ಉಡುಪಿಯಲ್ಲಿ ಮುಂದುವರೆದ ಮಳೆ: ಇಂದು ಆರೆಂಜ್ ಅಲರ್ಟ್
ಉಡುಪಿ, ಸೆಪ್ಟೆಂಬರ್ 12: ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಉಡುಪಿ ಜಿಲ್ಲೆಯಲ್ಲೂ ಕಳೆದ ಎರಡು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದೆ. ಇಂದು ಕೂಡ ಮಳೆ ಮುಂದುವರೆದಿದೆ.
ಇಂದು ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ನಾಡದೋಣಿ ಮೀನುಗಾರರು ಕಡಲಿಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಹವಾಮಾನ ಇಲಾಖೆ ಮುನ್ಸೂಚನೆಯಂತೆ ಅರಬ್ಬಿ ಸಮುದ್ರ ತೀರದ ಪ್ರದೇಶಗಳಲ್ಲಿ ಗಾಳಿ ಸಹಿತ ಮಳೆಯಾಗುತ್ತಿದೆ. ಕಳೆದ 24 ಗಂಟೆಯಲ್ಲಿ ಜಿಲ್ಲೆಯಲ್ಲಿ 89 ಮಿಲಿ ಮೀಟರ್ ಸರಾಸರಿ ಮಳೆ ಬಿದ್ದಿದೆ. ಉಡುಪಿ ತಾಲೂಕಿನಲ್ಲಿ 82, ಕುಂದಾಪುರ 108 , ಕಾರ್ಕಳ ತಾಲೂಕಿನಲ್ಲಿ 76 ಮೀಟರ್ ಮಳೆ ಬಿದ್ದಿದೆ.
ಮಂಗಳೂರಿನಲ್ಲಿ ಭಾರೀ ಮಳೆ; ಕೊಂಚಾಡಿಯ ಫ್ಲಾಟ್ ಹಿಂಭಾಗದ ಧರೆ ಕುಸಿತ
Recommended Video
ಭಾನುವಾರ ಕೂಡ ಆರೆಂಜ್ ಅಲರ್ಟ್ ಮುಂದುವರಿಯಲಿದೆ. ಸೋಮವಾರ ಎಲ್ಲೋ ಅಲರ್ಟ್ ಇದ್ದು, ಸುಮಾರು 60 ರಿಂದ 110 ಮಿಲಿಮೀಟರ್ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಆಳ ಸಮುದ್ರ ಮೀನುಗಾರಿಕೆಗೆ ತೆರಳಿರುವ ಬೋಟುಗಳು ತಮ್ಮ ಕಸುಬನ್ನು ಮುಂದುವರಿಸಿದ್ದು, ನಾಡದೋಣಿ ಮೀನುಗಾರರಿಗೆ ಎಚ್ಚರಿಕೆಯಿಂದ ಇರುವಂತೆ ಸಂದೇಶ ರವಾನಿಸಲಾಗಿದೆ.