'ಸ್ಕಿಲ್ ಕನೆಕ್ಟ್' ಪರಿಷ್ಕೃತ ಪೋರ್ಟಲ್ ಜುಲೈ 15ರಂದು ಲೋಕಾರ್ಪಣೆ: ಅಶ್ವಥ್ ನಾರಾಯಣ
ಕುಂದಾಪುರ, ಜೂ.29: ಹೆಚ್ಚು ಪರಿಣಾಮಕಾರಿಯಾಗುವಂತೆ ರೂಪಿಸಲಾಗಿರುವ ಕೌಶಲಾಭಿವೃದ್ಧಿ ಇಲಾಖೆಯ ಪರಿಷ್ಕೃತ 'ಸ್ಕಿಲ್ ಕನೆಕ್ಟ್ ಪೋರ್ಟಲ್' ಅನ್ನು ವಿಶ್ವ ಯುವಜನ ಕೌಶಲ್ಯಾಭಿವೃದ್ಧಿ ದಿನವಾದ ಜುಲೈ 15ರಂದು ಲೋಕಾರ್ಪಣೆ ಮಾಡಲಾಗುವುದು ಎಂದು ಕೌಶಲ್ಯಾಭಿವೃದ್ಧಿ ಸಚಿವರಾದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.
ಕೌಶಲ್ಯಾಭಿವೃದ್ಧಿ ಇಲಾಖೆ ವತಿಯಿಂದ ಇಲ್ಲಿ ಭಂಡಾರ್ಕರ್ಸ್ ಕಾಲೇಜಿನ ಆವರಣದಲ್ಲಿ ಬುಧವಾರ ಏರ್ಪಡಿಸಲಾಗಿದ್ದ ಉದ್ಯೋಗ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು, ಉದ್ಯೋಗಾಕಾಂಕ್ಷಿಗಳು ಹಾಗೂ ಉದ್ಯೋಗದಾತರನ್ನು ಒಂದೇ ವೇದಿಕೆಯಡಿ ತರಲು ಈ ಪೋರ್ಟಲ್ ತುಂಬಾ ಅನುಕೂಲಕರವಾಗಿದೆ ಎಂದರು.
ಈ ಪೋರ್ಟಲ್ ಮೂಲಕ ಉದ್ಯೋಗ ಸಂಬಂಧಿ ಅವಕಾಶಗಳನ್ನು ತಿಳಿದು ಮೌಲ್ಯಮಾಪನ ಮಾಡಿ ಕೌಶಲಗಳ ಕೊರತೆ ಬಗ್ಗೆ ವಿವರಗಳನ್ನು ತಿಳಿಯಲು ಅವಕಾಶ ಮಾಡಿಕೊಡುತ್ತಿದೆ. ಇದರಿಂದಾಗಿ, ಉದ್ಯಮಗಳ ಮಾನವ ಸಂಪನ್ಮೂಲ ಕೊರತೆಯನ್ನು ತುಂಬಲು ಪೋರ್ಟಲ್ ಸಹಕಾರಿಯಾಗಲಿದೆ. ಇಲಾಖೆಯ ಈ ಪೋರ್ಟಲ್ ಮುಂಚೆ ಕೂಡ ಇತ್ತು. ಈಗ ಇದನ್ನು ಹೆಚ್ಚು ಪರಿಣಾಮಕಾರಿಯಾಗುವಂತೆ ಪರಿಷ್ಕೃತಗೊಳಿಸಲಾಗಿದೆ ಎಂದು ಸಚಿವರು ವಿವರಿಸಿದರು.

ವಿದ್ಯಾರ್ಥಿಗಳಿಗೆ ಕೌಶಲಗಳ ತರಬೇತಿ ನೀಡುವ ಸಲುವಾಗಿ ಸರ್ಕಾರವು ಕಂಪನಿಗಳ ಜೊತೆ ಕೈಜೋಡಿಸಿದೆ. ಉದ್ಯಮಗಳ ಬೇಡಿಕೆಯೇ ಬೇರೆ, ನಾವು ಸೃಷ್ಟಿಸುತ್ತಿರುವ ವಿದ್ಯಾರ್ಥಿಗಳ ಕೌಶಲಗಳೇ ಬೇರೆ ಎನ್ನುವ ಪರಿಸ್ಥಿತಿ ಇರಬಾರದು. ಉದ್ಯೋಗಾವಕಾಶಗಳು ಹಾಗೂ ಎಂತಹ ಉದ್ಯೋಗಗಳಿಗೆ ಬೇಡಿಕೆ ಇದೆ ಎಂಬ ಸಮರ್ಪಕ ಮಾಹಿತಿ ಸಿಗುವಂತೆ ಮಾಡಲಾಗುವುದು. ಉದ್ಯೋಗಾಕಾಂಕ್ಷಿಗಳಿಗೆ ಕನಸಿನ ಉದ್ಯೋಗ ದೊರಕಿಸುವುದಕ್ಕಾಗಿ ತಂತ್ರಜ್ಞಾನವನ್ನು ಸೂಕ್ತವಾಗಿ ಬಳಸಿಕೊಂಡು ವ್ಯವಸ್ಥೆಯಲ್ಲಿ ಬದಲಾವಣೆ ತರಲಾಗುತ್ತದೆ ಎಂದರು.
