ಉಡುಪಿ ಜಿಲ್ಲೆಯಲ್ಲಿ ಮನೆ ಕಟ್ಟಲು ಮಳೆ ನೀರು ಕೊಯ್ಲು ಕಡ್ಡಾಯ
ಉಡುಪಿ, ಜುಲೈ 11: ಉಡುಪಿ ಜಿಲ್ಲೆಯ ಎಲ್ಲಾ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಮನೆ ನಿರ್ಮಾಣ ಸಂದರ್ಭ ಮಳೆ ನೀರು ಮರುಪೂರಣ ಯೋಜನೆ ಅಳವಡಿಕೆಯನ್ನು ಕಡ್ಡಾಯಗೊಳಿಸಲಾಗಿದೆ. ಇಲ್ಲದಿದ್ದರೆ, ನಿರ್ಮಾಣ ಪೂರ್ಣಗೊಂಡಿದೆ ಎಂದು ನೀಡಲಾಗುವ ಪ್ರಮಾಣಪತ್ರ (ಕಂಪ್ಲೀಷನ್ ಸರ್ಟಿಫಿಕೇಟ್) ಸಿಗುವುದಿಲ್ಲ ಎಂದು ತಿಳಿದುಬಂದಿದೆ.
ಭಾರತ ಸರ್ಕಾರವು ಜಲಭದ್ರತೆಗಾಗಿ ಜಲಶಕ್ತಿ ಅಭಿಯಾನ ಎಂಬ ಕಾರ್ಯಕ್ರಮವನ್ನು ರಾಜ್ಯ ಸರ್ಕಾರದ ಸಹಯೋಗದಲ್ಲಿ ಹಮ್ಮಿಕೊಂಡಿದ್ದು, ಉಡುಪಿ ಜಿಲ್ಲೆಯಲ್ಲಿ ಜಲ ಸಂರಕ್ಷಣೆ ಆಂದೋಲನವನ್ನು ಪರಿಣಾಮಕಾರಿಯಾಗಿ ಕೈಗೊಳ್ಳಲು ನಿನ್ನೆ ಸಂಜೆ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರ ಅಧ್ಯಕ್ಷತೆಯಲ್ಲಿ ತೀರ್ಮಾನಿಸಲಾಯಿತು.
ಈಗಾಗಲೇ ಪ್ರಗತಿಯಲ್ಲಿರುವ ಮನೆಗಳು, ಕಾಮಗಾರಿ ಪೂರ್ಣಗೊಳ್ಳುವ ಮೊದಲು ಮಳೆ ನೀರು ಕೊಯ್ಲು ಯೋಜನೆಯನ್ನು ಕೈಗೊಳ್ಳಬೇಕು. ಹೊಸದಾಗಿ ನಿರ್ಮಾಣ ಗೊಳ್ಳಲಿರುವ ಮನೆಗಳ ಮೂಲ ಯೋಜನೆಯಲ್ಲಿಯೇ ಮಳೆ ನೀರು ಕೊಯ್ಲು ಯೋಜನೆಯೂ ಸೇರಿರಬೇಕು. ಇಲ್ಲದಿದ್ದರೆ ಅಂತಹ ಮನೆ ನಿರ್ಮಾಣಕ್ಕೆ ಲೈಸೆನ್ಸ್ ನೀಡದಂತೆ ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆ ಹಾಗೂ ಗ್ರಾಮ ಪಂಚಾಯತ್ ಗಳಿಗೆ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಸೂಚಿಸಿದರು.

ತೆರೆದ ಬಾವಿ, ಕೊಳವೆ ಬಾವಿ ಅಥವಾ ಪ್ರತ್ಯೇಕ ಇಂಗು ಗುಂಡಿ ಕೊರೆದು ಮಳೆ ನೀರು ಶೇಖರಣೆಗೆ ಯೋಜನೆ ಹಾಕಿಕೊಳ್ಳಬೇಕು. ಇತ್ತೀಚಿನ ಬೇಸಿಗೆಯಲ್ಲಿ ಜಿಲ್ಲೆಯ ಹಲವು ಪ್ರದೇಶಗಳಲ್ಲಿ ತೀವ್ರ ನೀರಿನ ಸಮಸ್ಯೆ ಎದುರಾಗಿದ್ದು, ಈ ಹಿನ್ನೆಲೆಯಲ್ಲಿ ಮಳೆ ನೀರು ಕೊಯ್ಲು ಕಡ್ಡಾಯಗೊಳಿಸಲಾಗುವುದು ಎಂದು ಅವರು ಹೇಳಿದರು.
-
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
Bengaluru Airport: ಮಳೆ ಅಬ್ಬರಕ್ಕೆ 30 ವಿಮಾನಗಳ ಮಾರ್ಗ ಬದಲು, ಏರ್ಪೋರ್ಟ್ ಟರ್ಮಿನಲ್ನಲ್ಲಿ ನೀರು ಸೋರಿಕೆ -
Vastu Alert: ಹಳೆಯ ಬಾವಿ ಮೇಲೆ ಮನೆ ಕಟ್ಟಿದ್ರೆ ಏನಾಗುತ್ತದೆ? ಇಲ್ಲಿದೆ ವಾಸ್ತು ಸತ್ಯಗಳು -
ವಾಸ್ತು ಪ್ರಕಾರ ಖಾಲಿ ಜಾಗ ಬಳಕೆ ಹೇಗೆ? ತಪ್ಪು ಮಾಡಿದರೆ ಕಷ್ಟಗಳು ಖಚಿತ -
ನಿಮ್ಮ ಮನೆಯ ವಾಸ್ತು ಸರಿಯಿದೆಯೇ? ಶಾಂತಿ ಮತ್ತು ಪ್ರಗತಿಗಾಗಿ ಇಲ್ಲಿವೆ ಪರಿಹಾರಗಳು -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ












Click it and Unblock the Notifications