ಉಡುಪಿ ಶ್ರೀಕೃಷ್ಣ ಮಠದಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ
ಉಡುಪಿ, ಜೂನ್, 18 : ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಇಂದು (ಭಾನುವಾರ) ಮಂಗಳೂರು ವಿಮಾನ ನಿಲ್ದಾಣದ ಮೂಲಕ ಉಡುಪಿಗೆ ತೆರಳಿ ಶ್ರೀಕೃಷ್ಣನ ದರ್ಶನ ಪಡೆದರು.
ಪ್ರಣಬ್ ಮುಖರ್ಜಿ ಅವರನ್ನು ಪೇಜಾವರ ಶ್ರೀ ಬರಮಾಡಿಕೊಂಡರು. ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ ಜೆ ಜಾರ್ಜ್ ಪ್ರಣಬ್ ಮುಖರ್ಜಿ ಅವರಿಗೆ ಸಾಥ್ ನೀಡಿದರು.
ಮಂಗಳುರು ವಿಮಾನ ನಿಲ್ದಾಣದಲ್ಲಿ ಅರಣ್ಯ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ, ಆಹಾರ ಸಚಿವ ಯು.ಟಿ.ಖಾದರ್, ಮೇಯರ್ ಕವಿತಾ ಸನಿಲ್, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಜಿಲ್ಲಾಧಿಕಾರಿ ಡಾ.ಕೆ.ಜಿ. ಜಗದೀಶ್, ಪೊಲೀಸ್ ಕಮೀಷನರ್ ಟಿ.ಆರ್. ಸುರೇಶ್ ಸ್ವಾಗತಿಸಿದರು.
ಮಂಗಳೂರು ವಿಮಾನ ನಿಲ್ದಾಣದಿಂದ ಐಎಎಫ್ ಹೆಲಿಕಾಪ್ಟರ್ ಮೂಲಕ ಉಡುಪಿಗೆ ತೆರಳಿದರು.

ರಾಷ್ಟಪತಿಗೆ ಹಲವರ ಸಾಥ್
ಮಂಗಳೂರು ವಿಮಾನ ನಿಲ್ದಾಣದಿಂದ ಐಎಎಫ್ ರಾಷ್ಟಪತಿ ಪ್ರಣಬ್ ಮುಖರ್ಜಿ ಅವರ ಜತೆ ಸಚಿವ ಕೆ.ಜೆ.ಜಾರ್ಜ್, ಅಧಿಕಾರಿಗಳಾದ ಸುವರ ಘೋಷ್, ಮೇಜರ್ ಜನರಲ್ ಅನಿಲ್ ಕೋಸ್ಟ, ಅಶೋಕ್ ಕುಮಾರ್ ಮೆಹ್ತಾ, ಎನ್.ಕೆ.ಕಶಪ್ ಮೊದಲಾದವರು ಇದ್ದರು.

ಸಚಿವ ಪ್ರಮೋದ್ ಮಧ್ವರಾಜ್ ಸ್ವಾಗತಿಸಿದರು
ಮಂಗಳೂರು ವಿಮಾನ ನಿಲ್ದಾಣದಿಂದ ಐಎಎಫ್ ಹೆಲಿಕಾಪ್ಟರ್ ಮೂಲಕ ಉಡುಪಿಗೆ ತೆರಳಿದರು. ಉಡುಪಿ ಹೆಲಿಪ್ಯಾಡ್ ನಲ್ಲಿ ಪ್ರಣಬ್ ಮುಖರ್ಜಿ ಅವರನ್ನು ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಸ್ವಾಗತಿಸಿದರು

ನೆರೆದಿದ್ದ ಜನರಿಗೆ ಕೈಮುಗಿದ ಪ್ರಣಬ್ ಮುಖರ್ಜಿ
ಬಿಗಿ ಭದ್ರತೆಯೊಂದಿಗೆ ಉಡುಪಿ ಬನ್ನಂಜೆ ಯಲ್ಲಿರುವ ಪ್ರವಾಸಿ ಬಂಗಲೆಗೆ ತೆರಳಿದರು. ಈ ವೇಳೆ ಕಾರಿನಲ್ಲಿ ಹೋಗುತ್ತಿದ್ದ ರಾಷ್ಟ್ರಪತಿ ಹೆಲಿಪ್ಯಾಡ್ ಬಳಿಯ ಎಪಿಎಂಸಿ ಆವರಣದಲ್ಲಿ ನೆರೆದಿದ್ದ ಜನರಿಗೆ ಕೈಮುಗಿದು ನಮಸ್ಕರಿಸಿದರು.

ಪ್ರವಾಸಿ ಮಂದಿರದಿಂದ ಕೃಷ್ಣ ಮಠಕ್ಕೆ
ಬನ್ನಂಜೆ ಯಲ್ಲಿರುವ ಪ್ರವಾಸಿ ಮಂದಿರದಿಂದ ನೇರವಾಗಿ ಶ್ರೀಕೃಷ್ಣ ಮಠಕ್ಕೆ ತೆರಳಿದರು. ಮಠದಲ್ಲಿ ಪೇಜಾವರ ಶ್ರೀಗಳು ಬರಮಾಡಿಕೊಂಡರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications