ಪೇಜಾವರ ಶ್ರೀ ಸಮಾರಾಧನೋತ್ಸವ; ಪರಿಶಿಷ್ಟ ಜನರ ಕಾಲೋನಿಯಲ್ಲಿ ಅನ್ನದಾನ
ಉಡುಪಿ, ಜನವರಿ 9: ಗುರುವಾರ ಪೇಜಾವರ ಶ್ರೀ ವಿಶ್ವೇಶತೀರ್ಥಶ್ರೀಪಾದರ ಮಹಾ ಸಮಾರಾಧನೋತ್ಸವದ ಪ್ರಯುಕ್ತ ಬೆಂಗಳೂರು ಪೂರ್ಣಪ್ರಜ್ಞ ವಿದ್ಯಾಪೀಠ, ಉಡುಪಿ ಶ್ರೀಕೃಷ್ಣ ಮಠ ಶ್ರೀ ಪೇಜಾವರ ಮಠ ಸೇರಿದಂತೆ ದೇಶಾದ್ಯಂತ ಇರುವ ಪೇಜಾವರ ಮಠದ ಶಾಖೆಗಳು, ಅತಿಥಿಗೃಹ, ಶಾಲೆ ಕಾಲೇಜು, ಅನಾಥಾಶ್ರಮ, ಸೇವಾಧಾಮ ವಿದ್ಯಾರ್ಥಿನಿ ನಿಲಯಗಳೂ ಸೇರಿದಂತೆ 85ಕ್ಕೂ ಅಧಿಕ ಕಡೆಗಳಲ್ಲಿ ವಿವಿಧ ಧಾರ್ಮಿಕ ವಿಧಿವಿಧಾನಗಳು ವೈಭವದಿಂದ ನೆರವೇರಿದವು.
ಉಡುಪಿ ಪೇಜಾವರ ಮಠದಲ್ಲಿಯೂ ಬೆಳಿಗ್ಗೆ ಪವಮಾನ ಹೋಮ, ಭಜನೆ, ಪಾರಾಯಣ, ಪಾದುಕಾ ಪೂಜಾ ಮಹಾಪೂಜೆ ಸಾವಿರಕ್ಕೂ ಅಧಿಕ ಜನರ ಅನ್ನಾರಾಧನೆಗಳು ನಡೆದವು. ಶ್ರೀಗಳ ಆಸನದಲ್ಲಿ ಭಾವಚಿತ್ರ, ಪಾದುಕೆಗಳನ್ನಿಟ್ಟು ರಜತ ಮಂಟಪ ಸಹಿತ ವಿಶೇಷ ಪುಷ್ಪಾಲಂಕಾರ ಮಾಡಲಾಗಿತ್ತು. ಪದ್ಮನಾಭ ಭಟ್ ಕಿದಿಯೂರು ಧಾರ್ಮಿಕ ವಿಧಿಗಳನ್ನು ನೆರವೇರಿಸಿದರು. ವ್ಯವಸ್ಥಾಪಕರಾದ ವಾಸುದೇವ ಅಡಿಗ, ಇಂದು ಶೇಖರ, ಕೊಟ್ಟಾರಿಗಳಾದ ಸಂತೋಷ್ ಆಚಾರ್ಯ ಸಹಕರಿಸಿದರು.

ಇದೇ ಸಂದರ್ಭದಲ್ಲಿ ಸಮಾಜದಲ್ಲಿ ಬೇರುಬಿಟ್ಡಿರುವ ಅಸೃಶ್ಯತೆಯ ನಿವಾರಣೆಗಾಗಿ ಪೇಜಾವರ ಶ್ರೀಗಳ ಕ್ರಾಂತಿಕಾರಿ ಕರ್ತವ್ಯವನ್ನು ಸ್ಮರಿಸುವ ಸಲುವಾಗಿ ಉಡುಪಿಯ ಕರಂಬಳ್ಳಿಯಲ್ಲಿ ಪರಿಶಿಷ್ಡ ಜಾತಿ ಜನರ ಕಾಲೊನಿಯಲ್ಲಿ ಶ್ರೀಗಳ ಸಂಸ್ಮರಣೆ ಸಹಿತ ಸಾಮೂಹಿಕ ಅನ್ನದಾನ ನೆರವೇರಿತು. ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರ ಸೂಚನೆಯಂತೆ ವಾಸುದೇವ ಭಟ್ ಪೆರಂಪಳ್ಳಿ ಇವರ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯಿತು. ಸುಮಾರು 200 ಮಂದಿ ಭೋಜನ ಸ್ವೀಕರಿಸಿದರು.
-
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ಬೆಂಗಳೂರಿನಲ್ಲಿ ಇಂದು ಶ್ರೀ ಎಂ ಅವರ "ಉಪನಿಷತ್ತುಗಳು ಮತ್ತು ಜೆ.ಕೃಷ್ಣಮೂರ್ತಿ" ಹೊಸ ಕೃತಿ ಬಿಡುಗಡೆ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
ಎಪಿಎಂಸಿಯಲ್ಲಿ ಮೂಟೆಗಳು ಮೈಮೇಲೆ ಬಿದ್ದರೂ ಪವಾಡಸದೃಶ್ಯದಂತೆ ಬದುಕಿದ ಮಹಿಳೆ Video Viral -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ











Click it and Unblock the Notifications