ಪೇಜಾವರ ಶ್ರೀಗಳಿಗೆ ಪದ್ಮವಿಭೂಷಣ ಪ್ರಶಸ್ತಿ: ಮಾಧ್ವ ಯತಿ ಪರಂಪರಯಲ್ಲೇ ಮೊದಲು
71ನೇ ಗಣರಾಜ್ಯೋತ್ಸವಕ್ಕೆ ಮುನ್ನಾದಿನ ಕೇಂದ್ರ ಸರಕಾರ 2020ನೇ ಸಾಲಿನ ಪದ್ಮ ಪ್ರಶಸ್ತಿಯನ್ನು ಪ್ರಕಟಿಸಿದೆ. ಕೃಷ್ಣೈಕ್ಯರಾದ ಉಡುಪಿ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿಗಳು ಸೇರಿದಂತೆ, ರಾಜ್ಯದ ಎಂಟು ಸಾಧಕರು ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಪೇಜಾವರ ಶ್ರೀಗಳಿಗೆ ದೇಶದ ಎರಡನೇ ಅತ್ಯುನ್ನತ (ಭಾರತರತ್ನದ ನಂತರ) ಪ್ರಶಸ್ತಿ ಮರಣೋತ್ತರವಾಗಿ ಲಭಿಸಿದೆ. ಮಾಧ್ವ ಯತಿ ಪರಂಪರೆಯಲ್ಲಿ ವ್ಯಾಸರಾಜರು, ವಾದಿರಾಜರು, ರಾಘವೇಂದ್ರ ಗುರುಗಳಿಗೆ ಅರಸೊತ್ತಿಗೆಯ ಗೌರವಗಳು ಸಂದಿರುವುದನ್ನು ಸ್ಮರಿಸುತ್ತಾ..
ಪೇಜಾವರ ಹಿರಿಯ ಶ್ರೀಗಳು, ಪೀಠದ ಪರಂಪರೆಯ ಇತಿಹಾಸದಲ್ಲಿ ಪದ್ಮವಿಭೂಷಣ ಪ್ರಶಸ್ತಿಗೆ ಭಾಜನರಾದ ಮೊದಲ ಯತಿಗಳಾಗಿದ್ದಾರೆ. ಆದರೆ, ಬೌದ್ದಿಕವಾಗಿ ಈ ಪ್ರಶಸ್ತಿಯನ್ನು ಸ್ವೀಕರಿಸಲು ಶ್ರೀಗಳು ನಮ್ಮೊಂದಿಗೆ ಇಲ್ಲ.

ಹಲವು ದಿನಗಳಿಂದ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಕಳೆದಿದ್ದ ಪೇಜಾವರ ಶ್ರೀಗಳು, ಡಿಸೆಂಬರ್ 29ರ ಭಾನುವಾರ ಬೆಳಿಗ್ಗೆ ಉಡುಪಿ ಪೇಜಾವರ ಮಠದಲ್ಲಿ ಹರಿಪಾದವನ್ನು ಸೇರಿದ್ದರು.
ಅಯೋಧ್ಯೆ ರಾಮಮಂದಿರ ಹೋರಾಟದಲ್ಲಿ ಮಂಚೂಣಿಯಲ್ಲಿ ಭಾಗವಹಿಸಿದ್ದ ಶ್ರೀಗಳಿಗೆ ರಾಮ ಮಂದಿರವನ್ನು ನೋಡುವ ತೀವ್ರ ಆಸೆಯಿತ್ತು. ಆದರೆ ಇನ್ನೇನು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಪ್ರಾರಂಭವಾಗುವ ಹೊತ್ತಿಗೆ ಇಹಲೋಕ ತ್ಯಜಿಸಿದ್ದರು.
ಉಡುಪಿಯಿಂದ 120 ಕಿ.ಮೀ ದೂರದ ರಾಮಕುಂಜ ಎನ್ನುವ ಹಳ್ಳಿಯಲ್ಲಿ 1931, ಎಪ್ರಿಲ್ 27 ರಂದು ವೆಂಕಟರಮಣ (ಪೇಜಾವರ ಶ್ರೀಗಳ ಪೂರ್ವಾಶ್ರಮದ ಹೆಸರು) ಜನಿಸಿದ್ದರು. ಬಹುಧಾನ್ಯ ಸಂವತ್ಸರದ ಮಾರ್ಗಶಿರ ಶುದ್ಧ ಪಂಚಮಿಯಂದು (3.12.1938) ವೆಂಕಟರಮಣನಿಗೆ ಎಂಟನೇ ವಯಸ್ಸಿನಲ್ಲಿ ಹಂಪೆಯ ಯಂತ್ರೋದ್ಧಾರ ಮುಖ್ಯಪ್ರಾಣನ ಸನ್ನಿಧಿಯಲ್ಲಿ ದೀಕ್ಷೆ ನೀಡಲಾಗಿತ್ತು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications