7 ಮಂದಿ ಮೀನುಗಾರರ ನಾಪತ್ತೆಗೆ ನೌಕಾಸೇನೆಯೇ ಕಾರಣ:ಪ್ರಮೋದ್ ಮಧ್ವರಾಜ್ ಗಂಭೀರ ಆರೋಪ
ಉಡುಪಿ, ಮಾರ್ಚ್ 24: ಏಳು ಮಂದಿ ಮೀನುಗಾರರ ನಾಪತ್ತೆಗೆ ನೌಕಾಸೇನೆಯೇ ಕಾರಣ. ನಾಪತ್ತೆ ಹಿಂದೆ ನೌಕಾಸೇನೆಯವರ ಕೈವಾಡ ಇದೆ ಅನ್ನೋ ಸಂಶಯ ಬರ್ತಾ ಇದೆ. ನೌಕಾಸೇನೆಯ ಶಿಪ್ ಮೀನುಗಾರರ ಬೋಟ್ ಗೆ ಹಿಟ್ ಎಂಡ್ ರನ್ ಮಾಡಿರುವ ಸಂಶಯ ಇದೆ ಅಂತ ಉಡುಪಿ-ಚಿಕ್ಕಮಗಳೂರು ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಗಂಭೀರ ಆರೋಪ ಮಾಡಿದ್ದಾರೆ.
ಉಡುಪಿಯ ಡಿಸಿಸಿ ಕಚೇರಿಯಲ್ಲಿ ಬಿಜೆಪಿ ಮತ್ತು ಸಂಸದೆ ಶೋಭಾ ವಿರುದ್ಧ ಹರಿಹಾಯ್ದ ಅವರು, ಮಲ್ಪೆಯ ಮೀನುಗಾರರು ನಾಪತ್ತೆಯಾಗಿ ನಾಲ್ಕು ತಿಂಗಳೆ ಕಳೆದಿವೆ.ಆದರೂ ನೌಕಾಸೇನೆ ಹುಡುಕುವ ನಾಟಕ ಮಾಡಿದೆ ಎಂದು ದೂರಿದರು.
ಚುನಾವಣೆವರೆಗೆ ಸತ್ಯ ಮರೆಮಾಚುವ ಪ್ರಯತ್ನ ಇದಾಗಿದೆ. ಈ ಪ್ರಶ್ನೆಗೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಉತ್ತರಿಸಬೇಕು.ಶೋಭಾ ನಾಮಪತ್ರ ಸಲ್ಲಿಸುವಾಗ ನಿರ್ಮಲಾ ಸೀತಾರಾಮ ನ್ ಬರ್ತಾರಂತೆ.ಮೀನುಗಾರರು ಕಾಣೆಯಾದ ಪ್ರಕರಣ ಏನಾಯ್ತು ಎಂದು ರಕ್ಷಣಾ ಸಚಿವರೇ ಉತ್ತರಿಸಬೇಕು.

ನೊಂದ ಮನೆಯವರ ನೋವಿಗೆ ಯಾರು ಉತ್ತರಿಸ್ತಾರೆ? ಎಂದ ಪ್ರಮೋದ್, ಮೀನುಗಾರರು ಬದುಕಿದ್ದಾರೋ, ಸತ್ತಿದ್ದಾರೋ ಗೊತ್ತಿಲ್ಲ. ಮೀನುಗಾರ ಸಮುದಾಯಕ್ಕೆ ಕೇಂದ್ರ ಸರ್ಕಾರ ಏನೂ ಮಾಡಿಲ್ಲ. ಮೀನುಗಾರ ಅವಘಡದಲ್ಲಿ ಬಲಿಯಾದ್ರೆ ಕೇವಲ ಎರಡು ಲಕ್ಷ ಪರಿಹಾರ ಕೊಡ್ತಾರೆ.ನಾವದನ್ನು ಹೆಚ್ಚಿಸಿದ್ದೇವೆ ಎಂದು ತಿಳಿಸಿದರು.
ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಾಹಂ ಓರ್ವ ಬ್ಲಾಕ್ ಮೇಲರ್ ಎಂದ ಪ್ರಮೋದ್, ನಾವು ತಂದೆಯ ಕಾಲದಿಂದ ವ್ಯವಹಾರ ಮಾಡ್ತಾ ಇದ್ದೇವೆ. ಸಿಂಡಿಕೇಟ್ ಬ್ಯಾಂಕ್ ನಲ್ಲೇ ನಿರಂತರ ವ್ಯವಹಾರ ಮಾಡ್ತಿದ್ದೇವೆ.ಸರಿಯಾದ ಆಸ್ತಿ ಅಡಮಾನ ಇಲ್ದೇ ಯಾವ ಬ್ಯಾಂಕೂ ಸಾಲ ಕೊಡಲ್ಲ. ಸ್ಥಳೀಯ ಬಿಜೆಪಿಯವರು ಅವರನ್ನು ಛೂ ಬಿಟ್ಟಿದ್ದಾರೆ.ಅದಕ್ಕೆ ಅವರು ಚುನಾವಣೆ ವೇಳೆ ಬರ್ತಾರೆ ಎಂದು ಹರಿಹಾಯ್ದರು.
ಶೋಭಾ ಸಂಸದೆಯಾಗಿ ಕ್ಷೇತ್ರದಲ್ಲಿ ಇದ್ದರೋ ಇಲ್ವೋ ಗೊತ್ತಾಗಲ್ಲ. ಬಿಜೆಪಿ ನಾಯಕರೇ ಗೋ ಬ್ಯಾಕ್ ಶೋಭಾ ಅಂತಾರೆ.ಈಗ ಮತದಾರರು ಗೋ ಬ್ಯಾಕ್ ಶೋಭಾ ಹೇಳಲು ತಯಾರಾಗಿದ್ದಾರೆ ಎಂದು ಪ್ರಮೋದ್ ಟೀಕಿಸಿದರು.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications