ಉಡುಪಿಯಲ್ಲಿ ರಂಜಾನ್ ಆಚರಣೆ: ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆ
ಉಡುಪಿ. ಜೂನ್.15: ಕರಾವಳಿಯಲ್ಲಿ ಇಂದು ಸಂಭ್ರಮದಿಂದ ರಂಜಾನ್ ಹಬ್ಬ ಆಚರಿಸಲಾಗುತ್ತಿದೆ. ಹಬ್ಬದ ಹಿನ್ನೆಲೆಯಲ್ಲಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಮುಸ್ಲಿಂ ಬಾಂಧವರು ಮಸೀದಿಗಳಿಗೆ ತೆರಳಿ ಸಾಮೂಹಿಕ ನಮಾಜ್ ನಿರ್ವಹಿಸಿದರು.
ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆಯೂ ಸಂಪನ್ನಗೊಂಡಿತು. ಉಡುಪಿಯ ಇಂದ್ರಾಳಿ, ನಗರ , ಕೊಡವೂರು , ಅಂಬಾಗಿಲು ಮತ್ತಿತರೆಡೆ ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆಗೆ ಜನಜಂಗುಳಿ ಇತ್ತು.
ಹಬ್ಬದ ಹಿನ್ನೆಲೆಯಲ್ಲಿ ಹೊಸ ಬಟ್ಟೆ ತೊಟ್ಟು ಮಸೀದಿಗಳಿಗೆ ತೆರಳುತ್ತಿರುವ ಮುಸ್ಲಿಂ ಬಾಂಧವರು ಮಸೀದಿಗಳಲ್ಲಿ ಸಾಮೂಹಿಕ ನಮಾಜ್ ಮತ್ತು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಕಳೆದ ತಿಂಗಳ ಹದಿನೇಳನೇ ತಾರೀಕಿನಿಂದ ಮುಸ್ಲಿಂ ಬಾಂಧವರು ಉಪವಾಸದಲ್ಲಿದ್ದರು.

ಒಂದು ತಿಂಗಳ ಉಪವಾಸ ಮುಗಿದ ಬಳಿಕ ಮರುದಿನ ಹಬ್ಬ ಆಚರಿಸುವುದು ವಾಡಿಕೆ. ಅದರಂತೆ ಇಂದು ಬೆಳಗ್ಗೆಯೇ ಮಸೀದಿಗಳಿಗೆ ತೆರಳಿದ ಮುಸ್ಲಿಂ ಬಾಂಧವರು ವಿಶೇಷ ಪ್ರಾರ್ಥನೆ ನಡೆಸಿ ಪರಸ್ಪರ ಶುಭಾಷಯ ವಿನಿಮಯ ಮಾಡಿಕೊಂಡರು.
ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ ಮುಸ್ಲಿಂ ಬಾಂಧವರು ಬಂಧು ಮಿತ್ರರ ಮನೆಗಳಿಗೆ ತೆರಳುತ್ತಾರೆ. ಅಲ್ಲಿ ಬಂಧು ಮಿತ್ರರಿಗೆ ವಿಶೇಷ ಊಟೋಪಚಾರದ ವ್ಯವಸ್ಥೆ ಮಾಡುತ್ತಾರೆ. ಕೇರಳದಲ್ಲಿ ಚಂದ್ರದರ್ಶನವಾದ ಹಿನ್ನೆಲೆಯಲ್ಲಿ ಕರಾವಳಿಯಲ್ಲಿ ಇಂದು ಹಬ್ಬ ಆಚರಿಸಲಾಗುತ್ತಿದೆ.

ಬೆಂಗಳೂರು ಸಹಿತ ರಾಜ್ಯದ ಇತರೆಡೆಗಳಲ್ಲಿ ಹಬ್ಬ ನಾಳೆ ನಡೆಯಲಿದೆ. ಈದುಲ್ ಫಿತರ್ ಎಂದೂ ಕರೆಯಲ್ಪಡುವ ಈ ಹಬ್ಬದಲ್ಲಿ ಮುಸ್ಲಿಮರು ತಮ್ಮ ಬಂಧುಗಳಿಗೆ ಪರಸ್ಪರ ದಾನಗಳನ್ನೂ ನೀಡುತ್ತಾರೆ. ಪ್ರತೀ ಕುಟುಂಬದ ಸದಸ್ಯ ತಮ್ಮ ಆಪ್ತೇಷ್ಟರಿಗೆ ನಿಗದಿತ ಪ್ರಮಾಣದ ಅಕ್ಕಿಯನ್ನು ಕಡ್ಡಾಯವಾಗಿ ದಾನ ಮಾಡುವುದು ಈ ಹಬ್ಬದ ವಿಶೇಷಗಳಲ್ಲೊಂದು.
ಪುಟ್ಟ ಮಕ್ಕಳಿಗೆ ಮತ್ತು ವಯಸ್ಕರಿಗೆ ತಮ್ಮ ಶಕ್ತ್ಯಾನುಸಾರ ಹಣ ನೀಡುವ ಕ್ರಮವೂ ಈ ಹಬ್ಬದಲ್ಲಿ ರೂಢಿಯಲ್ಲಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications