ಉಡುಪಿ; ರಾಘವೇಂದ್ರ ಕುಟುಂಬದಿಂದ 21 ದಿನ 3000 ಸಾವಿರ ಜನರಿಗೆ ಊಟ

ಉಡುಪಿ, ಮಾರ್ಚ್ 26: ಕೊರೊನಾ ಲಾಕ್ ಡೌನ್ ಪರಿಣಾಮವಾಗಿ ಉಡುಪಿಯಲ್ಲಿ ಕಾರ್ಮಿಕರು, ನಿರ್ಗತಿಕರು ಊಟಕ್ಕಿಲ್ಲದೆ ಪರಿತಪಿಸುವ ಪ್ರಮೇಯ ಬಂದಿದೆ. ನೀರು, ಊಟವಿಲ್ಲದೇ ಪರದಾಡುತ್ತಿರುವವರಿಗೆ ಉಡುಪಿಯ ರಾಘವೇಂದ್ರ ಕಿಣಿ ಕುಟುಂಬ ಆಹಾರ ನೀಡಲು ನಿರ್ಧರಿಸಿದೆ.

ಇವರ ಕುಟುಂಬ ಪ್ರತಿದಿನ ನೂರು ಜನಕ್ಕೆ ಊಟ ಕೊಡಲು ತೀರ್ಮಾನಿಸಿದೆ. ಮುಂದಿನ 21 ದಿನ ನಗರದ ಅಲ್ಲಲ್ಲಿ ನೂರು ಊಟ ಕೊಡುವುದಾಗಿ ಇಂಜಿನಿಯರ್ ರಾಘವೇಂದ್ರ ಕಿಣಿ ತಿಳಿಸಿದ್ದಾರೆ.

ಜನರಿದ್ದಲ್ಲಿಗೆ ಪ್ರತಿದಿನ ಊಟ ಪಾರ್ಸೆಲ್ ನೀಡಿ ಬಡವರ ಹಸಿವು ನೀಗಿಸುವ ಗುರಿ ಇದ್ದು, ಅಡುಗೆಗೆ, ಸಪ್ಲೈಗೆ ಜನರನ್ನು ನೇಮಿಸಿರುವುದಾಗಿ ತಿಳಿಸಿದ್ದಾರೆ. ಸ್ವಚ್ಛತೆಗೆ ಅಡ್ಡಿಯಾಗದೆ, ಸರಕಾರದ, ಆರೋಗ್ಯ ಇಲಾಖೆಯ ನಿಯಮ ಪಾಲಿಸಿಕೊಂಡು ಊಟ ವಿತರಿಸುವುದಾಗಿ ರಾಘವೇಂದ್ರ ಕಿಣಿ ಹೇಳಿದ್ದಾರೆ.

Raghavendra Kini Family Donating Food For 21 Days To Needed People

ಸಹೋದರ ನರಸಿಂಹ ಕಿಣಿಯವರ ಕಡಿಯಾಳಿಯ ಹೋಟೆಲ್ ನಲ್ಲಿ ಊಟದ ಪೊಟ್ಟಣ ಪಾರ್ಸೆಲ್ ಕಟ್ಟಲಾಗುತ್ತಿದೆ. ನಗರದ ಕಲ್ಸಂಕ, ಸಿಟಿ ಬಸ್ ನಿಲ್ದಾಣ, ಅಜ್ಜರಕಾಡು ಪಾರ್ಕ್, ಅಂಬಲಪಾಡಿ, ಸಂತೆಕಟ್ಟೆ ಕಲ್ಯಾಣಪುರದಲ್ಲಿ ಊಟ ಅಗತ್ಯ ಇರುವವರಿಗೆ ವಿತರಿಸುವ ನಿರ್ಧಾರವನ್ನು ಕಿಣಿಯವರ ಟ್ರಸ್ಟ್ ಮೂಲಕ ಮಾಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+