ರೈಗೆ ಕಾರಂತ ಪ್ರಶಸ್ತಿ: ಬಿಜೆಪಿ ಮನವಿ ತಿರಸ್ಕರಿಸಿದ ಆಯೋಜಕರು
ಉಡುಪಿ, ಅಕ್ಟೋಬರ್ 6: ಕಡಲ ತೀರದ ಭಾರ್ಗವ ಡಾ. ಶಿವರಾಮ ಕಾರಂತರ ಪ್ರಶಸ್ತಿ ವಿಚಾರದಲ್ಲಿ ವಿವಾದ ಜಟಿಲಗೊಳ್ಳುತ್ತಿದೆ. ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿಗೆ ಖ್ಯಾತ ನಟ ಪ್ರಕಾಶ್ ರೈ ಅವರನ್ನು ಆಯ್ಕೆ ಮಾಡಿರುವುದಕ್ಕೆ ಒಂದೆಡೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದ್ದರೆ, ಇನ್ನೊಂದೆಡೆ ಬಿಜೆಪಿ ಮುಖಂಡರೂ ವಿರೋಧ ಸೂಚಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿದ್ದ ಪ್ರಶಸ್ತಿ ಆಯ್ಕೆ ವಿಚಾರ ರಾಜಕೀಯ ಬಣ್ಣ ಪಡೆದುಕೊಂಡಿದೆ . ಡಾ ಶಿವರಾಮ ಕಾರಂತರ ಹುಟ್ಟೂರು ಪ್ರಶಸ್ತಿಯನ್ನು ಕಳೆದ 13 ವರ್ಷಗಳಿಂದ ನೀಡುತ್ತಾ ಬರಲಾಗಿದೆ.
ಕೋಟತಟ್ಟು ಗ್ರಾಮ ಪಂಚಾಯತ್ , ಕೋಟಾದ ಡಾ.ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನದ ಸಾರಥ್ಯದಲ್ಲಿ ಉಡುಪಿಯ ಡಾ. ಶಿವರಾಮ ಕಾರಂತ ಟ್ರಸ್ಟ್ ನ ಸಹಯೋಗದೊಂದಿಗೆ ಈ ಪ್ರಶಸ್ತಿ ನೀಡಲಾಗುತ್ತದೆ.

ಪ್ರಶಸ್ತಿಗೆ ಪ್ರಕಾಶ್ ರೈ ಅರ್ಹರು
ಈಗ ಪ್ರಶಸ್ತಿಯ ವಿವಾದ ಭುಗಿಲೆದ್ದಿರುವ ಹಿನ್ನೆಲೆಯಲ್ಲಿ ವಿವಾದಕ್ಕೆ ತೆರೆ ಎಳೆಯಲು ಹಾಗೂ ಪ್ರಶಸ್ತಿಯ ಆಯ್ಕೆಯನ್ನು ಸಮರ್ಥಿಸಿ ಕೊಳ್ಳುವ ಪ್ರಯತ್ನಗಳು ನಡೆಯುತ್ತಿವೆ . ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಕೋಟತಟ್ಟು ಗ್ರಾಪಂ ಅಧ್ಯಕ್ಷ ಪ್ರಮೋದ್ ಹಂದೆ ಈ ಪ್ರಶಸ್ತಿಗೆ ಪ್ರಕಾಶ್ ರೈ ಅರ್ಹರಾಗಿದ್ದಾರೆ ಎಂದು ಸಮರ್ಥನೆ ನೀಡಿದರು.

ವಿರೋಧಕ್ಕೆ ವಿಷಾದ
ನಟ ಪ್ರಕಾಶ ರೈ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಿರುವುದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ವಿರೋಧ ವ್ಯಕ್ತವಾಗುತ್ತಿರುವುದಕ್ಕೆ ಅವರು ವಿಷಾದ ವ್ಯಕ್ತಪಡಿಸಿದರು. ಪ್ರಶಸ್ತಿಗೆ ವ್ಯಕ್ತಿಯನ್ನು ಆರಿಸಲು ಐದು ಮಂದಿಯ ಆಯ್ಕೆ ಮಂಡಳಿ ನೇಮಕ ಮಾಡಲಾಗಿತ್ತು. ಆಯ್ಕೆ ಮಂಡಳಿ ಪ್ರಕಾಶ್ ರೈ ಅವರನ್ನು ಅಂತಿಮವಾಗಿ ಆಯ್ಕೆ ಮಾಡಿದೆ ಎಂದು ಅವರು ಮಾಹಿತಿ ನೀಡಿದರು.

ನಿಗದಿಯಂತೆ ಪ್ರಶಸ್ತಿ ಪ್ರಧಾನ
ಕಳೆದ 12 ವರ್ಷಗಳಿಂದ ಸಾಧಕರಿಗೆ ಪ್ರತಿವರ್ಷ ಈ ಪ್ರಶಸ್ತಿ ನೀಡುತ್ತಾ ಬರಲಾಗಿದ್ದು ಈ ಬಾರಿ
ಅಕ್ಟೋಬರ್ 10 ರಂದು ಸಂಜೆ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಕಾರ್ಯಕ್ರಮ ನಿಗದಿಯಂತೆ ನಡೆಯಲಿದೆ. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಹಂದೆ ಖಡಾಖಂಡಿತವಾಗಿ ಹೇಳಿದರು.

ಹೇಳಿಕೆಗೂ ಪ್ರಶಸ್ತಿಗೂ ಸಂಬಂಧವಿಲ್ಲ
ವೈಯುಕ್ತಿಕ ಹೇಳಿಕೆಗೂ, ಪ್ರಶಸ್ತಿಗೂ ಸಂಬಂಧವಿಲ್ಲ . ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ಪ್ರಕಾಶ್ ರೈ ಪ್ರಶಸ್ತಿ ಸ್ವೀಕರಿಸಲು ಬರಲಿದ್ದಾರೆ ಎಂದು ಅವರು ಸ್ಪಷ್ಟಪಡಿಸಿದರು. ಡಾ. ಶಿವರಾಮ್ ಕಾರಂತರ ಹೆಸರಿಗೆ ಚ್ಯುತಿ ಬರಬಾರದು. ಪ್ರಶಸ್ತಿ ಆಯ್ಕೆ ವಿಚಾರದಲ್ಲಿ ರಾಜಕೀಯ ಬೇಡ ಎಂದು ಅವರು ವಿನಂತಿಸಿದರು.
ಆಯೋಜಕರ ಸಮರ್ಥನೆಯಿಂದ ಪ್ರಶಸ್ತಿ ನೀಡದಂತೆ ಮನವಿ ಮಾಡಿದ್ದ ಬಿಜೆಪಿಗರು ಮುಖಭಂಗ ಅನುಭವಿಸಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications