ಚಿತ್ರದ ಯಶಸ್ಸಿಗೆ ಶ್ರೀ ಕ್ಷೇತ್ರ ಕೊಲ್ಲೂರಿನಲ್ಲಿ ರಕ್ಷಿತ್ ಶೆಟ್ಟಿ ವಿಶೇಷ ಪೂಜೆ
ಉಡುಪಿ, ಆಗಸ್ಟ್ 22: ಸ್ಯಾಂಡಲ್ ವುಡ್ ಸ್ಟಾರ್ ರಕ್ಷಿತ್ ಶೆಟ್ಟಿ ತಮ್ಮ ಮುಂದಿನ ಚಿತ್ರದ ಯಶಸ್ಸಿಗೆ ಶ್ರೀ ಕ್ಷೇತ್ರ ಕೊಲ್ಲೂರಿನಲ್ಲಿ ಕುಟುಂಬ ಸದಸ್ಯರೊಂದಿಗೆ ವಿಶೇಷ ಪೂಜೆ ಸಲ್ಲಿಸಿದರು.
ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಿಂದ ನೆರೆ ಸಂತ್ರಸ್ತರಿಗೆ ಒಂದು ಕೋಟಿ ದೇಣಿಗೆ
ಶ್ರೀ ಮೂಕಾಂಬಿಕಾ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ರಕ್ಷಿತ್ ಶೆಟ್ಟಿ ನಂತರ ಕುಟುಂಬ ಸಮೇತರಾಗಿ ಚಂಡಿಕಾ ಹೋಮದಲ್ಲಿ ಭಾಗಿಯಾದರು. ರಕ್ಷಿತ್ ಶೆಟ್ಟಿ ಅವರ ತಂದೆ, ತಾಯಿ, ಸಹೋದರ ಈ ಸಂದರ್ಭ ಇದ್ದರು.
ತಮ್ಮ ಕುಟುಂಬದ ಶ್ರೇಯೋಭಿವೃದ್ಧಿಗೆ, ಮುಂದಿನ ಚಿತ್ರದ ಯಶಸ್ಸಿಗೆ ರಕ್ಷಿತ್ ಶೆಟ್ಟಿ ಮೂಕಾಂಬಿಕಾ ಸನ್ನಿಧಿಯಲ್ಲಿ ಪ್ರಾರ್ಥನೆ ಮಾಡಿದರು. ರಕ್ಷಿತ್ ಶೆಟ್ಟಿಗೆ ದೇವಸ್ಥಾನದ ಕಡೆಯಿಂದ ಗೌರವ ಸಲ್ಲಿಕೆ ಮಾಡಲಾಯಿತು.
ರಕ್ಷಿತ್ ಶೆಟ್ಟಿ ನಟನೆಯ 'ಅವನೇ ಶ್ರೀಮನ್ನಾರಾಯಣ' ಚಿತ್ರ ಬಿಡುಗಡೆಗಾಗಿ ಕಾಯುತ್ತಿರುವ ಬೆನ್ನಲ್ಲೇ, ಅವರು ನಿರ್ದೇಶನದತ್ತ ಮುಖ ಮಾಡಿದ್ದಾರೆ. ಈ ಬಾರಿ ಅವರು ಭಾರೀ ಬಜೆಟ್ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದು, ಚಿತ್ರಕ್ಕೆ 'ಪುಣ್ಯಕೋಟಿ' ಎಂದು ಹೆಸರಿಟ್ಟಿದ್ದಾರೆ.