ನಾಳೆ ಉಡುಪಿಗೆ ನರೇಂದ್ರ ಮೋದಿ: ಹೇಗಿದೆ ಗೊತ್ತಾ ಸಿದ್ಧತೆ ?
Recommended Video

ಉಡುಪಿ, ಏಪ್ರಿಲ್ 30 : ಪ್ರಧಾನಿ ನರೇಂದ್ರ ಮೋದಿಯವರ ಕರ್ನಾಟಕ ಪ್ರವಾಸ ಮೇ ಒಂದರಿಂದ ಉಡುಪಿಯಿಂದ ಪ್ರಾರಂಭಗೊಳ್ಳುತ್ತಿದ್ದು, ಭಾರೀ ಸಿದ್ಧತಾ ಕಾರ್ಯಗಳು ನಡೆಯುತ್ತಿವೆ. ಪ್ರಧಾನಿಯವರು ಉಡುಪಿಯ ಎಂಜಿಎಂ ಕಾಲೇಜು ಮೈದಾನದಲ್ಲಿ ಬೃಹತ್ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳುತ್ತಿದ್ದು, ಮೈದಾನದಲ್ಲಿ ಬೃಹತ್ ಪೆಂಡಾಲ್ ನಿರ್ಮಾಣ ಮಾಡಲಾಗಿದೆ.
ಮೇ ಒಂದರಂದು 2.50 ಕ್ಕೆ ಮೋದಿಯವರು ಆದಿ ಉಡುಪಿ ಹೆಲಿಪ್ಯಾಡ್ ಗೆ ಆಗಮಿಸಿ, ಅಲ್ಲಿಂದ ಸಮಾವೇಶದ ಸ್ಥಳಕ್ಕೆ ಬರಲಿದ್ದಾರೆ. ಸಮಾವೇಶ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಮಧ್ಯಾಹ್ನ ಒಂದು ಗಂಟೆಯಿಂದಲೇ ಪ್ರಾರಂಭಗೊಳ್ಳುತ್ತದೆ ಎಂದು ಜಿಲ್ಲಾ ಬಿಜೆಪಿ ಮಾಹಿತಿ ನೀಡಿದೆ. ಕರಾವಳಿ ಮತ್ತು ಆಸುಪಾಸಿನ ಜಿಲ್ಲೆಗಳ ಒಂದು ಲಕ್ಷ ಜನ ಭಾಗವಹಿಸುವ ನಿರೀಕ್ಷೆ ಇದೆ.
ಬಿಸಿಲಿನಿಂದ ರಕ್ಷಣೆಗಾಗಿ ಇಡೀ ಮೈದಾನಕ್ಕೆ ಪೆಂಡಾಲ್ ಹಾಕುವ ಕಾರ್ಯ ನಡೆದಿದೆ. ಸಮಾವೇಶ ಸುಗಮವಾಗಿ ನಡೆಯಲು 10 ಸಾವಿರಕ್ಕೂ ಹೆಚ್ಚು ಸ್ವಯಂ ಸೇವಕರು ಶ್ರಮಿಸಲಿದ್ದಾರೆ ಎಂದು ಜಿಲ್ಲಾ ಬಿಜೆಪಿ ನಾಯಕರು ಮಾಹಿತಿ ನೀಡಿದ್ದಾರೆ.

ಮೋದಿ ಕಾರ್ಯಕ್ರಮಕ್ಕೆ ರಾಷ್ಟ್ರೀಯ ನಾಯಕರು , ಮಾಜಿ ಸಿಎಂ ಯಡಿಯೂರಪ್ಪ ಸಹಿತ ರಾಜ್ಯ ನಾಯಕರ ದಂಡೇ ಉಡುಪಿಗೆ ಬರುತ್ತಿದೆ. ಜೊತೆಗೆ ಉಡುಪಿ ,ದಕ್ಷಿಣ ಕನ್ನಡ ,ಉತ್ತರ ಕನ್ನಡ ಶಿವಮೊಗ್ಗ , ಚಿಕ್ಕಮಗಳೂರು ಮತ್ತಿತರ ಜಿಲ್ಲೆಗಳ ಮುಖಂಡರು , ಅಭ್ಯರ್ಥಿಗಳು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಮೋದಿ ಆಗಮನದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗದ ಅನುಮತಿ ಪಡೆದು ಇಡೀ ಉಡುಪಿ ನಗರವನ್ನು ಸಿಂಗರಿಸುವ ಕಾರ್ಯ ಇವತ್ತಿನಿಂದ ಪ್ರಾರಂಭವಾಗಲಿದೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಆದರೆ ಉಡುಪಿಗೆ ಬರುವ ಪ್ರಧಾನಿಯವರು ಕೃಷ್ಣಮಠಕ್ಕೆ ಭೇಟಿ ಕೊಡುತ್ತಾರಾ ಎಂಬ ಬಗ್ಗೆ ಇನ್ನೂ ಖಚಿತಗೊಂಡಿಲ್ಲ. ಭದ್ರತೆ ದೃಷ್ಟಿಯಿಂದ ಮೋದಿಯವರು ಕೃಷ್ಣಮಠಕ್ಕೆ ಹೋಗುವುದು ಕಷ್ಟ ಎನ್ನಲಾಗುತ್ತಿದೆ. ಪ್ರಧಾನಿಯವರ ವಿಶೇಷ ಭದ್ರತಾ ಅಧಿಕಾರಿಗಳು ಈಗಾಗಲೇ ಕೃಷ್ಣಮಠಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು , ಅವರು ಗ್ರೀನ್ ಸಿಗ್ನಲ್ ನೀಡಿದ್ರೆ ಕೃಷ್ಣಮಠಕ್ಕೆ ಭೇಟಿ ಕೊಡಬಹುದು.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications