ಕ್ರೈಸ್ತ ಮತ ಪ್ರಚಾರಕ್ಕೆ ಪೇಜಾವರ ಶ್ರೀಗಳ ತಮ್ಮ! ವಿಚಿತ್ರ ಪೋಸ್ಟ್ ಗೆ ಮಠದ ಸ್ಪಷ್ಟನೆ
ಉಡುಪಿ, ಆಗಸ್ಟ್ 14: ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದ ಆಮಂತ್ರಣ ಪತ್ರಿಕೆಯೊಂದರಲ್ಲಿ 'ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಅವರ ಸಹೋದರ ವಸಂತ ಆರ್. ಪೈ ಎಂಬುವವರು ಆಗಸ್ಟ್ 11 ರಂದು ಬೆಂಗಳೂರಿನ ಜೆಪಿನಗರದ ಏಳನೇ ಹಂತದಲ್ಲಿ ರಾಯಲ್ ಪ್ರೀಸ್ಟ್ ಹುಡ್ ಮಿಶನ್ ಚರ್ಚಿನಲ್ಲಿ ಉಪನ್ಯಾಸ ನೀಡುತ್ತಾರೆ' ಎಂಬ ವಿಚಿತ್ರ ಸುದ್ದಿಯೊಂದು ಹರಿದಾಡುತ್ತಿದೆ. ಆಗಸ್ಟ್ 11 ಮುಗಿದಿದ್ದರೂ, ಈ ಆಮಂತ್ರಣ ಪತ್ರಿಕೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿದ್ದು, ಈ ಬಗ್ಗೆ ಉಡುಪಿಯ ಪೇಜಾವರ ಮಠ ಸ್ಪಷ್ಟನೆ ನೀಡಿದೆ. "ಆಮಂತ್ರಣ ಪತ್ರಿಕೆಯಲ್ಲಿರುವ ವಸಂತ ಪೈ, ಪೇಜಾವರ ಮಠಾಧೀಶ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಗಳ ಸಹೋದರನಲ್ಲ" ಎಂದಿದೆ.
"Jesus Christ is Aalive and He raises Living Testimony" ಎಂಬ ವಿಷಯದ ಬಗ್ಗೆ ವಸಂತ ಮಾತನಾಡುತ್ತಾರೆ ಎಂದು ಈ ಆಮಂತ್ರಣದಲ್ಲಿ ಬರೆಯಲಾಗಿತ್ತು. "ಅವರು ಶ್ರೀ ಕೃಷ್ಣ ದೇವಾಲಯ ಉಡುಪಿಯ ಪರ್ಯಾಯ ಸ್ವಾಮೀಜಿ ಶ್ರೀ ವಿಶ್ವೇಶತೀರ್ಥ ಅವರ ಸ್ವಂತ ಸಹೋದರ" ಎಂದು ಎಂದು ಉಲ್ಲೇಖಿಸಲಾಗಿತ್ತು. ಜೊತೆಗೆ ಎರಡು ದೂರವಾಣಿ ಸಂಖ್ಯೆಯನ್ನೂ ನೀಡಲಾಗಿತ್ತು. ಈ ದೂರವಾಣಿಗಳಲ್ಲಿ ಒಂದಕ್ಕೆ ಫೋನ್ ಮಾಡಿದರೆ ಪ್ರತಿಕ್ರಿಯೆ ಇಲ್ಲ. ಇನ್ನೊಂದಕ್ಕೆ ಮಾಡಿದರೆ, "ಇದು ಯಾರೋ ಬೇಕಂತಲೇ ಮಾಡಿದ ಕೆಲಸ. ಇದಕ್ಕೂ ನನಗೂ ಸಂಬಂಧವಿಲ್ಲ ಈ ಬಗ್ಗೆ ನನಗೆ ಏನೂ ಗೊತ್ತಿಲ್ಲ" ಎಂಬ ಉತ್ತರವನ್ನು ವ್ಯಕ್ತಿಯೊಬ್ಬರು ನೀಡುತ್ತಿದ್ದಾರೆ.

ಈ ಆಮಂತ್ರಣದಲ್ಲಿ ವಸಂತ ಆರ್.ಪೈ ಎಂದು ಬರೆದು, ವ್ಯಕ್ತಿಯೊಬ್ಬರ ಫೋಟೊವನ್ನೂ ಹಾಕಲಾಗಿದೆ.

