ಉಡುಪಿ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆಗೆ ಬಳಸಿದ್ದ ರಾಡ್ ಪತ್ತೆ
ಉಡುಪಿ, ಸೆಪ್ಟೆಂಬರ್ 22: ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ನವನೀತ್ ಶೆಟ್ಟಿ ಹಾಗೂ ಜ್ಯೋತಿಷಿ ನಿರಂಜನ್ ನನ್ನು ಸಿಐಡಿ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದು, ಕೊಲೆಗೆ ಬಳಸಿದ್ದ ರಾಡ್ ಹಾಗೂ ಭಾಸ್ಕರ್ ಶೆಟ್ಟಿಯವರಿಗೆ ಸೇರಿದ ಮೊಬೈಲ್, ವಾಚ್ಗಳನ್ನು ಅಲೆವೂರು ಸೇತುವೆಗೆ ಎಸೆದ ಕುರಿತು ಬಾಯಿಬಿಟ್ಟಿದ್ದಾರೆ.
ಆರೋಪಿಗಳನ್ನು ಸೇತುವೆ ಬಳಿಗೆ ಕರೆದೊಯ್ದು, ತಜ್ಞರ ನೆರವಿನಿಂದ ಶೋಧ ನಡೆಸಲಾಗಿದೆ. ತಣ್ಣೀರುಬಾವಿಯ ಮುಳುಗು ತಜ್ಞರು ಶೋಧ ಕಾರ್ಯ ನಡೆಸಿದ್ದು, ಆರೋಪಿಗಳು ಕೊಲೆಗೆ ಬಳಸಿದ್ದಾರೆ ಎನ್ನಲಾದ ರಾಡ್ ಪತ್ತೆ ಹಚ್ಚಿ, ಮೇಲೆತ್ತಿದ್ದಾರೆ.[ಉಡುಪಿಯ ನವನೀತ್ ಶೆಟ್ಟಿ ಜಿಮ್ ನಲ್ಲಿ ಸಿಐಡಿ ಪರಿಶೀಲನೆ]

ಮುಳುಗು ತಜ್ಞರ ಸಹಾಯದಿಂದ ಪತ್ತೆ ಹಚ್ಚಿದ ರಾಡ್ ಅನ್ನು ಸಿಐಡಿ ಪೊಲೀಸರು ಮೊದಲಿಗೆ ನಿರಂಜನ್ ಭಟ್ ನನ್ನು ಕರೆತಂದು ತೋರಿಸಿದಾಗ ಆತ ಗುರುತಿಸಿದ್ದಾನೆ. ನಂತರ ನವನೀತ ಶೆಟ್ಟಿಯನ್ನು ಕರೆತಂದು ವಿಚಾರಣೆ ಮಾಡಿದ್ದಾರೆ. ಆದರೆ ತಾವು ಬಳಸಿದ್ದ ರಾಡ್ ಇಷ್ಟು ಭಾರವಿರಲಿಲ್ಲ ಎಂದು ನವನೀತ್ ಸಂಶಯ ವ್ಯಕ್ತಪಡಿಸಿದ್ದಾನೆ.
ಸಿಐಡಿ ತನಿಖೆ ವೇಳೆ ಪತ್ತೆ ಹಚ್ಚಿದ ರಾಡ್ ಸುಮಾರು ಒಂದೂವರೆ ಅಡಿಯಷ್ಟು ಉದ್ದವಾಗಿದ್ದು, ಒಳಗೆ ಟೊಳ್ಳಾದ ಸ್ಟೀಲ್ ಪೈಪ್ ಆಗಿತ್ತು. ಅದರ ಒಂದು ತುದಿ ಹೊಡೆತಕ್ಕೆ ನುಜ್ಜಾಗಿರುವುದು ಕಂಡು ಬಂದಿದೆ. ಅಲ್ಲದೆ ಆರೋಪಿಗಳು ವಾಚ್, ಮೊಬೈಲ್ ಗಳನ್ನು ಕಲ್ಕಾರು ಮತ್ತು ಎಪೇದೆಕ್ಯಾರುಗಳಲ್ಲಿ ಹೊಳೆಗೆ ಎಸೆದಿರುವುದಾಗಿ ತಿಳಿಸಿದ್ಡಾರೆ. ಅಲೆವೂರಿನಲ್ಲಿ ಶೋಧ ನಡೆಸಿದ ನಂತರ ಅಧಿಕಾರಿಗಳು ಆರೋಪಿಗಳನ್ನು ಕಲ್ಕಾರಿನತ್ತ ಕರೆದುಕೊಂಡು ಹೋಗಿದ್ದಾರೆ.[ಭಾಸ್ಕರ್ ಶೆಟ್ಟಿ ಕೊಲೆ ಆರೋಪಿಗಳಿಗೆ ಕ್ಯಾಂಟೀನ್ ಊಟ, ಬಸ್ ಪ್ರಯಾಣ]
ಸಿಐಡಿ ಎಸ್ಪಿ ಐಡಾ ಮಾರ್ಟಿನ್, ಡಿವೈಎಸ್ಪಿ ಚಂದ್ರಶೇಖರ್ ಸಹಿತ ಸಿಐಡಿ ಸಿಬ್ಬಂದಿ ವಿಚಾರಣೆಯಲ್ಲಿ ಭಾಗವಹಿಸಿದ್ದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications