ಗುರು ಹಾದಿಯಲ್ಲಿ ಶಿಷ್ಯರ ಹೆಜ್ಜೆ; ದಲಿತ ಕೇರಿಗೆ ಪೇಜಾವರ ಶ್ರೀ ಭೇಟಿ
ಉಡುಪಿ, ಡಿಸೆಂಬರ್ 21: ಹಿಂದೂ ಸಮಾಜದಲ್ಲಿದ್ದ ಅಸೃಶ್ಯತೆಯನ್ನು ನಿವಾರಿಸಿ ಸಶಕ್ತ ಸುದೃಢಗೊಳಿಸುವ ನಿಮಿತ್ತ ದೇಶದ ಹಲವೆಡೆ ದಲಿತರ ಕೇರಿಗಳಿಗೆ ಭೇಟಿ ನೀಡಿ ಕ್ರಾಂತಿಕಾರ್ಯ ನಡೆಸಿ ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಪಾದರು ಸಂಚಲನ ಮೂಡಿಸಿದ್ದರು.
ಇದೀಗ ಅವರ ಶಿಷ್ಯ ವಿಶ್ವಪ್ರಸನ್ನ ತೀರ್ಥರೂ ಗುರುವಿನ ದಾರಿಯಲ್ಲಿ ಹೆಜ್ಜೆ ಹಾಕುವ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಭಾನುವಾರ ಉಡುಪಿಯ ಕೊಡವೂರು ಗ್ರಾಮದ ಪಾಳೆಕಟ್ಟೆ ಎಂಬಲ್ಲಿ ದಲಿತರ ಕೇರಿಗೆ ಮೊದಲ ಬಾರಿಗೆ ಭೇಟಿ ನೀಡಿ ಹಿಂದೂ ಸಮಾಜ ಸಂಘಟನೆಗೆ ತಾವೂ ಸಿದ್ಧ ಎಂದಿದ್ದಾರೆ.
ಅಯೋಧ್ಯೆ ರಾಮ ಮಂದಿರ ನಿರ್ಮಾಣವನ್ನು ಮುಂದಿಟ್ಟುಕೊಂಡು ಮತ್ತೊಮ್ಮೆ ಭಾರತದಲ್ಲಿ ಹಿಂದೂ ಸಮಾಜವನ್ನು ಸಂಘಟನಾತ್ಮಕವಾಗಿ ಸಶಕ್ತ ಮತ್ತು ಸುದೃಢಗೊಳಿಸಬೇಕಾಗಿದೆ. ಈ ಆಶಯದೊಂದಿಗೆ ಸುಮಾರು 120 ಮನೆಗಳನ್ನು ಹೊಂದಿರುವ ಕೇರಿಗೆ ಭೇಟಿ ನೀಡಿದರು. ದಲಿತ ಬಂಧುಗಳಲ್ಲಿ ಹಿಂದವಃ ಸೋದರಾ ಸರ್ವೇ ಎಂಬ ಗುರು ವಿಶ್ವೇಶತೀರ್ಥ ಸಂದೇಶದಂತೆ ವಿಶ್ವಾಸ ತುಂಬಿದರು.
ಸ್ವಾಮೀಜಿಗಳು ಆಗಮಿಸುವ ಬಗ್ಗೆ ಸ್ಥಳೀಯ ನಗರಸಭಾ ಸದಸ್ಯ ಮತ್ತು ಸಂಘ ಪರಿವಾರದ ಸ್ವಯಂ ಸೇವಕ ವಿಜಯ ಕೊಡವೂರು ಮತ್ತು ಸಾಮಾಜಿಕ ಕಾರ್ಯಕರ್ತ ವಾಸುದೇವ ಭಟ್ ಪೆರಂಪಳ್ಳಿ ಎರಡು ದಿನಗಳ ಮೊದಲೇ ಕೇರಿಗೆ ಭೇಟಿ ನೀಡಿ ಮಾಹಿತಿ ನೀಡಿದ್ದರು.

ಕುಶಲೋಪರಿ ನಡೆಸಿದ ಸ್ವಾಮೀಜಿ
ಉತ್ಸಾಹ ಮತ್ತು ಸಂತೋಷದಿಂದ ನಿವಾಸಿಗಳು ರಸ್ತೆಗಳಲ್ಲಿ ತಳಿರು, ತೋರಣ, ರಂಗೋಲಿ ಹಾಕಿ ಸಿಂಗರಿಸಿದ್ದರು. ಸಾಮೂಹಿಕ ಭಜನೆಯೊಂದಿಗೆ ಶ್ರೀಗಳನ್ನು ಬರಮಾಡಿಕೊಂಡರು. ಬಳಿಕ ಅಲ್ಲಿನ ಮೂರು ಮನೆಗಳಿಗೆ ಭೇಟಿ ನೀಡಿ ರಾಮದೀಪಗಳನ್ನು ಬೆಳಗಿಸಿ ಮನೆ ಮಂದಿಯೊಂದಿಗೆ ಕುಶಲೋಪರಿ ನಡೆಸಿದ ಸ್ವಾಮೀಜಿಗಳು ಶ್ರೀರಾಮ ಜಯರಾಮ ಜಯಜಯರಾಮ ಮಂತ್ರದೀಕ್ಷೆ ಕೊಟ್ಟು ನಿತ್ಯ ಶುದ್ಧ ಮನಸ್ಸಿನಿಂದ ಈ ಮಂತ್ರ ಜಪಿಸುವಂತೆ ತಿಳಿಸಿದರು.

