ಸಾಲುಮರದ ತಿಮ್ಮಕ್ಕನ ಪದ್ಮಶ್ರೀ ಪ್ರಶಸ್ತಿಗೂ ಉಡುಪಿಗೂ ಏನಿದು ನಂಟು?
ಉಡುಪಿ, ಸೆಪ್ಟೆಂಬರ್ 17: ಸಾಲು ಮರದ ತಿಮ್ಮಕ್ಕನಿಗೆ ಪದ್ಮಶ್ರೀ ಪುರಸ್ಕಾರ ಸಿಕ್ಕಿದ್ದು ಎಲ್ಲರಿಗೂ ಗೊತ್ತು. ಆದರೆ ಪದ್ಮಶ್ರೀ ಸಿಗೋದಕ್ಕೆ ಕಾರಣವೇನು ಅಂತ ಯಾರಿಗಾದ್ರೂ ಗೊತ್ತಿದ್ಯಾ?
ಉಡುಪಿಯ ಅಂಬಲಪಾಡಿ ದೇವಸ್ಥಾನಕ್ಕೆ ಸಾಲುಮರದ ತಿಮ್ಮಕ್ಕ ಭೇಟಿ ಕೊಟ್ಟಾಗ ಈ ರಹಸ್ಯ ಬಯಲಾಗಿದೆ. ಮೂರು ವರ್ಷಗಳ ಹಿಂದೆ ತಿಮ್ಮಕ್ಕ ಉಡುಪಿಯ ಅಂಬಲಪಾಡಿ ದೇವಸ್ಥಾನಕ್ಕೆ ಭೇಟಿ ಕೊಟ್ಟಿದ್ರು. ಆಗಿನ್ನೂ ಅವರಿಗೆ ಪದ್ಮಶ್ರೀ ಪ್ರಶಸ್ತಿ ಬಂದಿರಲಿಲ್ಲ. ತಿಮ್ಮಕ್ಕನ ಸಾಕು ಮಗನ ಮನಸ್ಸಿನಲ್ಲಿ ಈ ಬಗ್ಗೆ ಖೇದವಿತ್ತು.
ಎಂತೆಂಥವರಿಗೆಲ್ಲಾ ಪದ್ಮಶ್ರೀ ಪ್ರಶಸ್ತಿ ಬಂದಾಗಿದೆ, ತಿಮ್ಮಕ್ಕನಂತಹಾ ಹಿರಿಯ ಜೀವಕ್ಕೆ ಪ್ರಶಸ್ತಿ ಸಿಗೋದು ಯಾವಾಗ? ಇದು ಉಮೇಶ್ ಗಿದ್ದ ನೋವು. ದೇವಸ್ಥಾನದ ಆಡಳಿತ ಮಂಡಳಿಯವರು ಅಂಬಲಪಾಡಿ ಮಹಾಕಾಳಿ ದೇವಿಗೆ ತೊಡಿಸಿದ ಸೀರೆಯನ್ನು ತಿಮ್ಮಕ್ಕನಿಗೆ ಪ್ರಸಾದವಾಗಿ ನೀಡಿದರು. ಅವತ್ತೇ ಉಮೇಶ್ ಒಂದು ನಿರ್ಧಾರಕ್ಕೆ ಬಂದಿದ್ದರು.

ಒಂದು ವೇಳೆ ಪದ್ಮಶ್ರೀ ಪ್ರಶಸ್ತಿ ಬಂದರೆ ಅದೇ ಸೀರೆ ಉಡಿಸಿ ತಿಮ್ಮಕ್ಕನನ್ನು ಅಂಬಲಪಾಡಿ ಮಹಾಕಾಳಿಯ ದೇವಿಯ ದರ್ಶನಕ್ಕೆ ಕರೆತರೋದಾಗಿ ಮನಸಲ್ಲೇ ಹರಕೆ ಹೊತ್ತಿದ್ರು. ಇದೀಗ ಕಾಲ ಕೂಡಿಬಂದಿದೆ. ಸಾಲುಮರದ ತಿಮ್ಮಕ್ಕನಿಗೆ ಪದ್ಮಶ್ರೀ ಪ್ರಶ್ತಸ್ತಿ ಒಲಿದು ಬಂದಿದೆ. ಹಾಗಾಗಿ ಸೋಮವಾರ ಉಡುಪಿ ಭೇಟಿಯ ಸಂದರ್ಭದಲ್ಲಿ ತಿಮ್ಮಕ್ಕನನ್ನು ಪುತ್ರ ಉಮೇಶ್ ದೇವಿಯ ದರ್ಶನಕ್ಕೆ ಕರೆದುಕೊಂಡು ಬಂದಿದ್ದರು. ತಾಯಿಗೆ ಹೊತ್ತ ಹರಕೆ ತೀರಿಸಿ ವಾಪಸ್ಸಾದ್ರು ಮತ್ತು ಈ ಪದ್ಮಶ್ರೀ ರಹಸ್ಯವನ್ನೂ ಅವರೇ ಹೇಳಿಕೊಂಡರು.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications