ಡೈವೋರ್ಸ್ ಕೊಟ್ಟು ಮತ್ತೆ ಬಿಜೆಪಿಯ ಕೈಹಿಡಿದ ಹಾಲಾಡಿ: ರಾಕೇಶ್ ಮಲ್ಲಿ ವ್ಯಂಗ್ಯ
ಉಡುಪಿ, ಫೆಬ್ರವರಿ 4: ಡೈವೋರ್ಸ್ ಕೊಟ್ಟ ಮೇಲೆ ಮರು ಮದುವೆಯಾಗಲ್ಲ ಎಂದು ಹೇಳಿದ್ದ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಮತ್ತೆ ಅದೇ ಡೈವೋರ್ಸ್ ಕೊಟ್ಟ ಬಿಜೆಪಿ ಪಕ್ಷದ ಕೈಹಿಡಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಹಾಗು ಇಂಟಕ್ ರಾಜ್ಯಾಧ್ಯಕ್ಷ ರಾಕೇಶ್ ಮಲ್ಲಿ ವ್ಯಂಗ್ಯವಾಡಿದ್ದಾರೆ.
ಉಡುಪಿಯಲ್ಲಿ ಮಾಧ್ಯಮ ಗೋಷ್ಟಿಯಲ್ಲಿ ಮಾತನಾಡಿದ ಅವರು ಬಿಜೆಪಿ ಸೇರುವುದು ಹಾಲಾಡಿ ವೈಯಕ್ತಿಕ ವಿಚಾರ. ಆದರೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಕುಂದಾಪುರದ ಜನರಿಗೆ ಹಾಲಾಡಿ ಶ್ರೀನಿವಾಸ್ ಶೆಟ್ಟಿ ವಂಚಿಸಿದ್ದಾರೆ ಎಂದು ಅವರು ಆರೋಪಿಸಿದರು.
"ಬಜೆಟ್ ಸಮಯದಲ್ಲಿ ಶ್ರೀನಿವಾಸ್ ಶೆಟ್ಟಿ ರಾಜೀನಾಮೆ ನೀಡಿದ್ದು ಸರಿಯಲ್ಲ," ಎಂದು ಹೇಳಿದ ಅವರು, "ಕುಂದಾಪುರದ ಜನತೆಗೆ ಕೊಟ್ಟ ಮಾತನ್ನು ಶ್ರೀನಿವಾಸ್ ಶೆಟ್ಟಿ ಉಳಿಸಿಕೊಂಡಿಲ್ಲ," ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕುಂದಾಪುರದ ಜನತೆಗೆ ಸುಳ್ಳು ಹೇಳಿ ಶಾಸಕರಾಗಿದ್ದೀರಿ ಎಂದು ವಾಗ್ದಾಳಿ ನಡೆಸಿದ ರಾಕೇಶ್ ಮಲ್ಲಿ, ಮುಂಬರುವ ಚುನಾವಣೆಯಲ್ಲಿ ಕ್ಷೇತ್ರದ ಜನತೆ ಹಾಲಾಡಿ ಅವರಿಗೆ ಸರಿಯಾದ ಮದ್ದು ನೀಡುತ್ತಾರೆ ಎಂದು ಹೇಳಿದರು.
ರಾಜ್ಯ ಬಜೆಟ್ ಸಂದರ್ಭದಲ್ಲೇ ಶ್ರೀನಿವಾಸ್ ಶೆಟ್ಟಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಕುಂದಾಪುರವನ್ನು ಅನಾಥವಾಗಿಸಿದ್ದಾರೆ ಎಂದು ಅವರು ಕಿಡಿಕಾರಿದರು. ಹಾಲಾಡಿಯವರಿಗೆ ಪಕ್ಷೇತರನಾಗಿ ಗೆಲ್ಲುವ ವಿಶ್ವಾಸವಿಲ್ಲ. ಆ ಕಾರಣಕ್ಕಾಗಿಯೇ ಮತ್ತೆ ಬಿಜೆಪಿ ಸೇರಿಕೊಂಡಿದ್ದಾರೆ ಎಂದು ಅವರು ದೂರಿದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications