ಗೃಹ ಸಚಿವರ ಉಸ್ತುವಾರಿ ಜಿಲ್ಲೆಯಲ್ಲೇ ಗಾಂಜಾ ಹಾವಳಿ!
ಉಡುಪಿ, ಮಾರ್ಚ್ 04: ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಉಸ್ತುವಾರಿ ವಹಿಸಿಕೊಂಡಿರುವ ಉಡುಪಿ ಜಿಲ್ಲೆಯು ಮಾದಕ ಪದಾರ್ಥಗಳ ಅಡ್ಡೆಯಾಗಿದೆಯೇ ಎಂಬ ಅನುಮಾನ ಮೂಡಿದೆ.
ಕಾರಣ ಇಲ್ಲಿ ಅವ್ಯಾಹತವಾಗಿ ನಡೆಯುತ್ತಿರೋ ಮಾದಕ ಪದಾರ್ಥಗಳ ಬಳಕೆ. ಉಡುಪಿ ಜಿಲ್ಲೆಯ ಹಲವು ಕಡೆಗಳಲ್ಲಿ ಪೊಲೀಸರು ವ್ಯಾಪಕ ಕಾರ್ಯಾಚರಣೆ ನಡೆಸಿ ಮಾದಕ ಪದಾರ್ಥಗಳನ್ನು ವಶಪಡಿಸಿಕೊಂಡು, ಆರೋಪಿಗಳ ವಿರುದ್ಧ ಕ್ರಮ ಜರುಗಿಸುತ್ತಿದ್ದಾರೆ.

ಕಳೆದ ಕೆಲವು ದಿನಗಳ ಅಂತರದಲ್ಲಿ ವಶಪಡಿಸಿಕೊಂಡಿರುವ 32 ಕೆ.ಜಿ ಗಾಂಜಾವನ್ನು ನಾಶ ಮಾಡಲಾಗಿದೆ. ನಂದಿಕೂರು ಇಂಡಸ್ಟ್ರಿಯಲ್ ವ್ಯಾಪ್ತಿಯಲ್ಲಿ ಪೊಲೀಸರು 32.883 ಕಿಲೋಗ್ರಾಂ ಗಾಂಜಾಕ್ಕೆ ಬೆಂಕಿ ಹಚ್ಚಿ ನಾಶ ಪಡಿಸಿದ್ದಾರೆ.

ಹೆರಾಯಿನ್, ಮಾಫಿನ್, ಚರಾಸ್ ಗಳು ಇದರಲ್ಲಿ ಸೇರಿದೆ.ಗಾಂಜಾ ನಾಶ ಸಂದರ್ಭ ವಿಷಯುಕ್ತ ಅನಿಲ ಬಿಡುಗಡೆಯಾಗುವುದರಿಂದ ಪೊಲೀಸರು ಮುನ್ನೆಚ್ಚರಿಕಾ ಕ್ರಮ ಅನುಸರಿಸಿದ್ದಾರೆ. ಎಸ್ಪಿ ವಿಷ್ಣುವರ್ಧನ್ ನೇತೃತ್ವದಲ್ಲಿ ಅಮಲು ಪದಾರ್ಥಗಳ ನಾಶ ಮಾಡಲಾಯಿತು.












Click it and Unblock the Notifications