ವಿಡಿಯೋ ವೈರಲ್; ಉಡುಪಿಯಲ್ಲಿ ಹುಲಿ ಕುಣಿತಕ್ಕೆ ಸ್ಟೆಪ್ ಹಾಕಿದ ರಕ್ಷಿತ್ ಶೆಟ್ಟಿ
Recommended Video
ಉಡುಪಿ, ಆಗಸ್ಟ್ 23: ಶ್ರೀ ಕೃಷ್ಣನ ಊರು ಉಡುಪಿಯಲ್ಲಿ ಕೃಷ್ಣ ಜನ್ಮಾಷ್ಟಮಿ ವೈಭವದಿಂದ ನಡೆಯುತ್ತಿದೆ. ಕೃಷ್ಣ ಮಠದಲ್ಲಿ ಜನ್ಮಾಷ್ಟಮಿಯ ವಿಶೇಷ ಪೂಜೆ ಪುನಸ್ಕಾರಗಳೊಂದಿಗೆ 9 ರಂಧ್ರದ ನವಗ್ರಹ ಕಿಟಕಿಯ ಮೂಲಕ ಭಕ್ತರು ಕೃಷ್ಣನ ದರ್ಶನ ಪಡೆಯುತ್ತಿದ್ದಾರೆ.
ಮೊಸರು ಗಡಿಗೆ ಒಡೆವ ವಿಟ್ಲಪಿಂಡಿ ಹಾಗೂ ಕೃಷ್ಣನ ಬದುಕಿನ ಚಿತ್ರಣ ನೀಡುವ ಸಾಂಸ್ಕೃತಿಕ ಕಾರ್ಯಕ್ರಮಗಳನ್ನೂ ಆಯೋಜಿಸಲಾಗುತ್ತಿದೆ. ಇನ್ನೊಂದೆಡೆ ತಾಸೆಯ ಬಡಿತಕ್ಕೆ ಹೆಜ್ಜೆಹಾಕುವ ಹುಲಿವೇಷಧಾರಿಗಳ ಕುಣಿತವನ್ನು ನೋಡುವುದೇ ಕಣ್ಣಿಗೆ ಹಬ್ಬವೆನಿಸಿದೆ. ಹುಲಿಕುಣಿತಕ್ಕೆ ಈ ಬಾರಿ ಮತ್ತೂ ಒಂದು ಆಕರ್ಷಣೆ ಸೇರ್ಪಡೆಯಾಗಿದೆ.

ಸ್ಯಾಂಡಲ್ ವುಡ್ ನಟ ರಕ್ಷಿತ್ ಶೆಟ್ಟಿ ಹುಲಿ ನೃತ್ಯಕ್ಕೆ ಸ್ಟೆಪ್ ಹಾಕಿರುವುದೇ ಆ ವಿಶೇಷ. ಅಷ್ಟಮಿಯ ಸಂದರ್ಭದಲ್ಲಿ ಜೂನಿಯರ್ ಫ್ರೆಂಡ್ಸ್ ಕೊರಂಗ್ರಪಾಡಿ ಉಡುಪಿ ತಂಡದ ಜೊತೆ ರಕ್ಷಿತ್ 'ಪಿಲಿ ನಲಿಕೆ' ಮಾಡಿದರು.

ತಾಸೆಯ ಬಡಿತಕ್ಕೆ ಹೆಜ್ಜೆ ಹಾಕಿದ ರಕ್ಷಿತ್ ಶೆಟ್ಟಿ ತಮ್ಮ "ಉಳಿದವರು ಕಂಡಂತೆ" ಚಿತ್ರದ ಹುಲಿಕುಣಿತದ ಸನ್ನಿವೇಷವನ್ನು ನೆನೆದರು. ಚಿತ್ರದಲ್ಲಿ ತಾನು ಹುಲಿವೇಷ ಹಾಕಿ ಕುಣಿದ ಪರಿಯನ್ನು ನೆನೆಯುತ್ತಲೇ ತಂಡದ ಜೊತೆ ಹೆಜ್ಜೆ ಹಾಕಿದರು.
ರಕ್ಷಿತ್ ಹೆಜ್ಜೆ ಹಾಕಿದ ಸಂದರ್ಭ ಸ್ಥಳೀಯ ಯುವಕ, ಯುವತಿಯರು ಅವರಿಗೆ ಸಾಥ್ ನೀಡಿದರು. ರಕ್ಷಿತ್ ಶೆಟ್ಟಿ ಅವರ ಪಿಲಿ ನಲಿಕೆಯ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
-
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ












Click it and Unblock the Notifications