ರಾಮದೀಪ ಬೆಳಗಿಸಲಾಯಿತು
ಮೂರು ಮನೆಯವರು ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳಿಗೆ ಫಲಪುಷ್ಟ ಸಹಿತ ಭಕ್ತಿ ಗೌರವ ಅರ್ಪಿಸಿದರು. ಮಠದ ವತಿಯಿಂದ ಎಲ್ಲಾ ಮನೆಗಳಿಗೆ ದೀಪ ಒದಗಿಸಿ ರಾಮದೀಪ ಬೆಳಗಿಸಲಾಯಿತು. ಅಲ್ಲಿಂದ ಬಡಾವಣೆಯ ಶ್ರೀ ಮೂಕಾಂಬಿಕಾ ಭಜನಾ ಮಂದಿರಕ್ಕೆ ಬಂದು ಶ್ರೀ ದೇವಿಯ ಮುಂಭಾಗದಲ್ಲಿ ದೀಪ ಹಚ್ಚಿ ಮಂಗಳಾರತಿ ಬೆಳಗಲಾಯಿತು.

ಸ್ವಾಮೀಜಿಗಳ ಸಂದೇಶ
ಸಮಸ್ತ ನಿವಾಸಿಗಳಿಗೆ ಸಂದೇಶ ನೀಡಿದ ವಿಶ್ವಪ್ರಸನ್ನ ಸ್ವಾಮೀಜಿ, "ರಾಮಮಂದಿರ ನಿರ್ಮಾಣ ಕಾರ್ಯಕ್ಕೆ ಸಮಸ್ತ ಹಿಂದೂ ಸಮಾಜದ ಸಹಕಾರ ಸಹಭಾಗಿತ್ವ ಪಡೆಯಲು ಎಲ್ಲ ಸ್ತರಗಳ ಹಿಂದೂ ಬಂಧುಗಳನ್ನು ಭೇಟಿಯಾಗುತ್ತಿದ್ದೇವೆ. ಅದರಂತೆ ಇಲ್ಲಿಗೆ ಆಗಮಿಸಿದ್ದೇವೆ. ಮಂದಿರ ನಿರ್ಮಾಣ ಕಾರ್ಯ ನಿರ್ವಿಘ್ನವಾಗಿ ನಡೆದು ಇಡೀ ದೇಶಕ್ಕೆ ರಾಮನ ಕೃಪೆಯಾಗಿ ಶಾಂತಿ, ಸುಭಿಕ್ಷೆ, ಸಮೃದ್ಧಿ ನೆಲೆಸಲು ನಾವೆಲ್ಲ ಪ್ರತಿನಿತ್ಯ ಮನೆಮನೆಗಳಲ್ಲಿ ರಾಮನಿಗಾಗಿ ದೀಪ ಬೆಳಗಿ ರಾಮಂತ್ರ ಜಪ, ರಾಮ ಭಜನೆ ನಡೆಸಬೇಕು" ಎಂದು ಕರೆ ನೀಡಿದರು.
Recommended Video

ಮಠವನ್ನು ಮುನ್ನಡೆಸುತ್ತಿದ್ದಾರೆ
ವಿಜಯ್ ಕೊಡವೂರು ಮಾತನಾಡಿ, "ವಿಶ್ವೇಶ ತೀರ್ಥ ಶ್ರೀಗಳು ವಿಧಿವಶರಾಗಿ ವರ್ಷ ತುಂಬುವ ಮೊದಲು ಶ್ರೀ ಮಠದ ಎಲ್ಲಾ ಜವಾಬ್ದಾರಿಗಳನ್ನು ವಿಶ್ವಪ್ರಸನ್ನ ಶ್ರೀಗಳು ವಹಿಸಿಕೊಂಡು, ಹಿರಿಯ ಗುರುಗಳ ಸಾಮಾಜಿಕ ಕಾರ್ಯಗಳನ್ನು ಮುಂದುವರೆಸುತ್ತಿದ್ದಾರೆ" ಎಂದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications