ಸಾಲುಮರದ ತಿಮ್ಮಕ್ಕನ ಪದ್ಮಶ್ರೀ ಪ್ರಶಸ್ತಿಗೂ ಉಡುಪಿಗೂ ಏನಿದು ನಂಟು?
ಉಡುಪಿ, ಸೆಪ್ಟೆಂಬರ್ 17: ಸಾಲು ಮರದ ತಿಮ್ಮಕ್ಕನಿಗೆ ಪದ್ಮಶ್ರೀ ಪುರಸ್ಕಾರ ಸಿಕ್ಕಿದ್ದು ಎಲ್ಲರಿಗೂ ಗೊತ್ತು. ಆದರೆ ಪದ್ಮಶ್ರೀ ಸಿಗೋದಕ್ಕೆ ಕಾರಣವೇನು ಅಂತ ಯಾರಿಗಾದ್ರೂ ಗೊತ್ತಿದ್ಯಾ?
ಉಡುಪಿಯ ಅಂಬಲಪಾಡಿ ದೇವಸ್ಥಾನಕ್ಕೆ ಸಾಲುಮರದ ತಿಮ್ಮಕ್ಕ ಭೇಟಿ ಕೊಟ್ಟಾಗ ಈ ರಹಸ್ಯ ಬಯಲಾಗಿದೆ. ಮೂರು ವರ್ಷಗಳ ಹಿಂದೆ ತಿಮ್ಮಕ್ಕ ಉಡುಪಿಯ ಅಂಬಲಪಾಡಿ ದೇವಸ್ಥಾನಕ್ಕೆ ಭೇಟಿ ಕೊಟ್ಟಿದ್ರು. ಆಗಿನ್ನೂ ಅವರಿಗೆ ಪದ್ಮಶ್ರೀ ಪ್ರಶಸ್ತಿ ಬಂದಿರಲಿಲ್ಲ. ತಿಮ್ಮಕ್ಕನ ಸಾಕು ಮಗನ ಮನಸ್ಸಿನಲ್ಲಿ ಈ ಬಗ್ಗೆ ಖೇದವಿತ್ತು.
ಎಂತೆಂಥವರಿಗೆಲ್ಲಾ ಪದ್ಮಶ್ರೀ ಪ್ರಶಸ್ತಿ ಬಂದಾಗಿದೆ, ತಿಮ್ಮಕ್ಕನಂತಹಾ ಹಿರಿಯ ಜೀವಕ್ಕೆ ಪ್ರಶಸ್ತಿ ಸಿಗೋದು ಯಾವಾಗ? ಇದು ಉಮೇಶ್ ಗಿದ್ದ ನೋವು. ದೇವಸ್ಥಾನದ ಆಡಳಿತ ಮಂಡಳಿಯವರು ಅಂಬಲಪಾಡಿ ಮಹಾಕಾಳಿ ದೇವಿಗೆ ತೊಡಿಸಿದ ಸೀರೆಯನ್ನು ತಿಮ್ಮಕ್ಕನಿಗೆ ಪ್ರಸಾದವಾಗಿ ನೀಡಿದರು. ಅವತ್ತೇ ಉಮೇಶ್ ಒಂದು ನಿರ್ಧಾರಕ್ಕೆ ಬಂದಿದ್ದರು.

ಒಂದು ವೇಳೆ ಪದ್ಮಶ್ರೀ ಪ್ರಶಸ್ತಿ ಬಂದರೆ ಅದೇ ಸೀರೆ ಉಡಿಸಿ ತಿಮ್ಮಕ್ಕನನ್ನು ಅಂಬಲಪಾಡಿ ಮಹಾಕಾಳಿಯ ದೇವಿಯ ದರ್ಶನಕ್ಕೆ ಕರೆತರೋದಾಗಿ ಮನಸಲ್ಲೇ ಹರಕೆ ಹೊತ್ತಿದ್ರು. ಇದೀಗ ಕಾಲ ಕೂಡಿಬಂದಿದೆ. ಸಾಲುಮರದ ತಿಮ್ಮಕ್ಕನಿಗೆ ಪದ್ಮಶ್ರೀ ಪ್ರಶ್ತಸ್ತಿ ಒಲಿದು ಬಂದಿದೆ. ಹಾಗಾಗಿ ಸೋಮವಾರ ಉಡುಪಿ ಭೇಟಿಯ ಸಂದರ್ಭದಲ್ಲಿ ತಿಮ್ಮಕ್ಕನನ್ನು ಪುತ್ರ ಉಮೇಶ್ ದೇವಿಯ ದರ್ಶನಕ್ಕೆ ಕರೆದುಕೊಂಡು ಬಂದಿದ್ದರು. ತಾಯಿಗೆ ಹೊತ್ತ ಹರಕೆ ತೀರಿಸಿ ವಾಪಸ್ಸಾದ್ರು ಮತ್ತು ಈ ಪದ್ಮಶ್ರೀ ರಹಸ್ಯವನ್ನೂ ಅವರೇ ಹೇಳಿಕೊಂಡರು.
-
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ?












Click it and Unblock the Notifications