ರಾಷ್ಟ್ರೀಯ ಶಿಕ್ಷಣ ನೀತಿಯಡಿ ತಾಂತ್ರಿಕತೆಯ ಜ್ಞಾನಶಾಖೆಗಳಾದ ಡೇಟಾ ಅನಾಲಿಟಿಕ್ಸ್, ಕೃತಕ ಬುದ್ಧಿಮತ್ತೆ, ಸೈಬರ್ ಸೆಕ್ಯುರಿಟಿ ಇವುಗಳ ಕಲಿಕೆಯನ್ನು ಕಡ್ಡಾಯಗೊಳಿಸಲಾಗಿದೆ. ಇದಕ್ಕಾಗಿ ನ್ಯಾಸ್ಕಾಂ ಜೊತೆ ಒಪ್ಪಂದ ಮಾಡಿಕೊಂಡಿರುವ ಮೊದಲ ರಾಜ್ಯ ಕರ್ನಾಟಕ. ಹಾಗೆಯೇ ಇನ್ಫೋಸಿಸ್ ಸ್ಪ್ರಿಂಗ್ ಬೋರ್ಡ್ ಜೊತೆ ಒಪ್ಪಂದ ಮಾಡಿಕೊಳ್ಳಲಾಗಿದ್ದು, ಅದರಲ್ಲಿ 5000 ಆಡ್ ಆನ್ ಕೋರ್ಸ್ಗಳಿವೆ. ಸರ್ಕಾರಿ ಕಾಲೇಜುಗಳಿಗೆ ಐಟಿ ಸಂಸ್ಥೆಗಳಿಂದ 27,000 ಕಂಪ್ಯೂಟರ್ಗಳನ್ನು ಕೊಡಿಸಲಾಗಿದೆ ಎಂದು ಅಶ್ವತ್ಥನಾರಾಯಣ ತಿಳಿಸಿದರು.

ರಾಜ್ಯದಲ್ಲಿ 1200 ಐಟಿಐ ಸಂಸ್ಥೆಗಳಿವೆ. ಇದರಲ್ಲಿ ಒಂದೂವರೆ ಲಕ್ಷ ವಿದ್ಯಾರ್ಥಿಗಳಿಗೆ ದೀರ್ಘಾವಧಿ ಕೋರ್ಸ್ಗಳನ್ನು ಕಲಿಯಲು ಹಾಗೂ ಒಂದು ಲಕ್ಷ ವಿದ್ಯಾರ್ಥಿಗಳಿಗೆ ಅಲ್ಪಾವಧಿ ಕೋರ್ಸ್ಗಳನ್ನು ಕಲಿಯಲು ಅವಕಾಶ ಇದೆ. ಪಾಲಿಟೆಕ್ನಿಕ್ನಲ್ಲಿ ಮುಂಚೆ 30,000 ಇದ್ದ ಪ್ರವೇಶಾತಿ ಈಗ 75,000 ಕ್ಕೆ ಹೆಚ್ಚಾಗಿದೆ. ರಾಜ್ಯದ 31 ಜಿಲ್ಲೆಗಳಲ್ಲೂ ಜಿಟಿಟಿಸಿ ಕೇಂದ್ರಗಳಿವೆ. ವೈದ್ಯಕೀಯ ಕಾಲೇಜು ಒಂದನ್ನು ಬಿಟ್ಟು ರಾಜ್ಯದಲ್ಲಿ ಬೇರೆ ಯಾವುದೇ ಕೋರ್ಸ್ಗೆ ಸೀಟಿನ ಕೊರತೆ ಇಲ್ಲ ಎಂದು ತಿಳಿಸಿದರು.
ಇದೇ ವೇಳೆ, ರಾಜಕೀಯ ನಾಯಕರಾಗಿದ್ದ ದಿವಂಗತ ವಿ.ಎಸ್.ಆಚಾರ್ಯ ಅವರನ್ನು ನೆನೆದು, ಅವರ ನಡೆ-ನುಡಿ ತನಗೆ ಸದಾ ಸ್ಫೂರ್ತಿ ಎಂದರು. ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಮತ್ತಿತರರು ಇದ್ದರು.
-
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications