ಉಡುಪಿ ಚಿನ್ನದಂಗಡಿ ಕಳ್ಳತನ ಪ್ರಕರಣ ನೇಪಾಳದ ಐವರ ಬಂಧನ
ಉಡುಪಿ, ಸೆಪ್ಟೆಂಬರ್ 20: ಚಿನ್ನದಂಗಡಿಯೊಂದರ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ನೇಪಾಳ ಮೂಲದ ಐವರು ಆರೋಪಿಗಳನ್ನು ಉಡುಪಿ ಡಿಸಿಐಬಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಶಿವಸಿಂಗ್ ಬಹದ್ದೂರ್, ಕಮರ್ ಸಿಂಗ್, ರಮೇಶ್ ಸಿಂಗ್ ಪಾರ್ಕಿ, ಹರ್ಕ್ ಬಹದ್ದೂರ್ ಸೌದ್, ಪ್ರೇಮ್ ಬಹದ್ದೂರ್ ಸೌದ್ ಎಂದು ಗುರುತಿಸಲಾಗಿದೆ.

ಉಡುಪಿ ಜಿಲ್ಲೆಯ ಬೈಂದೂರಿನ ಶೀರೂರಿನಲ್ಲಿ ಗೂರ್ಖಾ ಹಾಗೂ ಫಾಸ್ಟ್ ಫುಡ್ ವೃತ್ತಿಗಳನ್ನು ಮಾಡುತ್ತಿದ್ದ ಆರೋಪಿಗಳು ಅಲ್ಲೇ ಸಮೀಪದಲ್ಲಿದ್ದ ಗೋಲ್ಡ್ ಪ್ಯಾಲೇಜ್ ಜ್ಯುವೆಲ್ಲರಿ ಮಳಿಗೆಯಲ್ಲಿ ಕಳೆದ ಏಪ್ರಿಲ್ ತಿಂಗಳಲ್ಲಿ ಕಳವು ನಡೆಸಿದ್ದರು.
ಕಳವು ನಡೆಸಿದ ಆರೋಪಿಗಳು ನೇಪಾಳಕ್ಕೆ ಪರಾರಿಯಾಗಿದ್ದರು. ಕೆಲವು ದಿನಗಳ ಹಿಂದೆ ಆರೋಪಿಗಳು ಮರಳಿ ಬೈಂದೂರಿಗೆ ಬಂದಿದ್ದರು ಎನ್ನಲಾಗಿದೆ . ಈ ಬಗ್ಗೆ ಖಚಿತ ಮಾಹಿತಿ ಪಡೆದ ಉಡುಪಿ ಡಿಸಿಐಬಿ ಪೊಲೀಸರು ಆರೋಪಿಗಳನ್ನು ಬೈಂದೂರು ಪರಿಸರದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತರಿಂದ 1ಲಕ್ಷ 80ಸಾವಿರ ಮೌಲ್ಯದ 3ಕೆಜಿ ಬೆಳ್ಳಿ ಕಾಲು ಚೈನ್ ವಶಪಡಿಸಿಕೊಳ್ಳಲಾಗಿದ್ದು, ಆರೋಪಿಗಳನ್ನು ಹಾಗೂ ಆಭರಣಗಳನ್ನು ಬೈಂದೂರು ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.












Click it and Unblock the Notifications