ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಪೇಜಾವರ ಶ್ರೀ
ಉಡುಪಿ, ನವೆಂಬರ್.24: ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಉಡುಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಒಂದು ವರ್ಷದ ಒಳಗೆ ರಾಮ ಮಂದಿರ ಆಗಬೇಕು. ಈ ಬಗ್ಗೆ ಸುಪ್ರೀಂ ಕೋರ್ಟ್ ಜನಾಭಿಪ್ರಾಯದಂತೆ ಶೀಘ್ರ ತೀರ್ಮಾನಿಸಲಿ. ಎಲ್ಲದಕ್ಕೂ ನ್ಯಾಯಾಲಯವನ್ನು ಕಾಯುವುದಕ್ಕೆ ಸಾಧ್ಯವಿಲ್ಲ. ಕೇಂದ್ರ ಸರ್ಕಾರ ದಿಟ್ಟ ನಿರ್ಧಾರ ತೆಗೆದುಕೊಳ್ಳಲಿ.
ಶ್ರೀ ರಾಮ ಮಂದಿರ ನಿರ್ಮಾಣದ ಕುರಿತು ದೃಢ ನಿರ್ಧಾರ ತೆಗೆದುಕೊಂಡರೆ ಕೇಂದ್ರ ಸರ್ಕಾರಕ್ಕೂ ಅನುಕೂಲವಾಗಲಿದೆ. ಮೋದಿ ಸರ್ಕಾರಕ್ಕೆ ಸಂಪೂರ್ಣ ಬಹುಮತವಿದೆ. ವಾಜಪೇಯಿ ಸರ್ಕಾರಕ್ಕಿಂತ ಹೆಚ್ಚು ಬಹುಮತ ಮೋದಿ ಅವರ ಸರಕಾರಕ್ಕಿದೆ. ಮಂದಿರ ವಿಚಾರದಲ್ಲಿ ವಿಪಕ್ಷ ಕಾಂಗ್ರೆಸ್ ಈಗ ವಿರೋಧ ಮಾಡಲಿಕ್ಕಿಲ್ಲ.

ಚುನಾವಣೆ ಹತ್ತಿರ ಇರುವುದರಿಂದ ಯಾರೂ ವಿರೋಧ ಮಾಡಲಿಕ್ಕಿಲ್ಲ. ವಿರೋಧ ಮಾಡುವ ಧೈರ್ಯ ಯಾರಿಗೂ ಇಲ್ಲ ಎಂದು ಶ್ರೀಗಳು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
ರಾಮ ಮಂದಿರ ವಿಚಾರದಲ್ಲಿ ಕಾಂಗ್ರೆಸ್ ತಟಸ್ಥವಾಗಿ ಎಲ್ಲವನ್ನೂ ನೋಡುತ್ತಿದೆ. ಮಂದಿರ ವಿಚಾರವನ್ನು ಕಾಂಗ್ರೆಸ್ ವಿರೋಧಿಸಲೂ ಹೋಗುತ್ತಿಲ್ಲ. ಮಂದಿರ ನಿರ್ಮಾಣಕ್ಕೆ ಈಗ ಅನುಕೂಲವಾದ ವಾತಾವರಣವಿದೆ. ಕಾಂಗ್ರೆಸ್ ವಿರೋಧಿಸಿದರೆ ಪಕ್ಷಕ್ಕೆ ಪ್ರತಿಕೂಲ ಆಗಬಹುದು.

ರಾಮಮಂದಿರ ಒಂದು ಭಾವನಾತ್ಮಕ ವಿಚಾರ. ನಾಲ್ಕೂವರೆ ವರ್ಷ ಆಯ್ತು. ಇನ್ನು ಮಂದಿರ ಆಗಿಲ್ಲ. ನಾವು ಕಾದಿದ್ದೇವೆ, ಈಗ ಒತ್ತಾಯ ಮಾಡುತ್ತಿದ್ದೇವೆ.
ಅಯೋಧ್ಯೆ ರಾಮ ಮಂದಿರ ನಿರ್ಮಾಣ ವಿಚಾರದಲ್ಲಿ ಸಮಸ್ಯೆ ಬಗೆಹರಿಸಲು ಮೂರು ಮಾರ್ಗಗಳಿವೆ. ಸಂಯುಕ್ತ ಅಧಿವೇಶನದ ಮೂಲಕ ಸಮಸ್ಯೆ ಬಗೆಹರಿಸಬಹುದು.ಇನ್ನೊಂದು ಲೋಕಸಭೆ- ರಾಜ್ಯಸಭೆ ಅಧಿವೇಶನದಲ್ಲಿ ತೀರ್ಮಾನಿಸಬಹುದು. ಮೂರನೆಯದಾಗಿ ಮಂದಿರ ವಿಚಾರದಲ್ಲಿ ಕೇಂದ್ರ ಸರ್ಕಾರ ಸುಗ್ರಿವಾಜ್ಞೆಯನ್ನು ಹೊರಡಿಸಲಿ.
ಮಂದಿರ ವಿಚಾರವನ್ನು ನಾವು ಚುನಾವಣೆ ಸಂದರ್ಭದಲ್ಲಿ ಮಾತ್ರ ಚರ್ಚೆ ಮಾಡುತ್ತಿಲ್ಲ. ಸಂತರಿಗೆ ಚುನಾವಣೆಯ ಯಾವುದೇ ಅಗತ್ಯವಿಲ್ಲ. ಚುನಾವಣೆ ನಂತರ ಮುಂದೇನು ಎಂಬ ಪರಿಸ್ಥಿತಿ ಗೊತ್ತಿಲ್ಲ. ಈಗಲೇ ಮಂದಿರ ನಿರ್ಮಾಣ ಮಾಡಿ ಎಂದು ಪೇಜಾವರ ಶ್ರೀ ಕೇಂದ್ರ ಸರಕಾರವನ್ನು ಒತ್ತಾಯಿಸಿದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications