ನನ್ನ ಮೇಲೆ ತನ್ವೀರ್ ಸೇಠ್ ಅವರಿಗೆ ಪ್ರೀತಿ ಜಾಸ್ತಿ : ಯು.ಟಿ.ಖಾದರ್
ಉಡುಪಿ, ಜೂನ್ 14 : 'ನನ್ನ ಮೇಲೆ ತನ್ವೀರ್ ಸೇಠ್ ಅವರಿಗೆ ಪ್ರೀತಿ ಜಾಸ್ತಿ. ಆದ್ದರಿಂದ ಹೀಗೆ ಮಾತನಾಡುತ್ತಾರೆ. ನಾನು ಯಾರ ಸಚಿವ ಸ್ಥಾನಕ್ಕೂ ಕಲ್ಲು ಹಾಕಿಲ್ಲ' ಎಂದು ವಸತಿ ಸಚಿವ ಯು.ಟಿ.ಖಾದರ್ ಹೇಳಿದರು.
ಗುರುವಾರ ಉಡುಪಿಯಲ್ಲಿ ಮಾತನಾಡಿದ ಅವರು, 'ಖಾದರ್ ಮತ್ತು ಜಮೀರ್ ನಾಲಾಯಕ್' ಎಂಬ ಮಾಜಿ ಸಚಿವ ತನ್ವೀರ್ ಸೇಠ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು.
'ಮುಸ್ಲಿಂ ಸಮುದಾಯ ಯಾರೊಬ್ಬರ ಕಿಸೆಯಲ್ಲಿಲ್ಲ. ಈ ಹಿಂದೆ ಎರಡೂ ಖಾತೆಗಳನ್ನು ಕಪ್ಪುಚುಕ್ಕೆ ಇಲ್ಲದೆ ನಿಭಾಯಿಸಿದ್ದೇನೆ. ಪಕ್ಷದ ಹೈಕಮಾಂಡ್ ಸೂಕ್ತ ನಿರ್ಧಾರ ಕೈಗೊಳ್ಳುತ್ತದೆ. ಶಾಸಕನಾಗಿ, ಮಂತ್ರಿಯಾಗಿ ನಾನು ಸಮುದಾಯ ನೋಡದೇ ಕೆಲಸ ಮಾಡಿದ್ದೇನೆ' ಎಂದು ಖಾದರ್ ಹೇಳಿದರು.
'ನಾಲಾಯಕ್ ಯಾರು? ಎಂದು ಜನರು ತೀರ್ಮಾನ ಮಾಡುತ್ತಾರೆ. ಪಕ್ಷದ ಹೈಕಮಾಂಡ್ಗೆ ನಮ್ಮ ಸಾಮರ್ಥ್ಯ ಗೊತ್ತಿದೆ' ಎಂದು ತನ್ವೀರ್ ಸೇಠ್ ಹೇಳಿಕೆಗೆ ತಿರುಗೇಟು ನೀಡಿದರು.

ನಮ್ಮ ಕುಟುಂಬ ಸದಸ್ಯರು : 'ಎಚ್.ಕೆ ಪಾಟೀಲ್, ಎಂ.ಬಿ ಪಾಟೀಲ್ ನಮ್ಮ ಕುಟುಂಬ ಸದಸ್ಯರು. ರಾಜಕೀಯದಲ್ಲಿ ಇಂತಹ ಸಮಸ್ಯೆಗಳು ಸಾಮಾನ್ಯ. ರಾಜಕೀಯ ಅಂದ ಮೇಲೆ ಇದನ್ನೆಲ್ಲಾ ಎದುರಿಸಬೇಕು' ಎಂದು ಕಂದಾಯ ಸಚಿವ ಆರ್.ವಿ. ದೇಶಪಾಂಡೆ ಹೇಳಿದರು.
ಉಡುಪಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದೊಳಗಿನ ಭಿನ್ನಮತದ ಬಗ್ಗೆ ಮಾತನಾಡಿದರು. 'ಮಂತ್ರಿಸ್ಥಾನ ಅಪೇಕ್ಷೆ ಮಾಡುವುದು ತಪ್ಪಲ್ಲ. ಮನೆಯ ಸಮಸ್ಯೆಯನ್ನು ಮನೆಯೊಳಗೆ ಬಗೆಹರಿಸುತ್ತೇವೆ. ಮಾಧ್ಯಮಗಳು ಅನಾವಶ್ಯಕವಾಗಿ ತಲೆಕೆಡಿಸಿಕೊಳ್ಳಬೇಡಿ' ಎಂದು ಸಲಹೆ ನೀಡಿದರು.
ಮಳೆ ಹಾನಿ ಪ್ರದೇಶಕ್ಕೆ ಭೇಟಿ : ಉಡುಪಿ ಜಿಲ್ಲೆಯ ವಿವಿಧ ಭಾಗಗಳಲ್ಲಿ ಕಳೆದ ವಾರ ಭಾರೀ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಗುರುವಾರ ಭೇಟಿ ನೀಡಿದರು. ಉದ್ಯಾವರ ಗ್ರಾಮದಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಕ್ಕೆ ಭೇಟಿ ನೀಡಿ ಜನರ ಜೊತೆ ಮಾತುಕತೆ ನಡೆಸಿದರು.
ಸಿಐಡಿ ತನಿಖೆಗೆ : ದನದ ವ್ಯಾಪಾರಿ ಹುಸೈನಬ್ಬ ಸಂಶಯಾಸ್ಪದ ಸಾವಿನ ಪ್ರಕರಣದ ತನಿಖೆಯನ್ನು ಸರ್ಕಾರ ಸಿಐಡಿಗೆ ವಹಿಸಿದೆ. ಮೇ 30 ರಂದು ಉಡುಪಿಯ ಪೆರ್ಡೂರು ಸಮೀಪ ದನದ ವ್ಯಾಪಾರಿ ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ 11 ಆರೋಪಿಗಳನ್ನು ಬಂಧಿಸಲಾಗಿದೆ.
ಮಂಗಳೂರಿನ ಜೋಕಟ್ಟೆಯ ದನದ ವ್ಯಾಪಾರಿ ಹುಸೈನಬ್ಬ ಮೇಲೆ ಪೊಲೀಸರ ಸಮ್ಮುಖದಲ್ಲೇ ಹಲ್ಲೇ ನಡೆದಿತ್ತು. ಬಳಿಕ ಹುಸೈನಬ್ಬ ಪೊಲೀಸರ ಜೀಪ್ನಲ್ಲಿಯೇ ಮೃತಪಟ್ಟಿದ್ದರು. ಮಾರಣಾಂತಿಕ ಹಲ್ಲೆ ನಡೆಸಿ ಸಾವಿಗೆ ಕಾರಣರಾದ 8 ಮಂದಿ ಭಜರಂಗದಳ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದರು.
-
ಮಾರ್ಚ್ 20ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಇನ್ಮುಂದೆ KPSC ಮೂಲಕ ಪ್ರತಿ ವರ್ಷ ಗ್ರೂಪ್ A, B ಅಧಿಕಾರಿಗಳ ನೇಮಕಾತಿ: ಕೃಷ್ಣ ಬೈರೇಗೌಡ ಸ್ಪಷ್ಟನೆ -
ಮಾರ್ಚ್ 19ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು












Click it and Unblock the Notifications