ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸ್ವಿಮ್ಮಿಂಗ್ ಪೂಲ್ ಆದ ರಸ್ತೆ: ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಕಾರು ತಡೆದು ಜನರಿಂದ ಕ್ಲಾಸ್!

By ಉಡುಪಿ ಪ್ರತಿನಿಧಿ
|
Google Oneindia Kannada News

ಉಡುಪಿ, ಆಗಸ್ಟ್‌ 08: ಕಳೆದ ಬಹಳಷ್ಟು ವರ್ಷಗಳಿಂದ ಅವೈಜ್ಞಾನಿಕ ಕಾಮಗಾರಿಯಿಂದಾಗಿ ಮಳೆ ಬಂದರೆ ಈಜುಕೊಳದಂತಾಗುವ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ಜನರ ಸಹನೆ ಇಂದು ಕಟ್ಟೆ ಒಡೆದಿತ್ತು. ಅದೇ ರಸ್ತೆಯಲ್ಲಿ ಬರುತ್ತಿದ್ದ ಮೀನುಗಾರಿಕೆ, ಬಂದರು‌ ಮತ್ತು‌ ಮುಜರಾಯಿ ಸಚಿವರನ್ನು ತಡೆದ ಸ್ಥಳೀಯರು ಚೆನ್ನಾಗಿ ಕ್ಲಾಸ್ ತೆಗೆದುಕೊಂಡ ಪ್ರಸಂಗ ನಡೆಯಿತು.

Recommended Video

Kerala Rains : ವರುಣನ ಅಬ್ಬರಕೆ ಬೆಚ್ಚಿಬಿದ್ದ ದೇವರ ನಾಡು | Oneindia Kannada

ಪ್ರತೀ ಮಳೆಗೂ ಕುಂದಾಪುರದ ಬಸ್ರೂರು ಮೂರುಕೈ ಜಂಕ್ಷನ್ ಬಳಿ ರಸ್ತೆಯಲ್ಲಿ ನೀರು ನಿಂತು ಟ್ರಾಫಿಕ್ ಜಾಮ್ ಆಗುವುದು ಸಾಮಾನ್ಯ. ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಹೆದ್ದಾರಿ ಅಕ್ಷರಶಃ ಈಜುಕೊಳವಾಗಿ ಪರಿವರ್ತನೆ ಆಗಿದೆ. ಇಂದು ಸಚಿವ ಕೋಟ ಶ್ರೀನಿವಾಸ್ ಪೂಜಾರಿಯವರು ಇದೇ ರಸ್ತೆಯಾಗಿ ಬರುತ್ತಿದ್ದರು. ಇದನ್ನು ಗಮನಿಸಿದ ಸ್ಥಳೀಯರು, ಆಟೋ ಚಾಲಕರು ಮತ್ತು ಹೆದ್ದಾರಿ ಹೋರಾಟ ಸಮಿತಿಯವರು ಸಚಿವರ ಕಾರು ತಡೆದು ತರಾಟೆಗೆ ತೆಗೆದುಕೊಂಡಿದ್ದಾರೆ. ಇದರಿಂದ ತಬ್ಬಿಬ್ಬಾದ ಸಚಿವರು ಕಾರಿನಿಂದ ಕೆಳಗಿಳಿದು ಕೆಲಕಾಲ ಜನರ ಸಮಸ್ಯೆಯನ್ನು ಆಲಿಸಿದರು.

ತುಂಬಿ ಹರಿಯುತ್ತಿರುವ ಮೂಲೆಹೊಳೆ ಹಳ್ಳ; ಕೇರಳ-ಕರ್ನಾಟಕ ಸಂಚಾರ ಬಂದ್ತುಂಬಿ ಹರಿಯುತ್ತಿರುವ ಮೂಲೆಹೊಳೆ ಹಳ್ಳ; ಕೇರಳ-ಕರ್ನಾಟಕ ಸಂಚಾರ ಬಂದ್

Udupi: People Stopped Kota Srinivasa Pujari Car And Explained Road Problem

ಕುಂದಾಪುರದಲ್ಲಿ ಕಾರ್ಯಕ್ರಮ ಮುಗಿಸಿ ಉಡುಪಿ ಕಡೆಗೆ ತೆರಳುತ್ತಿದ್ದ ಸಚಿವರು, ಯಾಕಾದರೂ ಈ ರಸ್ತೆಯಲ್ಲಿ ಬಂದೆನೋ ಎಂದು ಪೇಚಾಡುವಂತಾಯಿತು. ಜನರ ಆಕ್ರೋಶ ಕಂಡು ತಕ್ಷಣ ಜಿಲ್ಲಾಧಿಕಾರಿಗೆ ಕರೆ ಮಾಡಿ ಮಾತನಾಡಿದರು. ಸಮಸ್ಯೆಯನ್ನು ಶೀಘ್ರ ಪರಿಹರಿಸುವಂತೆ ಡಿಸಿಗೆ ಸೂಚನೆ ನೀಡಿ ಜನರನ್ನು ಸಮಾಧಾನಿಸಿ ಕಾರು ಹತ್ತಿದರು.

English summary
Kundapura road will become swimming pool in rainy season due to unscientic construction. Today people stopped minister kota srinivasa pujari car and explained their problem,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X