ಮರಳಿನ ಸಮಸ್ಯೆ ಪರಿಹರಿಸದಿದ್ದರೆ ಉಪವಾಸ ಆರಂಭಿಸುವೆ ಎಂದ ಪೇಜಾವರ ಶ್ರೀ

ಉಡುಪಿ, ನವೆಂಬರ್. 02: ಉಡುಪಿ ಜಿಲ್ಲಾ ಮರಳು ಹೋರಾಟ ಸಮಿತಿಯ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಹಮ್ಮಿಕೊಳ್ಳಲಾಗಿರುವ ಅನಿದಿಷ್ಟಾವಧಿ ಅಹೋರಾತ್ರಿ ಧರಣಿ 9 ನೇ ದಿನಕ್ಕೆ ಕಾಲಿರಿಸಿದೆ.

ಈ ನಡುವೆ ಗುರುವಾರ (ನವೆಂಬರ್ 01) ಧರಣಿ ನಡೆಯುತ್ತಿರುವ ಸ್ಥಳಕ್ಕೆ ಆಗಮಿಸಿದ ಪೇಜಾವರ ಮಠಾಧೀಶ ಶ್ರೀವಿಶ್ವೇಶ ತೀರ್ಥ ಸ್ವಾಮೀಜಿ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದರು. ಈ ಹೋರಾಟ ಸುಖಾಂತ್ಯವಾಗಲೆಂದು ಧರಣಿ ನಿರತರ ನಡುವೆ ವಿಷ್ಣು ಸಹಸ್ರನಾಮ ಪಾರಾಯಣ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪೇಜಾವರ ಶ್ರೀ, ಮರಳಿನ ಸಮಸ್ಯೆ ನವೆಂಬರ್ 10ರೊಳಗೆ ಪರಿಹರಿಸದಿದ್ದರೆ ಉಪವಾಸ ಆರಂಭಿಸಲಿದ್ದೇನೆ. ಅತಿಯಾದ ಮರಳುಗಾರಿಕೆಗೆ ಪೂರ್ಣ ನಿಷೇಧ ಹೇರುವುದು ಪರಿಸರ ಹಾನಿಕರ. ಆದುದರಿಂದ ಸರಕಾರ ಯೋಗ್ಯವಾದ ನಿಯಂತ್ರಣದೊಂದಿಗೆ ಮರಳುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದರು.

Pejavara Shree says start fasting from November 10 if sand problem does not resolve

ಈ ಸಂದರ್ಭದಲ್ಲಿ ಉಡುಪಿ ಶಾಸಕ ರಘುಪತಿ ಭಟ್ , ದೋಣಿ ಕಾರ್ಮಿಕ ಸಂಘದ ಅಧ್ಯಕ್ಷ ಸುಧಾಕರ್ ಅಮೀನ್ , ಜಿಪಂ ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಮರಳಿಗಾಗಿ ಹೋರಾಟ ಸಮಿತಿಯ ಸಂಚಾಲಕ ಎಂ.ಜಿ.ನಾಗೇಂದ್ರ, ಕರವೇ ಜಿಲ್ಲಾಧ್ಯಕ್ಷ ಅನ್ಸಾರ್ ಅಹ್ಮದ್, ತಾಪಂ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್, ಬಿಲ್ಡರ್ ಅಸೋಸಿಯೇಶನ್ ಅಧ್ಯಕ್ಷ ಜೆರ್ರಿ ಡಯಸ್, ಚೇಂಬರ್ ಆಫ್ ಕಾಮರ್ಸ್ ನ ಅಧ್ಯಕ್ಷ ಕೃಷ್ಣರಾಜ ಕೊಡಂಚ ಮೊದಲಾದವರು ಉಪಸ್ಥಿತರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+