್ತಿ ಅವರ ಪುತ್ರ ಸುಹಾನ್ (22) ಮೃತಪಟ್ಟವರು. ಸುಹಾನ್ ಬೆಂಗಳೂರು ಕಾಲೇಜಿನಲ್ಲಿ ಕೊನೆಯ ವರ್ಷದ ಎಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದ.

Kundapura Youth Died In Bus By Heart Attack

 ಶಿವಮೊಗ್ಗದಲ್ಲಿ ಸಾವಿನಲ್ಲೂ ಸಮಯಪ್ರಜ್ಞೆ ಮೆರೆದ ಬಸ್ ಚಾಲಕ ಶಿವಮೊಗ್ಗದಲ್ಲಿ ಸಾವಿನಲ್ಲೂ ಸಮಯಪ್ರಜ್ಞೆ ಮೆರೆದ ಬಸ್ ಚಾಲಕ

ರಾತ್ರಿ 9.45ಕ್ಕೆ ಊರಿಗೆ ತೆರಳಲು ಬೆಂಗಳೂರಿನಿಂದ ಬಸ್ಸು ಏರಿದ್ದ. ಆದರೆ ಬೆಳಿಗ್ಗೆ 7.30ರ ವೇಳೆಗೆ ಬಸ್ಸು ಕುಂದಾಪುರಕ್ಕೆ ತಲುಪಿದರೂ ಸುಹಾನ್ ಇಳಿದಿರಲಿಲ್ಲ. ಇದನ್ನು ಕಂಡ ಬಸ್ ನಿರ್ವಾಹಕ ಪರಿಶೀಲಿಸಿದಾಗ ಸುಹಾನ್ ಮೃತಪಟ್ಟಿರುವುದು ತಿಳಿದಿದೆ.‌ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಈ‌ ಕುರಿತು ಪ್ರಕರಣ ದಾಖಲಾಗಿದೆ.

English summary
A student who was traveling in a private bus from Bengaluru to Kundapur has died of a heart attack in Kundapur
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X