ಈ ಬಗ್ಗೆ ಪೇಜಾವರ ಮಠ ಸ್ಪಷ್ಟನೆ ನೀಡಿದ್ದು, "ಪೇಜಾವರ ಸ್ವಾಮೀಜಿಗಳ ಇಬ್ಬರು ಸಹೋದರರಲ್ಲಿ ಒಬ್ಬರು ಹಲವು ಕಾಲಗಳ ಹಿಂದೆಯೇ ತೀರಿಕೊಂಡರು. ಇನ್ನೊಬ್ಬರು ಶ್ರೀ ರಘುರಾಮಾಚಾರ್ ಎಂಬುವವರು. ಅವರು ಉಡುಪಿಯಲ್ಲಿ ವಾಸವಿದ್ದಾರೆ. ಜೊತೆಗೆ ಚಿತ್ರದಲ್ಲಿ ಪೈ ಎಂಬ ಸರ್ನೇಮ್ ನೀಡಲಾಗಿದೆ. ಅದು ಮಂಗಳೂರಿನಲ್ಲಿ ಕೊಂಕಣಿ ಮಾತನಾಡುವ ಜನರ ಸರ್ನೇಮ್. ಈ ಮಾಹಿತಿ ಆಧಾರ ರಹಿತ. ಶ್ರೀಗಳ ಹೆಸರನ್ನು ಬಳಸಿಕೊಂಡು ಕೆಲವು ಕ್ರೈಸ್ತರು ಮತಪ್ರಚಾರ ಮಾಡುವ ಪ್ರಯತ್ನ ಮಾಡುತ್ತಿದ್ದಾರೆ. ಈ ಸುಳ್ಳುಸುದ್ದಿಯನ್ನು ಹಂಚಬೇಡಿ. ನಮ್ಮ ಕಾಲದ ಮಹಾನ್ ಗುರುಗಳಾದ ಪೇಜಾವರ ಶ್ರೀಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅನವಶ್ಯಕ ಸುಳ್ಳು ಸುದ್ದಿಗಳನ್ನು ಹಂಚಬೇಡಿ" ಎಂದು ಮನವಿ ಮಾಡಿದೆ.
-
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ 'ಜಾಂಬಿ ಡ್ರಗ್'?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ -
PUC Results: 2026ರ ದ್ವಿತೀಯ PUC ಪರೀಕ್ಷೆ ಫಲಿತಾಂಶ ಪ್ರಕಟ, ಇವರೇ ನೋಡಿ ಟಾಪರ್ -
Dhurandhar-2 OTT: ನೆಟ್ಫ್ಲಿಕ್ಸ್ ಅಲ್ಲ, ಈ ಒಟಿಟಿಯಲ್ಲಿ 'ಧರಂಧರ-2' ಅಬ್ಬರ, ಯಾವಾಗ? -
Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ "ರಾಗಿ' ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್ -
Rain in Karnataka: ಕರ್ನಾಟಕದ ಕರಾವಳಿಯಲ್ಲಿ ಭಾರೀ ಬಿಸಿಲು; ಬೆಂಗಳೂರು ಸೇರಿ ಈ ಭಾಗಗಳಲ್ಲಿ ಮಳೆ: ಐಎಂಡಿ -
Election Commission: ಚುನಾವಣೆ ಸಮಯದಲ್ಲೇ ಭಾರತೀಯ ಚುನಾವಣಾ ಆಯೋಗದ ಟ್ವೀಟ್ ಎಡವಟ್ಟು, ಬಿಜೆಪಿ ಪರ ಎಂದ ವಿರೋಧ ಪಕ್ಷಗಳು -
Dhurandhar 2: ದುರಂಧರ್ 2 ಸಿನಿಮಾ: ಬಾಕ್ಸ್ ಆಫೀಸ್ನಲ್ಲಿ 1,000 ಕೋಟಿ ದಾಖಲೆಯ ನಡುವೆ ಹೊಸ ಸಂಕಷ್ಟ -
Zombis Drug: ಬೆಂಗಳೂರಲ್ಲಿ ಜಾಂಬಿ ಡ್ರಗ್ಸ್ ಸೇವಿಸಿ ಯುವಕನ ವಿಚಿತ್ರ ವರ್ತನೆ: ನಟ ದುನಿಯಾ ವಿಜಯ್ ವಿಡಿಯೋ ವೈರಲ್ -
Assembly Elections 2026: ಕೇರಳಂ, ಅಸ್ಸಾಂ, ಪುದುಚೇರಿ ವಿಧಾನಸಭೆ ಚುನಾವಣೆ ಮತದಾನ ಪ್ರಾರಂಭ -
Karnataka 2nd Puc Results 2026: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ ಯಾವ ಜಿಲ್ಲೆ ಎಷ್ಟನೇ ಸ್ಥಾನ? -
Chandrika Dixit: ಒಂದು ರಾತ್ರಿ ನನ್ನ ಜೊತೆ ಮಲಗಿದ್ರೆ 50 ಲಕ್ಷ ಕೊಡ್ತೇನೆ; ಚಂದ್ರಿಕಾಗೆ ಖ್ಯಾತ ಉದ್ಯಮಿ ಆಫರ್












Click it and Unblock the Notifications