ಇಫ್ತಾರ್ ನಿಂದ ಹಿಂದೂ ಧರ್ಮದ ಶ್ರೇಷ್ಠತೆ ಹೆಚ್ಚಿದೆ - ಪೇಜಾವರ ಶ್ರೀ ತಿರುಗೇಟು
ಉಡುಪಿ, ಜೂನ್ 26: ಕೃಷ್ಣ ಮಠದಲ್ಲಿ ಮುಸ್ಲಿಂ ಬಾಂಧವರಿಗಾಗಿ ಆಯೋಜಿಸಿದ್ದ ಇಫ್ತಾರ್ ಕೂಟದಿಂದ 'ಹಿಂದೂ ಧರ್ಮಕ್ಕೆ ಯಾವುದೇ ರೀತಿಯ ಅಪಚಾರವಾಗಿಲ್ಲ. ಬದಲಿಗೆ ಹಿಂದೂ ಧರ್ಮದ ಶ್ರೇಷ್ಠತೆ ಹೆಚ್ಚಿದೆ," ಎಂದು ಪೇಜಾವರ ವಿಶ್ವೇಶ ತೀರ್ಥ ಸ್ವಾಮೀಜಿ ತಿರುಗೇಟು ನೀಡಿದ್ದಾರೆ.
ಕೃಷ್ಣ ಮಠದಲ್ಲಿ ಇಫ್ತಾರ್ ಮಾಡಿದ್ದಕ್ಕೆ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಆಕ್ಷೇಪ ವ್ಯಕ್ತಪಡಿಸಿದ್ದರು. ಇದಕ್ಕೆ ಸ್ಪಷ್ಟನೆ ನೀಡಿರುವ ಸ್ವಾಮೀಜಿ, "ನಾವು ನಮ್ಮ ಧರ್ಮಕ್ಕೆ ಅಪಚಾರವಾಗದಂತೆ ಇತರ ಧರ್ಮದವರೊಂದಿಗೆ ಪ್ರೀತಿಯ ಸಂಬಂಧವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಪ್ರಯತ್ನ ಮಾಡುತ್ತಿದ್ದೇವೆ," ಎಂದು ಹೇಳಿದ್ದಾರೆ.

"ಹಿಂದೂ ಧರ್ಮಕ್ಕೆ ನಿಷ್ಟರಾಗಿದ್ದುಕೊಂಡು ಹಿಂದೂ ಧರ್ಮಕ್ಕೆ ಅನ್ಯಾಯವಾದಾಗ ಹೋರಾಟ ಮಾಡಿದ್ದೇನೆ. ಮುಂದೇಯೂ ಮಾಡುತೇನೆ. ಇದೇ ವೇಳೆ ಇತರ ಧರ್ಮದವರೊಂದಿಗೆ ಸೌಹಾರ್ದತೆಯನ್ನು ಕಾಪಾಡುವುದು ಕೂಡ ಅಷ್ಟೆ ಮುಖ್ಯವಾಗಿದೆ," ಎಂದರು.
"ಉಪವಾಸ ಬಿಡುವ ವೇಳೆಯಲ್ಲಿ ನಮಾಝ್ ಮಾಡುವುದು ಅವರ ಧರ್ಮದ ಪದ್ಧತಿ ಅದಕ್ಕಾಗಿ ಅವರು ಸ್ಥಳವನ್ನು ಕೇಳಿದ್ದರು. ಅದರಂತೆ ಅನ್ನಛತ್ರದಲ್ಲಿ ಅವಕಾಶ ಕಲ್ಪಿಸಲಾಗಿತ್ತು. ಅದು ಸಾರ್ವಜನಿಕ ಸ್ಥಳವಾಗಿದೆ," ಎಂದು ಹೇಳಿದ್ದಾರೆ.
ಈ ನಡುವೆ ಗೋಮಾಂಸ ಭಕ್ಷಕರನ್ನು ಕರೆತಂದು ಮಠದ ಆವರಣದ ಒಳಗೆ ನಮಾಜ್ ಅವಕಾಶ ನೀಡಿರುವುದರ ಬಗ್ಗೆ ಮಾತನಾಡಿದ ಸ್ವಾಮೀಜಿವರು, "ಮುಸ್ಲಿಮರು ಗೋಮಾಂಸ ಭಕ್ಷಣೆ ಮಾಡುತ್ತಿದ್ದಾರೆ. ಅವರಂಥೆಯೇ ಕೆಲವೊಂದು ಹಿಂದೂಗಳು ಕೂಡ ಮಾಡುತ್ತಿದ್ದಾರೆ. ನಾವು ಕೇವಲ ಅವರಲ್ಲಿ ಗೋಮಾಂಸ ತಿನ್ನಬೇಡಿ ಎಂಬ ವಿನಂತಿ ಮಾಡಬಹುದೇ ವಿನಃ ಅದನ್ನೇ ಅವರ ಮೇಲೆ ಹೇರಲು ಸಾಧ್ಯವಿಲ್ಲ," ಎಂದರು.
"ಮುಸ್ಲಿಂ ಸಮುದಾಯ ಕೂಡ ಹಲವಾರು ಬಾರಿ ಕೃಷ್ಣ ಮಠದ ಪರವಾಗಿ ನಿಂತಿದೆ. ಉಡುಪಿ ಚಲೋ ಸಮಯದಲ್ಲಿ ಮಠಕ್ಕೆ ಮುತ್ತಿಗೆ ಹಾಕುವ ಬೆದರಿಕೆ ಒಡ್ಡಿದಾಗ ಮುಸ್ಲಿಂ ಸಮುದಾಯ ಮಠದ ಬೆಂಬಲಕ್ಕೆ ನಿಂತಿದ್ದರು. ಅಲ್ಲದೆ ಪರ್ಯಾಯ ಸಂದರ್ಭದಲ್ಲಿ ಅವರ ಸೇವೆ ಶ್ಲಾಘನಾರ್ಹವಾಗಿದೆ. ಅಂತೆಯೆ ರಮ್ಜಾನ್ ಹಬ್ಬದ ಉಪವಾಸದ ಸಮಯದಲ್ಲಿ ಅವರಿಗಾಗಿ ಸೌಹಾರ್ದ ಕೂಟವನ್ನು ನಾವು ಆಯೋಜಿಸಿದ್ದು ಕೇವಲ ನಮ್ಮ ಮತ್ತು ಅವರ ನಡುವೆ ಇರುವ ಅನೋನ್ಯತೆ ಮುಂದುವರೆಯಲಿ ಎಂಬ ಉದ್ದೇಶದಿಂದ ಮಾತ್ರ," ಎಂದು ಸ್ಪಷ್ಟಪಡಿಸಿದ್ದಾರೆ.
ಇದರ ಆಯೋಜನೆಯಿಂದ ಹಿಂದೂ ಧರ್ಮಕ್ಕೆ ಯಾವುದೇ ರೀತಿಯ ಅಪಚಾರವಾಗಿಲ್ಲ ಬದಲಾಗಿ ಹಿಂದೂ ಧರ್ಮದ ಶ್ರೇಷ್ಠತೆ ಹೆಚ್ಚಿದಂತಾಗಿದೆ ಎಂದರು.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications