ಪೇಜಾವರ ಶ್ರೀಗಳಿಗೆ ಪದ್ಮವಿಭೂಷಣ ಪ್ರಶಸ್ತಿ: ಮಾಧ್ವ ಯತಿ ಪರಂಪರಯಲ್ಲೇ ಮೊದಲು
71ನೇ ಗಣರಾಜ್ಯೋತ್ಸವಕ್ಕೆ ಮುನ್ನಾದಿನ ಕೇಂದ್ರ ಸರಕಾರ 2020ನೇ ಸಾಲಿನ ಪದ್ಮ ಪ್ರಶಸ್ತಿಯನ್ನು ಪ್ರಕಟಿಸಿದೆ. ಕೃಷ್ಣೈಕ್ಯರಾದ ಉಡುಪಿ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿಗಳು ಸೇರಿದಂತೆ, ರಾಜ್ಯದ ಎಂಟು ಸಾಧಕರು ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಪೇಜಾವರ ಶ್ರೀಗಳಿಗೆ ದೇಶದ ಎರಡನೇ ಅತ್ಯುನ್ನತ (ಭಾರತರತ್ನದ ನಂತರ) ಪ್ರಶಸ್ತಿ ಮರಣೋತ್ತರವಾಗಿ ಲಭಿಸಿದೆ. ಮಾಧ್ವ ಯತಿ ಪರಂಪರೆಯಲ್ಲಿ ವ್ಯಾಸರಾಜರು, ವಾದಿರಾಜರು, ರಾಘವೇಂದ್ರ ಗುರುಗಳಿಗೆ ಅರಸೊತ್ತಿಗೆಯ ಗೌರವಗಳು ಸಂದಿರುವುದನ್ನು ಸ್ಮರಿಸುತ್ತಾ..
ಪೇಜಾವರ ಹಿರಿಯ ಶ್ರೀಗಳು, ಪೀಠದ ಪರಂಪರೆಯ ಇತಿಹಾಸದಲ್ಲಿ ಪದ್ಮವಿಭೂಷಣ ಪ್ರಶಸ್ತಿಗೆ ಭಾಜನರಾದ ಮೊದಲ ಯತಿಗಳಾಗಿದ್ದಾರೆ. ಆದರೆ, ಬೌದ್ದಿಕವಾಗಿ ಈ ಪ್ರಶಸ್ತಿಯನ್ನು ಸ್ವೀಕರಿಸಲು ಶ್ರೀಗಳು ನಮ್ಮೊಂದಿಗೆ ಇಲ್ಲ.

ಹಲವು ದಿನಗಳಿಂದ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಕಳೆದಿದ್ದ ಪೇಜಾವರ ಶ್ರೀಗಳು, ಡಿಸೆಂಬರ್ 29ರ ಭಾನುವಾರ ಬೆಳಿಗ್ಗೆ ಉಡುಪಿ ಪೇಜಾವರ ಮಠದಲ್ಲಿ ಹರಿಪಾದವನ್ನು ಸೇರಿದ್ದರು.
ಅಯೋಧ್ಯೆ ರಾಮಮಂದಿರ ಹೋರಾಟದಲ್ಲಿ ಮಂಚೂಣಿಯಲ್ಲಿ ಭಾಗವಹಿಸಿದ್ದ ಶ್ರೀಗಳಿಗೆ ರಾಮ ಮಂದಿರವನ್ನು ನೋಡುವ ತೀವ್ರ ಆಸೆಯಿತ್ತು. ಆದರೆ ಇನ್ನೇನು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಪ್ರಾರಂಭವಾಗುವ ಹೊತ್ತಿಗೆ ಇಹಲೋಕ ತ್ಯಜಿಸಿದ್ದರು.
ಉಡುಪಿಯಿಂದ 120 ಕಿ.ಮೀ ದೂರದ ರಾಮಕುಂಜ ಎನ್ನುವ ಹಳ್ಳಿಯಲ್ಲಿ 1931, ಎಪ್ರಿಲ್ 27 ರಂದು ವೆಂಕಟರಮಣ (ಪೇಜಾವರ ಶ್ರೀಗಳ ಪೂರ್ವಾಶ್ರಮದ ಹೆಸರು) ಜನಿಸಿದ್ದರು. ಬಹುಧಾನ್ಯ ಸಂವತ್ಸರದ ಮಾರ್ಗಶಿರ ಶುದ್ಧ ಪಂಚಮಿಯಂದು (3.12.1938) ವೆಂಕಟರಮಣನಿಗೆ ಎಂಟನೇ ವಯಸ್ಸಿನಲ್ಲಿ ಹಂಪೆಯ ಯಂತ್ರೋದ್ಧಾರ ಮುಖ್ಯಪ್ರಾಣನ ಸನ್ನಿಧಿಯಲ್ಲಿ ದೀಕ್ಷೆ ನೀಡಲಾಗಿತ್ತು.
-
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
ಎಪಿಎಂಸಿಯಲ್ಲಿ ಮೂಟೆಗಳು ಮೈಮೇಲೆ ಬಿದ್ದರೂ ಪವಾಡಸದೃಶ್ಯದಂತೆ ಬದುಕಿದ ಮಹಿಳೆ Video Viral -
BESCOM Mithra: 'ಬೆಸ್ಕಾಂ ಮಿತ್ರ' ಸೇವೆ ತಾತ್ಕಾಲಿಕ ಸ್ಥಗಿತ, ಸುಧಾರಿತ ವ್ಯವಸ್ಥೆ ಶೀಘ್ರವೇ ಲಭ್ಯ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ












Click it and Unblock the Notifications