'ದೇಶದಲ್ಲಿ ಬಡವರ ಬದುಕು ಹಿಂದೆಂದಿಗಿಂತ ದುಸ್ತರವಾಗಿದೆ'
ಉಡುಪಿ, ಸೆಪ್ಟೆಂಬರ್ 8: ಉಡುಪಿಯಲ್ಲಿ ಕೋಮು ಸೌಹಾರ್ದ ವೇದಿಕೆ ಮತ್ತು ಗೌರಿ ಬಳಗದಿಂದ ಗೌರಿ ಸಂಸ್ಮರಣ ಮತ್ತು ಎ.ಕೆ ಸುಬ್ಬಯ್ಯ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಯಿತು. ಮುಸ್ಲಿಂ ವೆಲ್ ಫೇರ್ ಅಸೋಸಿಯೇಷನ್ ಸಭಾಂಗಣದಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಪ್ರಗತಿಪರ ಚಿಂತಕರು ಪತ್ರಕರ್ತೆ ಗೌರಿ ಅವರ ವಿಚಾರಧಾರೆ, ಬದುಕು ಮತ್ತು ಹೋರಾಟಗಳ ಕುರಿತು ಉಪನ್ಯಾಸ ಮಾಡಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಹಿರಿಯ ಚಿಂತಕ ಜಿ. ರಾಜಶೇಖರ್, ದಮನಿತರ ಪರ ಸದಾ ಧ್ವನಿ ಎತ್ತಿದವರು ಗೌರಿ ಲಂಕೇಶ್. ಇದೇ ಕಾರಣಕ್ಕೆ ಅವರು ತಮ್ಮ ಪ್ರಾಣ ಸಮರ್ಪಣೆ ಮಾಡಿದರು ಎಂದರು.
ಒಳ್ಳೆಯ ಉದ್ದೇಶ ಮತ್ತು ಮೌಲ್ಯಗಳಿಗಾಗಿ ಅವರು ಪ್ರಾಣ ಅರ್ಪಿಸಿದರು. ನಾವು ಕೂಡ ಅವರದೇ ಮೌಲ್ಯಗಳನ್ನು, ಸಿದ್ಧಾಂತಗಳನ್ನು ಮುಂದುವರೆಸಿಕೊಂಡು ಹೋಗಬೇಕಾಗಿದೆ ಮತ್ತು ಅದಕ್ಜಾಗಿಯೇ ಜೀವನವನ್ನು ಸಮರ್ಪಿಸಬೇಕಾಗಿದೆ ಎಂದರು.

ಇವತ್ತು ದೇಶದಲ್ಲಿ ಬಡವರ ಬದುಕು ಎಂದಿಗಿಂತ ಹೆಚ್ಚು ದುಸ್ತರವಾಗಿದೆ. ಕೊಬ್ಬಿದ ಶ್ರೀಮಂತರು ಅಹಂಕಾರದ ಮಾತುಗಳನ್ನಾಡುವುದನ್ನು ನೋಡುತ್ತಿದ್ದೇವೆ. ಪ್ರಧಾನಿಯಾಗಿ ಮೋದಿ ಬಂದ ನಂತರ ಬಡವರು ಇನ್ನಷ್ಟು ಬಡವರಾಗಿಯೂ ಶ್ರೀಮಂತರು ಮತ್ತಷ್ಟು ಕೊಬ್ಬುತ್ತಲೂ ಇದ್ದಾರೆ ಎಂದು ಅಭಿಪ್ರಾಯ ಪಟ್ಟರು.
ದೇಶದಲ್ಲಿ ದಮನಿತರು ಮತ್ತು ಬಡವರು ಗೌರವಯುತವಾಗಿ ಬದುಕಬೇಕಾದರೆ ನರೇಂದ್ರ ಮೋದಿಯವರ ಸರ್ಕಾರ ತೊಲಗಬೇಕಾಗಿದೆ ಮತ್ತು ನಮ್ಮ ಹೋರಾಟದ ಉದ್ದೇಶವೂ ಇದೇ ಆಗಿದೆ ಎಂದರು. ಕಾರ್ಯಕ್ರಮದಲ್ಲಿ ದಿವಂಗತ ಗೌರಿ ಲಂಕೇಶ್ ಮತ್ತು ಎ.ಕೆ ಸುಬ್ಬಯ್ಯ ಅವರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications