ನನ್ನ ಮೇಲೆ ತನ್ವೀರ್ ಸೇಠ್ ಅವರಿಗೆ ಪ್ರೀತಿ ಜಾಸ್ತಿ : ಯು.ಟಿ.ಖಾದರ್
ಉಡುಪಿ, ಜೂನ್ 14 : 'ನನ್ನ ಮೇಲೆ ತನ್ವೀರ್ ಸೇಠ್ ಅವರಿಗೆ ಪ್ರೀತಿ ಜಾಸ್ತಿ. ಆದ್ದರಿಂದ ಹೀಗೆ ಮಾತನಾಡುತ್ತಾರೆ. ನಾನು ಯಾರ ಸಚಿವ ಸ್ಥಾನಕ್ಕೂ ಕಲ್ಲು ಹಾಕಿಲ್ಲ' ಎಂದು ವಸತಿ ಸಚಿವ ಯು.ಟಿ.ಖಾದರ್ ಹೇಳಿದರು.
ಗುರುವಾರ ಉಡುಪಿಯಲ್ಲಿ ಮಾತನಾಡಿದ ಅವರು, 'ಖಾದರ್ ಮತ್ತು ಜಮೀರ್ ನಾಲಾಯಕ್' ಎಂಬ ಮಾಜಿ ಸಚಿವ ತನ್ವೀರ್ ಸೇಠ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು.
'ಮುಸ್ಲಿಂ ಸಮುದಾಯ ಯಾರೊಬ್ಬರ ಕಿಸೆಯಲ್ಲಿಲ್ಲ. ಈ ಹಿಂದೆ ಎರಡೂ ಖಾತೆಗಳನ್ನು ಕಪ್ಪುಚುಕ್ಕೆ ಇಲ್ಲದೆ ನಿಭಾಯಿಸಿದ್ದೇನೆ. ಪಕ್ಷದ ಹೈಕಮಾಂಡ್ ಸೂಕ್ತ ನಿರ್ಧಾರ ಕೈಗೊಳ್ಳುತ್ತದೆ. ಶಾಸಕನಾಗಿ, ಮಂತ್ರಿಯಾಗಿ ನಾನು ಸಮುದಾಯ ನೋಡದೇ ಕೆಲಸ ಮಾಡಿದ್ದೇನೆ' ಎಂದು ಖಾದರ್ ಹೇಳಿದರು.
'ನಾಲಾಯಕ್ ಯಾರು? ಎಂದು ಜನರು ತೀರ್ಮಾನ ಮಾಡುತ್ತಾರೆ. ಪಕ್ಷದ ಹೈಕಮಾಂಡ್ಗೆ ನಮ್ಮ ಸಾಮರ್ಥ್ಯ ಗೊತ್ತಿದೆ' ಎಂದು ತನ್ವೀರ್ ಸೇಠ್ ಹೇಳಿಕೆಗೆ ತಿರುಗೇಟು ನೀಡಿದರು.

ನಮ್ಮ ಕುಟುಂಬ ಸದಸ್ಯರು : 'ಎಚ್.ಕೆ ಪಾಟೀಲ್, ಎಂ.ಬಿ ಪಾಟೀಲ್ ನಮ್ಮ ಕುಟುಂಬ ಸದಸ್ಯರು. ರಾಜಕೀಯದಲ್ಲಿ ಇಂತಹ ಸಮಸ್ಯೆಗಳು ಸಾಮಾನ್ಯ. ರಾಜಕೀಯ ಅಂದ ಮೇಲೆ ಇದನ್ನೆಲ್ಲಾ ಎದುರಿಸಬೇಕು' ಎಂದು ಕಂದಾಯ ಸಚಿವ ಆರ್.ವಿ. ದೇಶಪಾಂಡೆ ಹೇಳಿದರು.
ಉಡುಪಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದೊಳಗಿನ ಭಿನ್ನಮತದ ಬಗ್ಗೆ ಮಾತನಾಡಿದರು. 'ಮಂತ್ರಿಸ್ಥಾನ ಅಪೇಕ್ಷೆ ಮಾಡುವುದು ತಪ್ಪಲ್ಲ. ಮನೆಯ ಸಮಸ್ಯೆಯನ್ನು ಮನೆಯೊಳಗೆ ಬಗೆಹರಿಸುತ್ತೇವೆ. ಮಾಧ್ಯಮಗಳು ಅನಾವಶ್ಯಕವಾಗಿ ತಲೆಕೆಡಿಸಿಕೊಳ್ಳಬೇಡಿ' ಎಂದು ಸಲಹೆ ನೀಡಿದರು.
ಮಳೆ ಹಾನಿ ಪ್ರದೇಶಕ್ಕೆ ಭೇಟಿ : ಉಡುಪಿ ಜಿಲ್ಲೆಯ ವಿವಿಧ ಭಾಗಗಳಲ್ಲಿ ಕಳೆದ ವಾರ ಭಾರೀ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಗುರುವಾರ ಭೇಟಿ ನೀಡಿದರು. ಉದ್ಯಾವರ ಗ್ರಾಮದಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಕ್ಕೆ ಭೇಟಿ ನೀಡಿ ಜನರ ಜೊತೆ ಮಾತುಕತೆ ನಡೆಸಿದರು.
ಸಿಐಡಿ ತನಿಖೆಗೆ : ದನದ ವ್ಯಾಪಾರಿ ಹುಸೈನಬ್ಬ ಸಂಶಯಾಸ್ಪದ ಸಾವಿನ ಪ್ರಕರಣದ ತನಿಖೆಯನ್ನು ಸರ್ಕಾರ ಸಿಐಡಿಗೆ ವಹಿಸಿದೆ. ಮೇ 30 ರಂದು ಉಡುಪಿಯ ಪೆರ್ಡೂರು ಸಮೀಪ ದನದ ವ್ಯಾಪಾರಿ ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ 11 ಆರೋಪಿಗಳನ್ನು ಬಂಧಿಸಲಾಗಿದೆ.
ಮಂಗಳೂರಿನ ಜೋಕಟ್ಟೆಯ ದನದ ವ್ಯಾಪಾರಿ ಹುಸೈನಬ್ಬ ಮೇಲೆ ಪೊಲೀಸರ ಸಮ್ಮುಖದಲ್ಲೇ ಹಲ್ಲೇ ನಡೆದಿತ್ತು. ಬಳಿಕ ಹುಸೈನಬ್ಬ ಪೊಲೀಸರ ಜೀಪ್ನಲ್ಲಿಯೇ ಮೃತಪಟ್ಟಿದ್ದರು. ಮಾರಣಾಂತಿಕ ಹಲ್ಲೆ ನಡೆಸಿ ಸಾವಿಗೆ ಕಾರಣರಾದ 8 ಮಂದಿ ಭಜರಂಗದಳ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದರು.
-
2025ರ ದ್ವಿತೀಯ PUC ಪರೀಕ್ಷೆಯಲ್ಲಿ ವಿಜ್ಞಾನ, ವಾಣಿಜ್ಯ, ಕಲಾ ವಿಭಾಗದಲ್ಲಿ ಮಿಂಚಿದ ಪ್ರತಿಭೆಗಳು; ಇಲ್ಲಿದೆ ಟಾಪರ್ಗಳ ಪಟ್ಟಿ -
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Gold Rate April 9: ಚಿನ್ನ - ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ: ಬಂಗಾರ ಖರೀದಿದಾರರಿಗೆ ಸಂತೋಷದ ಸುದ್ದಿ -
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
Dhurandhar-2 OTT: ನೆಟ್ಫ್ಲಿಕ್ಸ್ ಅಲ್ಲ, ಈ ಒಟಿಟಿಯಲ್ಲಿ 'ಧರಂಧರ-2' ಅಬ್ಬರ, ಯಾವಾಗ? -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ "ರಾಗಿ' ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್ -
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
PUC Results: 2026ರ ದ್ವಿತೀಯ PUC ಪರೀಕ್ಷೆ ಫಲಿತಾಂಶ ಪ್ರಕಟ, ಇವರೇ ನೋಡಿ ಟಾಪರ್












Click it and Unblock the Notifications