ಕುಕ್ಕೆ ಸುಬ್ರಹ್ಮಣ್ಯ ವಿವಾದದ ಬಗ್ಗೆ ಪೇಜಾವರರು ಕೊಟ್ಟ ಪ್ರತಿಕ್ರಿಯೆ ಹೀಗಿದೆ...
ಉಡುಪಿ, ಅಕ್ಟೋಬರ್ 15: ಕುಕ್ಕೆ ಸುಬ್ರಹ್ಮಣ್ಯ ದೇವಾಲಯ ಹಾಗೂ ಮಠದ ವಿವಾದದ ಕುರಿತು ಉಡುಪಿ ಪೇಜಾವರ ಮಠದ ಪೇಜಾವರ ಶ್ರೀ ಪ್ರತಿಕ್ರಿಯಿಸಿದ್ದಾರೆ.
ಉಡುಪಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಿಂದ ಸುಬ್ರಹ್ಮಣ್ಯ ಮಠಕ್ಕೆ ಸಮಸ್ಯೆಯಾಗಿದೆ. ಸುಬ್ರಹ್ಮಣ್ಯ ಮಠಾಧೀಶರಿಗೆ ದೇವಸ್ಥಾನದ ಆಡಳಿತ ಮಂಡಳಿ ಕಿರುಕುಳ ನೀಡುತ್ತಿದೆ ಎಂದು ದೂರಿದರು.
ಉಡುಪಿಯ ಅಷ್ಟಮಠಾಧೀಶರಿಗೆ ಈ ಬಗ್ಗೆ ಅತೀವ ಕಳವಳವಾಗಿದೆ. ದೇವಸ್ಥಾನದವರು ಮಠಕ್ಕೆ ಅನಾವಶ್ಯಕ ತೊಂದರೆ ಕೊಡಬಾರದು. ಮಠದ ಗೋಶಾಲೆಗೆ ದೇವಳದ ನೀರನ್ನು ದೇವಸ್ಥಾನ ಸ್ಥಗಿತಗೊಳಿಸಿರುವುದು ಸರಿಯಲ್ಲ.

ಸರ್ಪ ಸಂಸ್ಕಾರಕ್ಕೆ ಎಲ್ಲೂ ನಿರ್ಬಂಧ ಇಲ್ಲ. ಮಠದ ವಿರೋಧಿ ವರ್ಗದ ಈ ನಿಲುವು ಸರಿಯಲ್ಲ. ಈ ನಿಲುವಿನಿಂದ ಸಮಾಜಕ್ಕೆ ತೊಂದರೆಯಾಗುತ್ತಿದೆ. ಕುಕ್ಕೆ ಸುಬ್ರಹ್ಮಣ್ಯ ಮಠ, ಜನರಿಗೆ ಹಾನಿಕಾರಕವಾಗಿ ವರ್ತಿಸುತ್ತಿಲ್ಲ. ಕುಕ್ಕೆ ದೇವಸ್ಥಾನ -ಮಠದ ಸಂಘರ್ಷ ಸರಿಯಲ್ಲ.
ದೇವಸ್ಥಾನಕ್ಕೆ ಸಂಪುಟ ನರಸಿಂಹ ಮಠದ ಬಗ್ಗೆ ಭಿನ್ನಾಭಿಪ್ರಾಯ ಇದ್ದರೆ ಮಾತುಕತೆ ಮಾಡಿ ಬಗೆಹರಿಸೋಣ ಎಂದು ಹೇಳಿದರು.
ಸುಬ್ರಹ್ಮಣ್ಯ ಮಠದಿಂದ ತೊಂದರೆಯಾದರೆ ಅದನ್ನು ಸರಿಪಡಿಸೋಣ. ಸುಬ್ರಹ್ಮಣ್ಯ ಶ್ರೀಗಳ ಜೊತೆ ನಾನು ಮಾತನಾಡುತ್ತೇನೆ ಎಂದು ಪೇಜಾವರ ಶ್ರೀ ತಿಳಿಸಿದ್ದಾರೆ. ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಮಠಕ್ಕೆ ಗೌರವ ಸಿಗುತ್ತಿಲ್ಲ. ವಿದ್ಯಾಭೂಷಣ ಶ್ರೀ ಇದ್ದಾಗ ಇದ್ದ ಗೌರವ ಆದರೂ ಸಿಗಬೇಕು ಎಂದರು.
ಸರಕಾರದ ಪ್ರವೇಶವೇ ಗೊಂದಲಕ್ಕೆ ಕಾರಣ. ದೇವಸ್ಥಾನ, ಮಠ ಸ್ವತಂತ್ರವಾಗಿ ನಡೆಯಬೇಕು. ಎಲ್ಲಾ ಪಕ್ಷ, ಎಲ್ಲಾ ಜನರ ಸಹಕಾರ ಬೇಕು. ವಿವಾದ ಇತ್ಯರ್ಥಕ್ಕೆ ದೇವಸ್ಥಾನದ ಆಡಳಿತ ಮಂಡಳಿ ಸಹಕರಿಸಬೇಕು. ಉಪವಾಸ ಕೈಬಿಡುವಂತೆ ಸುಬ್ರಹ್ಮಣ್ಯ ವಿದ್ಯಾಪ್ರಸನ್ನ ಸ್ವಾಮಿಗಳ ಮನ ಒಲಿಸಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಪಲಿಮಾರು ಶ್ರೀ, ಕಾಣಿಯೂರು ಶ್ರೀ, ಸೋದೆ ಸ್ವಾಮೀಜಿ ಉಪಸ್ಥಿತರಿದ್ದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications