ಹೆಜಮಾಡಿ ಟೋಲ್ ವಿನಾಯಿತಿಗೆ ಒತ್ತಾಯಿಸಿ ಮಸಿ ಬಳಿದುಕೊಂಡು ಅರೆಬೆತ್ತಲೆ ಪ್ರತಿಭಟನೆ
ಉಡುಪಿ, ಜನವರಿ 30:ಪಡುಬಿದ್ರೆ ವ್ಯಾಪ್ತಿಯ ವಾಹನಗಳಿಗೆ ಹೆಜಮಾಡಿ ಟೋಲ್ ನಲ್ಲಿ ವಿನಾಯಿತಿ ನೀಡಬೇಕು ಎಂದು ಒತ್ತಾಯಿಸಿ ನಡೆಸಲಾಗುತ್ತಿರುವ ಹೋರಾಟ 23 ನೇ ದಿನಕ್ಕೆ ಕಾಲಿರಿಸಿದೆ.
ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ನಡೆಸಲಾಗುತ್ತಿರುವ ಈ ಪ್ರತಿಭಟನೆ 23ನೇ ದಿನಕ್ಕೆ ಕಾಲಿಟ್ಟಿದ್ದು, ಪ್ರತಿಭಟನಾಕಾರರರು ಇಂದು ಮಸಿ ಬಳಿದುಕೊಂಡು ಅರೆಬೆತ್ತಲೆ ಪ್ರತಿಭಟನೆ ನಡೆಸಿ ಗಮನಸೆಳೆದರು.
ಕರವೇ ಜಿಲ್ಲಾಧ್ಯಕ್ಷ ಅನ್ಸಾರ್ ಅಹಮದ್, ತಾಲೂಕು ಅಧ್ಯಕ್ಷ ಸೈಯ್ಯದ್ ನಿಝಾಮುದ್ದೀನ್ ಹಾಗೂ ಆಸೀಫ್ ಮೈಗೆ ಮಸಿ ಬಳಿದುಕೊಂಡು ಅರೆಬೆತ್ತಲೆಯೊಂದಿಗೆ ಭಿಕ್ಷಾ ಪಾತ್ರೆ ಇಟ್ಟುಕೊಂಡು ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಪ್ರತಿಭಟನಾಕಾರರರು ಜಿಲ್ಲಾಡಳಿತ, ಜನಪ್ರತಿನಿಧಿಗಳು ಸೇರಿಂದತೆ , ನವಯುಗ ಸಂಸ್ಥೆಯ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು.

ಪ್ರತಿಭಟನೆ ನಡೆಯುತ್ತಿರುವ ಸ್ಥಳಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಭೇಟಿ ನೀಡಿ, ಪ್ರತಿಭಟನಾಕಾರರ ಬೇಡಿಕೆಯ ಬಗ್ಗೆ ನವಯುಗ ಅಧಿಕಾರಿಗೆ ಮೊಬೈಲ್ನಲ್ಲಿ ಸಂಪರ್ಕಿಸಿ ಪಡುಬಿದ್ರಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಕಾಮಗಾರಿ ಇನ್ನೂ ಪೂರ್ಣಗೊಳ್ಳದೆ ಟೋಲ್ ವಸೂಲಿ ಮಾಡುತ್ತಿದ್ದು, ಸ್ಥಳೀಯರಿಗೆ ಸಮಸ್ಯೆ ಉಂಟಾಗಿದೆ. ಈ ನಿಟ್ಟಿನಲ್ಲಿ ಟೋಲ್ ವಿನಾಯಿತಿ ನೀಡಬೇಕು ಎಂದು ಹೇಳಿದರು.
ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನವಯುಗ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು. ಇದಕ್ಕೂ ಕಂಪೆನಿ ಒಪ್ಪದಿದ್ದಲ್ಲಿ ಮುಂದಿನ ದಿನಗಳಲ್ಲಿ ಈ ಹೋರಾಟಕ್ಕೆ ತಾನೂ ಕೈ ಜೋಡಿಸುವುದಾಗಿ ಹೇಳಿದರು.
-
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ












Click it and Unblock the Notifications