ರಾಜ್ಯ ಸಾಹಿತ್ಯ ಪ್ರಶಸ್ತಿ ನಿರಾಕರಿಸಿದ ಲೇಖಕ ಜಿ.ರಾಜಶೇಖರ್
2015ನೇ ಸಾಲಿನ ಕರ್ನಾಟಕ ರಾಜ್ಯ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿಗೆ ಆಯ್ಕೆಯಾಗಿದ್ದ ಜಿ.ರಾಜಶೇಖರ್ ಅವರು ಪ್ರಶಸ್ತಿಯನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ. ಅಸಹಿಷ್ಣುತೆ ವಾತಾವರಣ ಮುಂದೂವರೆದಿದ್ದರಿಂದ ಪ್ರಶಸ್ತಿ ಸ್ವೀಕರಿಸುತ್ತಿಲ್ಲ ಎಂದಿದ್ದಾರೆ
ಉಡುಪಿ, ಜನವರಿ 11 : ಹಿರಿಯ ಚಿಂತಕ, ಪ್ರಗತಿಪರ ಹೋರಾಟಗಾರ ಹಾಗೂ ಲೇಖಕ ಜಿ.ರಾಜಶೇಖರ್ ಅವರ 'ಬಹುವಚನ ಭಾರತ'ಕೃತಿಗೆ ಲಭಿಸಿರುವ ಕರ್ನಾಟಕ ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ.
'ಬಹುವಚನ ಭಾರತ' ಎಂಬ ಕೃತಿಗೆ ಜಿ.ರಾಜಶೇಖರ್ ಅವರನ್ನು 2015 ನೇ ಸಾಲಿನ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿತ್ತು.
ಈ ಕುರಿತು ಹೇಳಿಕೆ ನೀಡಿರುವ ಜಿ. ರಾಜಶೇಖರ್, ' ದೇಶದಲ್ಲಿ ಅಸಹಿಷ್ಣುತೆಯ ವಾತಾವರಣ ಇದೆ. ಭಾರತದಲ್ಲಿ ಅಹಿಷ್ಣುತೆ ತಾಂಡವಾಡುತ್ತಿರುವುದನ್ನು ಖಂಡಿಸಿ 2015ರಲ್ಲಿ ದೇಶದ ಖ್ಯಾತನಾಮ ಸಾಹಿತಿಗಳು ತಮಗೆ ದೊರೆತಿರುವ ಪ್ರಶಸ್ತಿಗಳನ್ನು ವಾಪಸ್ ಮಾಡುವ ಮೂಲಕ ಅಭಿಯಾನವನ್ನೇ ಮಾಡಿದ್ದರು. [ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತರಿಗೆ ಅಭಿನಂದನೆ]

ಅಂದು ದೇಶದಲ್ಲಿ ಕಂಡು ಬಂದಿದ್ದ ಅಸಹಿಷ್ಣುತೆಯ ವಾತಾವರಣ ಈಗಲೂ ಮುಂದುವರಿದಿರುವುದೇ ಪ್ರಶಸ್ತಿ ನಿರಾಕರಿಸಲು ಕಾರಣ 'ಎಂದು ಹೇಳಿದ್ದಾರೆ.
ರಾಜ್ಯ ಸಾಹಿತ್ಯ ಅಕಾಡಮಿ ನನ್ನ 'ಬಹುವಚನ ಭಾರತ' ಕೃತಿಗೆ ಪ್ರಶಸ್ತಿ ನೀಡಿದೆ. ಅಕಾಡೆಮಿ ನನ್ನ ಬಗ್ಗೆ ತೋರಿದ ಗೌರವಕ್ಕೆ ನಾನು ಕೃತಜ್ಞ. ಆದರೆ, 2015ರಲ್ಲಿ ಸಾಹಿತಿಗಳು ತಮಗೆ ನೀಡಿದ ಪ್ರಶಸ್ತಿಗಳ ನಿರಾಕರಣೆ ಹಾಗೂ ವಾಪಸಾತಿಗೆ ಯಾವ ಸನ್ನಿವೇಶ ಕಾರಣವಾಯಿತೋ, ಆ ಸನ್ನಿವೇಶ ಈಗ ಇನ್ನಷ್ಟು ಹದಗೆಟ್ಟಿದೆ.
ಹಾಗಾಗಿ ಈ ಪ್ರಶಸ್ತಿಯನ್ನ ನಾನು ಸ್ವೀಕರಿಸಲಾರೆ' ಎಂದು ತಮ್ಮ ನಿರ್ಧಾರವನ್ನು ಪ್ರಕಟಿಸಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications