ನಾಪತ್ತೆಯಾದ ಸುವರ್ಣ ತ್ರಿಭುಜ ಬೋಟ್ ನಲ್ಲಿದ್ದ ಬಾಕ್ಸ್ ಗಳು ಪತ್ತೆ!
ಉಡುಪಿ ಜನವರಿ 07: ಮಲ್ಪೆ ಬಂದರಿನಿಂದ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಏಳು ಮಂದಿ ಮೀನುಗಾರರು ಹಾಗೂ ಅವರು ತೆರಳಿದ್ದ ಬೋಟ್ ಕಣ್ಮರೆ ಪ್ರಕರಣ ದಿನೇ ದಿನೆ ಜಟಿಲಗೊಳ್ಳುತ್ತಿದೆ. ದಿನ ಕಳೆದಂತೆ ಮೀನುಗಾರರಲ್ಲಿ ಆತಂಕ ಹೆಚ್ಚಿಸುತ್ತಿದೆ. ಮೀನುಗಾರರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಆದರೆ 24 ದಿನವಾದರೂ ಮೀನುಗಾರರ ಅಥವಾ ಬೋಟ್ ನ ಯಾವುದೇ ಸುಳಿವು ಸಿಕ್ಕಿಲ್ಲ.
ನಾಪತ್ತೆಯಾಗಿರುವ ಮೀನುಗಾರರನ್ನು ಪತ್ತೆಹಚ್ಚುವಂತೆ ಒತ್ತಾಯಿಸಿ ನಿನ್ನೆ ಭಾನುವಾರ ಜ.06 ರಂದು ಉಡುಪಿಯಲ್ಲಿ ಕರಾವಳಿ ಕರ್ನಾಟಕದ ಮೀನುಗಾರರು ತೀವ್ರ ಪ್ರತಿಭಟನೆ ಹಮ್ಮಿಕೊಂಡಿದ್ದರು. ಈ ಮಧ್ಯೆ ನಾಪತ್ತೆಯಾದ ಸುವರ್ಣ ತ್ರಿಭುಜ ಬೋಟ್ ನಲ್ಲಿದ್ದ ಬಾಕ್ಸುಗಳು ಎಂದು ಹೇಳಲಾಗುವ ಪ್ಲಾಸ್ಟಿಕ್ ಬಾಕ್ಸ್ ಗಳು ಅರಬ್ಬೀ ಸಮುದ್ರದಲ್ಲಿ ಪತ್ತೆಯಾಗಿವೆ. ಇದು ಮೀನುಗಾರರಲ್ಲಿ ಆತಂಕ ಹೆಚ್ಚುವಂತೆ ಮಾಡಿದೆ.
ಎಸ್.ಟಿ ಎಂದು ಬರೆದಿರುವ ಈ ಬಾಕ್ಸ್ ಗಳು ಸುವರ್ಣ ತ್ರಿಭುಜ ಬೋಟ್ ನದ್ದೇ ಎಂಬುದು ಖಚಿತವಾಗಿಲ್ಲ. ಆದರೆ ಈ ನಿಟ್ಟಿನಲ್ಲೂ ತನಿಖೆ ನಡೆಯುತ್ತಿದೆ.

ಈ ಕುರಿತು ಮಾತನಾಡಿರುವ ಸಂಸದೆ ಶೋಭಾ ಕರಂದ್ಲಾಜೆ, ಬೋಟ್ ನಲ್ಲಿದ್ದ ಮೀನು ತಂಬಿಸಿಡುವ ಪ್ಲಾಸ್ಟಿಕ್ ಬಾಕ್ಸ್ ಗಳು ಮಹಾರಾಷ್ಟ್ರ ಗಡಿಯಲ್ಲಿ ಪತ್ತೆಯಾಗಿರುವುದನ್ನು ಖಚಿತಪಡಿಸಿದ್ದಾರೆ. ಇದು ಸುವರ್ಣ ತ್ರಿಭುಜಕ್ಕೆ ಸೇರಿದ ಬಾಕ್ಸ್ ಗಳು ಎಂದು ನಾಪತ್ತೆಯಾದ ಮೀನುಗಾರನ ಸಹೋದರ ಹೇಳಿದ್ದಾಗಿ ಸಂಸದರು ಹೇಳಿದ್ದಾರೆ.
ಅಷ್ಟೇ ಅಲ್ಲ, ನಾಪತ್ತೆಯಾದ ಬೋಟ್ ಶೋಧಕ್ಕೆ ಕೇಂದ್ರ ಸರಕಾರ ಸಾಕಷ್ಟು ಪ್ರಯತ್ನ ನಡೆಸಿದೆ. ಅವರೆಲ್ಲ ಶೀಘ್ರ ವಾಪಾಸ್ ಬರುವಂತಾಗಲಿ ಎಂದು ವಿಶ್ವಾಸ ವ್ಯಕ್ತಪಡಿಸಿದರು.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications