ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನ್ಯಾಯಾಧೀಶರ ಎದುರೇ ವಕೀಲರ ಮೇಲೆ ಶೂ ಎಸೆದ ಆರೋಪಿ

By ಉಡುಪಿ ಪ್ರತಿನಿಧಿ
|
Google Oneindia Kannada News

ಉಡುಪಿ ಏಪ್ರಿಲ್ 14: ನ್ಯಾಯಾಲಯದ ಕಲಾಪ ನಡೆಯುತ್ತಿದ್ದ ಸಂದರ್ಭದಲ್ಲಿ ಅತ್ಯಾಚಾರ ಪ್ರಕರಣದ ಆರೋಪಿಯೊಬ್ಬ ಗುರುವಾರ ನ್ಯಾಯಾಧೀಶರ ಎದುರೇ ಸರ್ಕಾರಿ ವಕೀಲರ ಮೇಲೆ ಶೂ ತೂರಿದ್ದಾನೆ.

ಉಡುಪಿಯ ಪೋಕ್ಸೋ ನ್ಯಾಯಾಲಯದಲ್ಲಿ ಈ ಘಟನೆ ನಡೆದಿದೆ.

ಮಂಗಳೂರು ಪಬ್ ದಾಳಿ: ಆರೋಪಿಗಳು ಖುಲಾಸೆಗೊಳ್ಳಲು ಕಾರಣಗಳುಮಂಗಳೂರು ಪಬ್ ದಾಳಿ: ಆರೋಪಿಗಳು ಖುಲಾಸೆಗೊಳ್ಳಲು ಕಾರಣಗಳು

5 ವರ್ಷಗಳ ಹಿಂದೆ ಕುಂದಾಪುರ ತಾಲೂಕಿನಲ್ಲಿ ಹದಿನೈದು ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆದಿತ್ತು. ಈ ಸಂಬಂಧ ಪೊಲೀಸರು ಬ್ರಹ್ಮಾವರ ನಿವಾಸಿ ಪ್ರಶಾಂತ ಕುಲಾಲ್ ಎಂಬಾತನನ್ನು ಬಂಧಿಸಿದ್ದರು. ಬಳಿಕ ಜಾಮೀನಿನಿಂದ ಆತ ಬಿಡುಗಡೆ ಹೊಂದಿದ್ದ.

Rape Accused Flings shoes at Special Prosecutor in Udupi court

ಬಳಿಕ ಆತನ ಮೇಲೆ ಕೊಲೆ ಪ್ರಕರಣವೊಂದರ ಆರೋಪವೂ ದಾಖಲಾಗಿತ್ತು. ಗುರುವಾರ ಸಂಜೆ ಬಾಲಕಿಯ ಅತ್ಯಾಚಾರ ಪ್ರಕರಣದ ವಿಚಾರಣೆ ನಡೆಯಿತು. ಈ ವೇಳೆ ಆರೋಪಿಯ ಅಪರಾಧ ಹಿನ್ನೆಲೆಯನ್ನು ಉಲ್ಲೇಖಿಸಿದ್ದ ಸರ್ಕಾರಿ ವಿಶೇಷ ಅಭಿಯೋಜಕ ವಿಜಯ ರಾಜು ಪೂಜಾರಿ ಆರೋಪಿಗೆ ಕಠಿಣ ಶಿಕ್ಷೆ ನೀಡುವಂತೆ ವಾದ ಮಂಡಿಸಿದ್ದರು.

ತೀರ್ಪು ಪ್ರಕಟಿಸಿದ ನ್ಯಾಯಾಧೀಶರು ಆರೋಪಿ ಪ್ರಶಾಂತ್ ಕುಲಾಲ್‌ಗೆ 25 ವರ್ಷ ಜೈಲು ಶಿಕ್ಷೆ ಹಾಗೂ 25 ಸಾವಿರ ರೂಪಾಯಿ ದಂಡ ವಿಧಿಸಿದ್ದರು. ತೀರ್ಪು ಪ್ರಕಟವಾಗುತ್ತಿದ್ದಂತೆ ಆಕ್ರೋಶ ವ್ಯಕ್ತಪಡಿಸಿದ ಪ್ರಶಾಂತ ಕುಲಾಲ್ ತನ್ನ ಶೂ ತೆಗೆದು ನ್ಯಾಯಾಧೀಶರ ಸಮ್ಮುಖದಲ್ಲೇ ವಿಜಯ ರಾಜು ಪೂಜಾರಿ ಅವರತ್ತ ಎಸೆದಿದ್ದಾನೆ.

ಅರೋಪಿಯ ಈ ಕೃತ್ಯ ನ್ಯಾಯಾಲಯವನ್ನು ಅವಮಾನಿಸಿದ ಪ್ರಕರಣವಾಗಿದೆ ಎಂದು ಆತನ ವಿರುದ್ಧ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಕೋರಿಕೆಯ ಮೇರೆಗೆ ವಿಜಯ ರಾಜು ಪೂಜಾರಿ ಅವರಿಗೆ ಭದ್ರತೆ ನೀಡಲಾಗಿದೆ.

English summary
In a shocking incident at Udupi sessions court, a man accused of rape flung his shoes at a special prosecutor in-front of district Judge here on Thursday, March 12. A case has been registered in the Udupi town station against the accused.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X