ರಾಜೇಶ್ವರಿ ಶೆಟ್ಟಿಗೆ ರಾಜಾತಿಥ್ಯ ಆರೋಪ : ವಕೀಲರು ಹೇಳುವುದೇನು?
ಉಡುಪಿ, ಆಗಸ್ಟ್. 24 : ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ ಆರೋಪಿಗಳಾದ ರಾಜೇಶ್ವರಿ ಶೆಟ್ಟಿ, ನವನೀತ ಶೆಟ್ಟಿ ಹಾಗೂ ಜ್ಯೋತಿಷಿ ನಿರಂಜನ್ ಭಟ್ ಅವರಿಗೆ ಪೊಲೀಸರು ರಾಜಾತಿಥ್ಯ ನೀಡುತ್ತಿದ್ದಾರೆ ಆರೋಪವನ್ನು ವಕೀಲರು ತಳ್ಳಿಹಾಕಿದ್ದಾರೆ.
ವಕೀಲ ಬೆಳುವಾಯಿ ಅರುಣ್ ಬಂಗೇರ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಸ್ಪಷ್ಟನೆ ನೀಡಿದ್ದಾರೆ. 'ನ್ಯಾಯಾಲಯಕ್ಕೆ ಹಾಜರಾಗುವ ವೇಳೆ ಪೊಲೀಸ್ ವಾಹನ ಇರದಿದ್ದ ಪಕ್ಷದಲ್ಲಿ ಖಾಸಗಿ ವಾಹನವನ್ನು ಅವರೇ ಗೊತ್ತುಪಡಿಸುತ್ತಾರೆ. ರಾಜೇಶ್ವರಿ ಶೆಟ್ಟಿ ಸಂಬಂಧಿಕರ ವಾಹನದಲ್ಲಿ ಬಂದಿಲ್ಲ' ಎಂದು ಸ್ಪಷ್ಟಪಡಿಸಿದರು.

'ಆರೋಪಿಗಳಿಗೆ ಜೈಲಿನಲ್ಲಿ ಹಾಗೂ ಹೊರಗಡೆ ಜೀವ ಬೆದರಿಕೆ ಇರುವುದರಿಂದ ಅವರನ್ನು ಸಾರ್ವಜನಿಕರು ಉಪಯೋಗಿಸುವ ಬಸ್ ನಲ್ಲಿ ಕರೆದೊಯ್ಯದೆ ಪೊಲೀಸ್ ವಾಹನದಲ್ಲಿ ಕರೆದೊಯ್ಯಬೇಕು ಎಂದು ನ್ಯಾಯಾಲಯಕ್ಕೆ ಎರಡು ಬಾರಿ ಮನವಿ ಮಾಡಲಾಗಿದೆ. ಅದಕ್ಕೆ ಪೂರಕವಾದ ವಾಹನ ಲಭ್ಯವಾಗದ ಹಿನ್ನೆಲೆಯಲ್ಲಿ ಖಾಸಗಿ ವಾಹನದ ವ್ಯವಸ್ಥೆ ಮಾಡಿರಬಹುದು' ಎಂದು.
'ರಾಜೇಶ್ವರಿ ಅವರು ಖಾಸಗಿ ವಾಹನಕ್ಕೆ ಬೇಡಿಕೆ ಇಟ್ಟಿರಲಿಲ್ಲ. ಕಳೆದ ಬಾರಿ ಆರೋಪಿಗಳನ್ನು ಪೊಲೀಸ್ ವಾಹನದಲ್ಲಿಯೇ ನ್ಯಾಯಾಲಯಕ್ಕೆ ಕರೆದುಕೊಂಡು ಬರಲಾಗಿತ್ತು. ಖಾಸಗಿ ವಾಹನ ಬಳಕೆಗೆ ಅಪಾರ್ಥ ಕಲ್ಪಿಸುವುದು ಸರಿಯಲ್ಲ' ಎಂದರು.
ಬಿಜೆಪಿ ಮನವಿ : ಭಾಸ್ಕರ್ ಶೆಟ್ಟಿ ಕೊಲೆ ಆರೋಪಿಗಳನ್ನು ಖಾಸಗಿ ಐಷಾರಾಮಿ ಕಾರಿನಲ್ಲಿ ಮಂಗಳೂರಿನಿಂದ ಉಡುಪಿ ನ್ಯಾಯಾಲಯಕ್ಕೆ ಕರೆತಂದ ಪೊಲೀಸರ ಅಮಾನತು ಆದೇಶ ವಾಪಸ್ ಪಡೆಯಬೇಕು ಎಂದು ಉಡುಪಿ ಬಿಜಪಿ ಕಾರ್ಮಿಕ ಪ್ರಕೋಷ್ಠ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಮನವಿ ಸಲ್ಲಿಸಿದೆ.
ಎಎಸ್ಐ ಸುಧಾಕರ್ ಸಲ್ಮಾನ್, ಮಹಿಳಾ ಪೇದೆ ರೇಣುಕಾ ಅವರನ್ನು ಅಮಾನತು ಮಾಡಿ ಇಲಾಖೆ ತನಿಖೆ ಎಂದು ಮಾನಸಿಕ ಹಿಂಸೆ ನೀಡಲಾಗುತ್ತಿದೆ. ಈಗ ಪಡೆಯುತ್ತಿರುವ ಸಂಬಳ ಅತಿ ಕಡಿಮೆಯಾಗಿದ್ದು ಮತ್ತೆ ಸಂಬಳ ಕಡಿತ ಮಾಡಿ ಕಿರುಕುಳ ನೀಡುತ್ತಾರೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications