ಕ್ಯಾನ್ಸರ್ ಗುಣಪಡಿಸುವ ಹಾಲೆ ತೊಗಟಿಯ ಕಷಾಯಕ್ಕೆ ಭಾರೀ ಬೇಡಿಕೆ
Recommended Video

ಉಡುಪಿ, ಆಗಸ್ಟ್ 11 : ಉಡುಪಿಯೆಲ್ಲೆಡೆ ಶನಿವಾರ ಆಟಿ ಅಮವಾಸ್ಯೆಯ ಸಡಗರ... ಆಷಾಢ ಮಾಸದ ಅಮವಾಸ್ಯೆಯಾದ ಇಂದು ಹಾಲೆ ಮರಕ್ಕೆ ಎಲ್ಲಿಲ್ಲದ ಡಿಮ್ಯಾಂಡ್; ಹೌದು...ರೋಗ ನಿರೋಧಕ ಶಕ್ತಿ ಕೊಡುವ ಹಾಲೆ ಮರದ ತೊಗಟೆಯ ಕಷಾಯವನ್ನು ಈ ದಿನ ಕುಡಿದರೆ ಆರೋಗ್ಯಕ್ಕೆ ಒಳ್ಳೆಯದು ಎಂಬ ನಂಬಿಕೆ ಕರಾವಳಿಯಲ್ಲಿದೆ.
ಈ ಹಿನ್ನೆಲೆಯಲ್ಲಿ ಇಂದು ಮುಂಜಾನೆಯಿಂದಲೇ ಶ್ರದ್ದಾಳುಗಳು ಹಾಲೆ ಮರದ ಬಳಿ ಜಮಾಯಿಸಿದ ದೃಶ್ಯ ಕಂಡುಬಂತು. ಆಯುರ್ವೇದದಲ್ಲಿ ಸಪ್ತಪರ್ಣ ಎಂದು ಕರೆಸಿಕೊಳ್ಳುವ ಹಾಲೆ ಮರ, ಅನೇಕ ಔಷಧೀಯ ಗುಣಗಳನ್ನು ಹೊಂದಿದೆ. ಹೀಗಾಗಿ ಆಟಿ ಅಮವಾಸ್ಯೆ ದಿನ ಈ ಮರದ ತೊಗಟೆಯ ಕಷಾಯ ಸೇವಿಸುವುದು ಕರಾವಳಿಯಲ್ಲಿ ಅನೂಚಾನವಾಗಿ ನಡೆದುಕೊಂಡು ಬಂದಿದೆ.
ಮಳೆಯನ್ನೂ ಲೆಕ್ಕಿಸದ ಕರಾವಳಿಯ ಮಂದಿ ಹಾಲೆ ಮರದ ತೊಗಟೆ ಸೀಳಿ ಅದರಿಂದ ಕಷಾಯ ಮಾಡಿ ತಾವೂ ಕುಡಿಯುವುದರಿಂದಿಗೆ ನೆರೆಹೊರೆಯವರಿಗೂ ನೀಡುತ್ತಾರೆ. ತೊಗಟೆಯನ್ನು ನೀರು ಮಿಶ್ರ ಮಾಡಿ ಜಜ್ಜಿ ಅದರಿಂದ ರಸ ತೆಗೆಯಲಾಗುತ್ತದೆ. ಕೆಲವರು ಈ ರಸವನ್ನು ಹೀಗೇ ಕುಡಿದರೆ ಇನ್ನೂ ಕೆಲವರು ಹಾಲೆ ರಸಕ್ಕೆ ಜೀರಿಗೆ, ಬೆಳ್ಳುಳ್ಳಿ, ಅರಿಶಿನ ಮಿಶ್ರ ಮಾಡಿ ಕುಡಿಯುತ್ತಾರೆ.

ಹಾಲೆ ರಸಕ್ಕೆ ವ್ಯಾಧಿಕ್ಷಮತ್ವ ಹೆಚ್ಚಿಸುವ ಗುಣ, ವೈರಾಣು ನಿರೋಧಕ, ಕ್ಯಾನ್ಸರ್ ಗಡ್ಡೆ ಗಾತ್ರ ಕಡಿಮೆ ಮಾಡುವ ಗುಣ, ಅತಿಸಾರ ನಿರೋಧಕ, ಜ್ವರತಾಪ ಕಡಿಮೆ ಮಾಡುವ ಗುಣ ಸಹಿತ ಅನೇಕ ಪ್ರಯೋಜನಗಳಿವೆ ಎಂಬುದು ವೈಜ್ಞಾನಿಕವಾಗಿಯೂ ಧೃಡಪಟ್ಟಿದೆ.
ಆಷಾಢ-ಶ್ರಾವಣ ಮಾಸಪೂರ್ತಿ ಹಾಲೆ ಮರದಲ್ಲಿ ಗರಿಷ್ಠ ಗುಣಕಾರತ್ವವಿದೆ ಎಂಬ ಕಾರಣಕ್ಕೆ ಅಮವಾಸ್ಯೆಯಂದು ಇದರ ಕಷಾಯ ಸೇವಿಸುವ ಪದ್ಧತಿ ಉಡುಪಿ ಜಿಲ್ಲೆ ಸಹಿತ ಕರಾವಳಿಯಲ್ಲಿ ಚಾಲ್ತಿಯಲ್ಲಿದೆ.
ಉಡುಪಿ ತುಳುಕೂಟದ ವತಿಯಿಂದ ಆಟಿ ಅಮವಾಸ್ಯೆ ಅಂಗವಾಗಿ ಆಟಿ ಕಷಾಯ ವಿತರಣೆ ಕಾರ್ಯಕ್ರಮ ಉಡುಪಿಯಲ್ಲಿ ನಡೆಯಿತು. ತುಳುಕೂಟದೊಂದಿಗೆ ಎಸ್ ಡಿಎಂ ಆಯುರ್ವೇದ ಸಂಸ್ಥೆ ಕೂಡಾ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿತ್ತು. ನೂರಾರು ಜನರು ಔಷಧೀಯ ಗುಣವುಳ್ಳ ಆಟಿ ಕಷಾಯವನ್ನು ಸೇವಿಸಿ ಮೆಂತೆ ಗಂಜಿಯನ್ನು ಸವಿದರು.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications