ಆದಿತ್ಯ ರಾವ್ ಉಡುಪಿ ಮನೆಯಲ್ಲಿ ಪೊಲೀಸರ ಪರಿಶೀಲನೆ; ಅಕ್ಕಪಕ್ಕದವರು ಹೇಳುವುದೇನು?
ಉಡುಪಿ, ಜನವರಿ 22: ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣದಲ್ಲಿ ಸ್ಫೋಟಕ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಆದಿತ್ಯ ರಾವ್ ಬಂಧನ ಹಿನ್ನೆಲೆಯಲ್ಲಿ ಉಡುಪಿಯ ಮಣಿಪಾಲದಲ್ಲಿರುವ ಮನೆಯಲ್ಲಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಮಣಿಪಾಲದ ಅನಂತನಗರದಲ್ಲಿರುವ ಆದಿತ್ಯ ರಾವ್ ಮನೆಯಲ್ಲಿ ಸದ್ಯ ಯಾರೂ ವಾಸ್ತವ್ಯ ಇಲ್ಲ. ಕೆಲವು ದಿನಗಳಿಂದ ಬಾಗಿಲು ಹಾಕಿದೆ. ಸಾಕ್ಷ್ಯ ಸಂಗ್ರಹಕ್ಕೆ ಮಣಿಪಾಲ ಠಾಣೆಯ ಪೊಲೀಸರು ಉಡುಪಿ ಎಸ್ ಪಿ ಸೂಚನೆಯಂತೆ ಆದಿತ್ಯ ಮನೆಯಲ್ಲಿ ದಾಖಲೆಗಳ ಹುಡುಕಾಟ ನಡೆಸಿದ್ದಾರೆ.

"ಈಚೆಗೆ ಆದಿತ್ಯ ರಾವ್ ಕಾಣಿಸಿರಲಿಲ್ಲ"
ಆದಿತ್ಯ ರಾವ್ ನನ್ನು ಇತ್ತೀಚೆಗೆ ಸ್ಥಳೀಯರು ನೋಡಿಯೇ ಇಲ್ಲ. ಆತನನ್ನು ನಾವು ನೋಡಿಯೇ ಕೆಲವು ವರ್ಷಗಳಾಗಿವೆ ಎನ್ನುತ್ತಾರೆ ನೆರೆ ಮನೆಯ ಪೂರ್ಣಿಮಾ ಭೋಜರಾಜ್. ಆದಿತ್ಯನ ತಾಯಿ ನೆರೆಮನೆಯವರ ಜೊತೆ ಬೆರೆಯುತ್ತಿದ್ದರು. ತಂದೆಗೆ ಮಾತು ಕಡಿಮೆ. ಆದಿತ್ಯನನ್ನು ನೋಡಿ ಬಹಳ ವರ್ಷಗಳಾಗಿದ್ದವು. ಈ ಸುದ್ದಿ ಕೇಳಿ ತುಂಬಾ ಆಶ್ಚರ್ಯ ಆಗಿದೆ ಎಂದು ಹೇಳಿದರು ಅವರು.

"ಬೇರೆಯವರ ಜೊತೆ ಅವರು ಬೆರೆಯುತ್ತಿರಲಿಲ್ಲ"
ಆದಿತ್ಯನ ಕುಟುಂಬ ಬೇರೆಯವರ ಜೊತೆ ಬೆರೆಯುತ್ತಿರಲಿಲ್ಲ. ಅವರ ಪಾಡಿಗೆ ಅವರು ಇರುತ್ತಿದ್ದರು. ಆದಿತ್ಯನ ತಂದೆ ತಾಯಿ ಅಪರೂಪಕ್ಕೆ ನೋಡಲು ಸಿಗುತ್ತಿದ್ದರು. ಆದರೆ ಆದಿತ್ಯ ರಾವ್ ನನ್ನು ನಾವು ನೋಡಿ ಬಹಳ ವರ್ಷಗಳೇ ಆಗಿವೆ ಎಂದು ಮಾಹಿತಿ ನೀಡಿದರು ಸ್ಥಳೀಯ ನವಿಆಸಿ ಗಣೇಶ್ ರಾಜ್ ಸರಳಬೆಟ್ಟು.

ಆತ ಮಾಡಿದ್ದು ಸರಿಯಲ್ಲ; ಸಹೋದರ ಅಕ್ಷತ್ ರಾವ್
ಆದಿತ್ಯ ರಾವ್ ತಂದೆ ನಿವೃತ್ತ ಬ್ಯಾಂಕ್ ಮ್ಯಾನೇಜರ್ ಆಗಿದ್ದು, ಸಹೋದರ ಅಕ್ಷತ್ ಮೂಡುಬಿದರೆಯಲ್ಲಿ ಬ್ಯಾಂಕ್ ನೌಕರರಾಗಿದ್ದಾರೆ. ಈ ಬಗ್ಗೆ ಮಾತಾಡಿದ ಅಕ್ಷತ್ ರಾವ್, "ಆತನಿಗೆ ಈ ಹಿಂದೆಯೂ ಬುದ್ಧಿ ಹೇಳಿದ್ದೆವು. ಎರಡು ವರ್ಷಗಳಿಂದ ಅವನಿಗೂ ನಮಗೂ ಸಂಪರ್ಕ ಇಲ್ಲ. ಅವನನ್ನು ಬಿಟ್ಟಿದ್ದೇವೆ. ನಮ್ಮ ತಾಯಿ ಸತ್ತಾಗ ಆತ ಚಿಕ್ಕಬಳ್ಳಾಪುರ ಜೈಲಿನಲ್ಲಿದ್ದ. ಆಗ ಸುದ್ದಿ ಮುಟ್ಟಿಸಿದ್ದೆವು ಅಷ್ಟೆ" ಎಂದಿದ್ದಾರೆ.

ಇಂದು ಬೆಳಿಗ್ಗೆ ಪೊಲೀಸರಿಗೆ ಶರಣಾಗಿದ್ದ ಆದಿತ್ಯ
ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣದಲ್ಲಿ ಸೋಮವಾರ ಜನವರಿ 21ರಂದು ಸ್ಫೋಟಕ ಇಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ವಶಕ್ಕೆ ಪೊಲೀಸರು ತೀವ್ರ ಕಾರ್ಯಾಚರಣೆ ಶುರು ಮಾಡಿದ್ದರು. ಇಂದು ಬೆಳಿಗ್ಗೆ ಆರೋಪಿ ಆದಿತ್ಯ ಸ್ವತಃ ಪೊಲೀಸರಿಗೆ ಶರಣಾಗಿದ್ದಾನೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications