ವಿಂಗ್ ಕಮಾಂಡರ್ ಅಭಿನಂದನ್ ಧೈರ್ಯ ಮೆಚ್ಚುವಂಥದ್ದು: ಪೇಜಾವರ ಶ್ರೀ
ಉಡುಪಿ, ಮಾರ್ಚ್ 01: ವಿಂಗ್ ಕಮಾಂಡರ್ ಅಭಿನಂದನ್ ತೋರಿದ ಧೈರ್ಯ ಮೆಚ್ಚುವಂತದ್ದು. ಶತ್ರುಗಳ ದೇಶದಲ್ಲಿ ಆತ ವರ್ತಿಸಿದ ರೀತಿ ದೇಶದ ಗೌರವ ಹೆಚ್ಚಿಸಿದೆ. ಅಭಿನಂದನ್ ಗೆ ಸಾವಿರ ಸಾವಿರ ಅಭಿನಂದನೆಗಳು. ಜೇಬಲ್ಲಿದ್ದ ಕಾಗದ ಪತ್ರ ನುಂಗಿ ದೇಶದ ಕಾಳಜಿ ತೋರಿದ್ದಾರೆ ಎಂದು ಪೇಜಾವರಶ್ರೀ ಪ್ರಶಂಸೆ ವ್ಯಕ್ತಪಡಿಸಿದರು.
ಅಭಿನಂದನ್ ಸ್ವದೇಶಕ್ಕೆ ಮರಳುತ್ತಿರುವುದಕ್ಕೆ ರಾಜ್ಯದ ವಿವಿಧೆಡೆ ಸಂಭ್ರಮಾಚರಣೆ
ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಕಿಸ್ತಾನದ ಜೊತೆ ಯುದ್ಧ ಬೇಡ. ಯುದ್ಧದಿಂದ ಸಾವಿರಾರು ಸಾವು ನೋವುಗಳು ಸಂಭವಿಸುತ್ತವೆ. ನಮ್ಮ ಸೈನಿಕರ ಸಾವಾಗುತ್ತದೆ. ಆತ್ಮಾಭಿಮಾನಕ್ಕೆ ಚ್ಯುತಿಬಾರದ ರೀತಿಯಲ್ಲಿ ಶಾಂತಿ ಸ್ಥಾಪನೆಯಾಗಲಿ ಎಂದರು.
ಅಭಿನಂದನ್ ಬಿಡುಗಡೆ LIVE: ವಿಂಗ್ ಕಮಾಂಡರ್ ಆಗಮನಕ್ಕೆ ದೇಶದೆಲ್ಲೆಡೆ ಕಾತರ
ಮೋದಿಗೆ ನಾನು ಅಭಿನಂದನೆ ತಿಳಿಸುತ್ತೇನೆ. ಅವರ ಅಭಿವೃದ್ಧಿ ಮತ್ತು ಧೈರ್ಯ, ದಿಟ್ಟತನವನ್ನು ನಾನು ಮೆಚ್ಚುತ್ತೇನೆ. ಅವರು ಸೂಕ್ತ ಸಮಯದಲ್ಲಿ ಪ್ರಧಾನಿಯಾಗಿದ್ದಾರೆ ಎಂದು ಶ್ಲಾಘಿಸಿದರು.
ಯಡಿಯೂರಪ್ಪ 22 ಸೀಟು ಹೇಳಿಕೆ ವಿಚಾರಕ್ಕೆ ಪ್ರತಿಕ್ರಯಿಸಿದ ಅವರು, ಇದೊಂದು ಚಿಕ್ಕ ವಿಚಾರ ದೊಡ್ಡ ವಿಷಯವಲ್ಲ.ಇಂದಿರಾಗಾಂಧಿ ಆಳ್ವಿಕೆ ಸಂದರ್ಭದಲ್ಲಿ ಯುದ್ಧ ಆಗಿದೆ. ಆಗ ಕಾಂಗ್ರೆಸ್ ಗೆ ಉಪಯೋಗವಾಗ್ತದೆ ಅಂತ ಎಲ್ಲರು ಹೇಳಿಕೊಂಡಿದ್ದರು.ಬಿಎಸ್ ವೈ ಹೇಳಿಕೆಯನ್ನು ದೊಡ್ಡ ವಿಷಯ ಮಾಡಬೇಕಾಗಿಲ್ಲ ಎಂದು ಹೇಳಿದರು.
'ಅಭಿನಂದನ್' ತಂದೆ ತಾಯಿಗೆ ವಿಮಾನದಲ್ಲಿ ಅಭಿಮಾನದ ಸ್ವಾಗತ
ಉಗ್ರರ ಸಂಹಾರ ಆಗಬೇಕು. ಅಮಾಯಕರ ಹತ್ಯೆ ಆಗಬಾರದು, ಉಗ್ರರನ್ನು ಹುಡುಕಿ ಹುಡುಕಿ ಕೊಲ್ಲಬೇಕು. ಸೈನಿಕರ ಸರ್ಜಿಕಲ್ ಸ್ಟ್ರೈಕ್ ಗೆ ಅಭಿನಂದಿಸುತ್ತೇನೆ ಎಂದ ಪೇಜಾವರಶ್ರೀಗಳು ದೇಶದ ಬುದ್ಧಿಜೀವಿಗಳ ಬಗ್ಗೆ ತಿರಸ್ಕಾರ ಉಂಟಾಗಿದೆ. ಇಂತಹ ಸಂದರ್ಭದಲ್ಲೂ ಅವರಿಗೆ ದೇಶಾಭಿಮಾನ ಇಲ್ಲ. ಬುದ್ಧಿಜೀವಿಗಳಿಗೆ ಒಳ್ಳೆ ಬುದ್ಧಿ ಕೊಡಲಿ. ಬುದ್ಧಿಜೀವಿಗಳು ದುರ್ಬುದ್ಧಿ ಜೀವಿಗಳು ಆಗಬಾರದು, ಸದ್ಭುದ್ದಿಜೀವಿಗಳಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದರು.