ಕುಂದಾಪುರ ನಾಗರೀಕನ ಪತ್ರಕ್ಕೆ ಪ್ರಧಾನಿ ಕಚೇರಿ ಸ್ಪಂದನೆ
ಉಡುಪಿ, ಜನವರಿ 27: ದಶಕದಿಂದ ಉಡುಪಿಯ ಕುಂದಾಪುರದಲ್ಲಿ ಹೆದ್ದಾರಿ ಕಾಮಗಾರಿ ಮತ್ತು ಮೇಲ್ಸೇತುವೆ ಕಾಮಗಾರಿ ವಿಳಂಬವಾಗುತ್ತಿರುವುದರಿಂದ ಸಾರ್ವಜನಿಕರಿಗೆ ಬಹಳ ತೊಂದರೆಯಾಗುತ್ತದೆ ಎಂದು ಕುಂದಾಪುರ ನಾಗರೀಕನೋರ್ವ ನೇರವಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದನು.
Recommended Video
ಕುಂದಾಪುರದ ಗಾಂಧಿ ಮೈದಾನದ ಎದುರಿನ ಬಿ.ವಿ.ಎಸ್ ರಸ್ತೆಯ ನಿವಾಸಿ ವಿಘ್ನೇಶ್ ಶೆಣೈ ಎನ್ನುವವರು ಕುಂದಾಪುರದ ಹೆದ್ದಾರಿ ಅವ್ಯವಸ್ಥೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದರು. ಅವರ ಪತ್ರಕ್ಕೆ ಶನಿವಾರ ಪ್ರಧಾನಿ ಕಚೇರಿಯಿಂದ ಸ್ಪಂದಿಸಿ ಉತ್ತರ ಬಂದಿದೆ.
ಉಡುಪಿಯ ಸಂತೆಕಟ್ಟೆಯಲ್ಲಿ ಕೆಲಸ ಮಾಡುತ್ತಿರುವ ವಿಘ್ನೇಶ್ ಡಿಸೆಂಬರ್ 24 ರಂದು ರಸ್ತೆ ಕಾಮಗಾರಿ ವಿಳಂಬದ ಕುರಿತು ಪತ್ರ ಬರೆದಿದ್ದರು, ಅದಕ್ಕೆ ಸ್ಪದಿಸಿದ ಪ್ರಧಾನಿ ಕಚೇರಿಯು, "ನಿಮ್ಮ ಪತ್ರ ನಮಗೆ ತಲುಪಿದೆ, ನಿಮ್ಮ ಪತ್ರ ಹಾಗೂ ಸಮಸ್ಯೆ ಕುರಿತು ಸಂಬಂಧಪಟ್ಟ ಭೂಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಕಾರ್ಯದರ್ಶಿಗೆ ಕಳುಹಹಿಸಲಾಗಿದೆ' ಎಂದು ಉತ್ತರ ಬಂದಿದೆ.

ವಿಘ್ನೇಶ್ ಬರೆದ ಪತ್ರದಲ್ಲಿ "ಕುಂದಾಪುರದಲ್ಲಿ 10 ವರ್ಷಗಳಿಂದ ಹೆದ್ದಾರಿ ಕಾಮಗಾರಿ ನಡೆಯುತ್ತಿದೆ, ಇಲ್ಲಿ ಸರ್ವಿಸ್ ರಸ್ತೆ ಮತ್ತು ಹೆದ್ದಾರಿ ಒಂದೇ ಆಗಿದೆ. ದಿನನಿತ್ಯ ಬೆಳಗ್ಗೆ ಮತ್ತು ಸಾಯಂಕಾಲ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ' ಎಂದು ಬರೆದಿದ್ದರು.
"ಬೆಂಗಳೂರು ಮತ್ತಿತರ ಕಡೆಯಿಂದ ಬರುವ ಬಸ್ ಗಳಿಗೆ ಸಮಸ್ಯೆಯಾಗುತ್ತಿದೆ. ಅಷ್ಟೇ ಅಲ್ಲದೇ ಸುರತ್ಕಲ್ ನಿಂದ ಕುಂದಾಪುರದವರೆಗೆ ಹೆದ್ದಾರಿ 66 ರ ಕಾಮಗಾರಿ ಪೂರ್ಣಗೊಂಡಿಲ್ಲ. ಆದರೂ ಸಾಸ್ತಾನ, ಹೆಜಮಾಡಿಯಲ್ಲಿ ನಿರಂತರವಾಗಿ ಟೋಲ್ ಸಂಗ್ರಹ ಮಾಡುತ್ತಿದ್ದಾರೆ. ಕಾಮಗಾರಿ ಪೂರ್ಣಗೊಳ್ಳುವವರೆಗೆ ಟೋಲ್ ಸಂಗ್ರಹವನ್ನು ಸ್ಥಗಿತಗೊಳಿಸಿ'' ಎಂದು ಪ್ರಧಾನಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದರು.
ಪ್ರಧಾನ ಮಂತ್ರಿಗೆ ಪತ್ರ ಬರೆದು, ವಾಪಸ್ ಸ್ಪಂದಿಸಿದ ಉತ್ತರ ಬಂದಿದ್ದಕ್ಕೆ ಪ್ರತಿಕ್ರಿಯೆ ನೀಡಿರುವ ವಿಘ್ನೇಶ್ ಶೆಣೈ, ""ಈ ಬಗ್ಗೆ ಸಂಬಂಧಪಟ್ಟ ಸಂಸದರು, ಸಚಿವರು, ಶಾಸಕರು, ಅಧಿಕಾರಿಗಳ ಸಹಿತ ಎಲ್ಲರ ಗಮನಕ್ಕೂ ತಂದರೂ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿಲ್ಲ ಆದ್ದರಿಂದ ಬೇರೆ ದಾರಿ ಕಾಣದೇ ಪ್ರಧಾನಿಗೆ ಪತ್ರ ಬರೆದೆ'' ಎಂದು ಹೇಳಿದ್ದಾರೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications