Karnataka Rain Alert: ಕರಾವಳಿಯಲ್ಲಿ ಮೋಡ ಮುಸುಕಿದ ವಾತಾವರಣ: ಇಂದು ಭರ್ಜರಿ ಮಳೆ ಸಾಧ್ಯತೆ
ಉಡುಪಿ, ಏಪ್ರಿಲ್ 22: ಕರಾವಳಿಯ ಉಡುಪಿ ಜಿಲ್ಲೆಯ ಹಲವು ಭಾಗಗಳಲ್ಲಿ ಬೆಳ್ಳಂಬೆಳಗ್ಗೆ ಮೋಡ ಮುಸುಕಿದ ವಾತಾವರಣವಿದ್ದು, ಇಂದು ಕೂಡ ಭರ್ಜರಿ ಮಳೆಯಾಗುವ ಸಾಧ್ಯತೆ ಇದೆ. ಉರಿ ಬಿಸಿಲಿನಿಂದ ಬಸವಳಿದಿದ್ದ ಉಡುಪಿ ಜನತೆಗೆ ವರುಣ ಕೃಪೆ ತೋರಿದ್ದು, ಕಳೆದ ಎರಡು-ಮೂರು ದಿನಗಳಿಂದ ಮಳೆಯಾಗುತ್ತಿದೆ.
ಕಳೆ ಶುಕ್ರವಾರ ರಾತ್ರಿ ಉಡುಪಿ ಜಿಲ್ಲೆಯ ಹಲವು ಭಾಗಗಳಲ್ಲಿ ಗುಡುಗು ಸಿಡಿಲು ಸಹಿತ ಭರ್ಜರಿ ಮಳೆಯಾಗಿದೆ. ಐದಾರು ಗಂಟೆಗಳ ಕಾಲ ನಿರಂತರ ಮಳೆಯಾಗಿದ್ದು ಕಾದ ಕಾವಲಿಯಾದಂತಾಗಿದ್ದ ಭೂಮಿ ತಂಪಾಗಿದೆ. ಭಾನುವಾರ ಜಿಲ್ಲೆಯ ಕೆಲವು ಭಾಗಗಳಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಿದೆ. ಇನ್ನು ಇಂದು ಮುಂಜಾನೆಯಿಂದಲೇ ಮೋಡ ಮುಸುಕಿದ ವಾತಾವರಣವಿದ್ದು, ಸಂಜೆ ವೇಳೆ ಜೋರು ಮಳೆಯಾಗುವ ಸಾಧ್ಯತೆ ಹೆಚ್ಚಿದೆ.

ಇನ್ನು ಕರ್ನಾಟಕದ ಅನೇಕ ಭಾಗಗಳಲ್ಲಿ ಮಳೆಯಾಗುತ್ತಿದ್ದು, ಜನರು ಸಂತಸಗೊಂಡಿದ್ದಾರೆ. ಮುಂದಿನ ಮೂರು ದಿನ ಕರ್ನಾಟಕದ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ. ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇನ್ನು ರಾಜ್ಯದಲ್ಲಿ ಮೊದಲ ಮಳೆಗಳಿಂದ ಕೆಲವು ಅವಾಂತರಗಳು ಕೂಡ ಸಂಭವಿಸುತ್ತಿದ್ದು, ಜನ ಎಚ್ಚರಿಕೆಯಿಂದ ಇರಬೇಕಾಗಿದೆ. ಹಲವೆಡೆ ಏಕಾಏಕಾಗಿ ಗುಡುಗು ಸಿಡಿಲು ಸಹಿತ ಭಾರಿಯಾಗುತ್ತಿದ್ದರೆ, ಇನ್ನು ಕೆಲ ಭಾಗಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗುತ್ತಿದೆ. ಹೀಗಾಗಿ ಈ ಸಮಯದಲ್ಲಿ ಜನರು ಆದಷ್ಟು ಎಚ್ಚರ ವಹಿಸಬೇಕಾಗಿದೆ.
-
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
ಬೇಸಿಗೆಯಲ್ಲಿ ತಣ್ಣೀರಿನ ಸ್ನಾನ ಮಾಡುವ ಮೊದಲು ತಿಳಿದುಕೊಳ್ಳಬೇಕಾದ ವಿಷಯಗಳು -
ಬೆಂಗಳೂರಿಗರೇ ಎಚ್ಚರ; ಸೂರ್ಯನ ಪ್ರತಾಪಕ್ಕೆ ಕೂಲ್ ಸಿಟಿ ಕಂಗಾಲು: ಮುಂದಿನ ಎರಡು ದಿನ ತಾಪಮಾನ ಮತ್ತಷ್ಟು ಏರಿಕೆ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ











Click it and Unblock the Notifications