ಶೈಲೇಶ ಉಪಾಧ್ಯಾಯ ಶ್ರೀ ಪಲಿಮಾರು ಮಠದ ಉತ್ತರಾಧಿಕಾರಿಯಾಗಿ ನಿಯುಕ್ತಿ
ಉಡುಪಿ, ಮೇ 11:ಉಡುಪಿಯ ಶ್ರೀ ಪಲಿಮಾರು ಮಠದ ಕಿರಿಯ ಶ್ರೀ ಪಟ್ಟಕ್ಕೆ ಆಯ್ಕೆಯಾಗಿರುವ ಕಂಬಳಕಟ್ಟೆ ಶೈಲೇಶ ಉಪಾಧ್ಯಾಯ ಅವರು ಸನ್ಯಾಸಾಶ್ರಮವನ್ನು ಸ್ವೀಕರಿಸಲಿದ್ದಾರೆ.ನಾಳೆ ಭಾನುವಾರ (ಮೇ.12) ಶ್ರೀ ಪಲಿಮಾರು ಮಠದ ಉತ್ತರಾಧಿಕಾರಿಯಾಗಿ ನಿಯುಕ್ತಿಗೊಳ್ಳಲಿದ್ದಾರೆ. ಈ ಹಿನ್ನೆಲೆಯಲ್ಲಿ ಮಠದಲ್ಲಿ ಧಾರ್ಮಿಕ ವಿಧಿವಿಧಾನಗಳು ಈಗಾಗಲೇ ಆರಂಭಗೊಂಡಿವೆ.
ಶ್ರೀ ಪಲಿಮಾರು ಮಠದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಶೈಲೇಶರಿಗೆ ಶುಕ್ರವಾರ (ಮೇ.10) ಪ್ರಣವ ಮಂತ್ರೋಪದೇಶ ನೀಡಿದ್ದಾರೆ.ವಿಧಿಗಳ ಅಂಗವಾಗಿ ಇಂದು ವಾಯುಸ್ತುತಿ ಪುರಶ್ಚರಣೆ, ವಿವಿಧ ಹೋಮಗಳು ನಡೆಯಲಿವೆ.
ನಾಳೆ ರವಿವಾರದವರೆಗೆ ಶೈಲೇಶರು ಕೇವಲ ಸನ್ಯಾಸಿಯಾಗಿರುತ್ತಾರೆ. ಆ ನಂತರ ಮಠಾಧೀಶರ ಉಪಸ್ಥಿತಿಯಲ್ಲಿ ಪಲಿಮಾರು ಮಠದ ಉತ್ತರಾಧಿಕಾರಿಯಾಗಿ ನೇಮಿಸಲಾಗುವುದು.

ಅಕ್ಷಯ ತೃತೀಯಾದ ಶುಭ ದಿನ ಆರಂಭವಾದ ಶಿಷ್ಯ ಸ್ವೀಕಾರ ಪ್ರಕ್ರಿಯೆಯ ಭಾಗವಾಗಿ ಗುರುವಾರ ರಾತ್ರಿ ಶಾಕಲ ಮಂತ್ರದ ಹೋಮ ನಡೆಸಲಾಯಿತು. ಶಾಸ್ತ್ರದಂತೆ ಉಪವಾಸವಿದ್ದು ಜಾಗರಣೆ ಮಾಡಿದ ಶೈಲೇಶರು ಪ್ರಾತಃಕಾಲ ಸನ್ಯಾಸಾಶ್ರಮವನ್ನು ಸ್ವೀಕರಿಸಿದರು.
ಪುರುಷಸೂಕ್ತ ಹೋಮವನ್ನೂ ವೈದಿಕರು ನಡೆಸಿದ ಬಳಿಕ ಶೈಲೇಶರು ಮಧ್ವ ಸರೋವರಕ್ಕೆ ತೆರಳಿ ಸ್ನಾನಕ್ಕೆ ಮುನ್ನ ಶೈಲೇಶ ನನ್ನು ತ್ಯಜಿಸಿ ಸನ್ಯಾಸಿ ಯಾಗುವುದರ ಸಂಕೇತವಾಗಿ ಧರಿಸಿದ ಬಟ್ಟೆ, ಜನಿವಾರಗಳನ್ನು ವಿಸರ್ಜನೆ ಮಾಡಿದರು. ಆನಂತರ ಕಾಷಾಯ ವಸ್ತ್ರ, ದಂಡಧಾರಿಯಾಗಿ ಮಧ್ವತೀರ್ಥದಲ್ಲಿ ಅವಗಾಹನಸ್ನಾನ ನೆರವೇರಿಸಿದರು.
ಸರೋವರದ ದಂಡೆಯಲ್ಲಿ ಹೋಮದ ಸಂದರ್ಭ ಪೂಜಿಸಿದ ಪವಿತ್ರ ಕಲಶಜಲವನ್ನು ಅವರಿಗೆ ಅಭಿಷೇಕ ಮಾಡಲಾಯಿತು. ಹಿಡಿದ ದಂಡಕ್ಕೆ ಹೊಸ ಯಜ್ಞೋಪ ವೀತವನ್ನು ಪೋಣಿಸಲಾಯಿತು. ದಂಡ, ಕಮಂಡಲು, ಗೋಪೀಚಂದನದೊಂದಿಗೆ ಶೋಭಿಸುವ ನೂತನ ಯತಿ ಶ್ರೀಕೃಷ್ಣ ದೇವರ ದರ್ಶನ ಮಾಡಿ, ಸರ್ವಜ್ಞ ಪೀಠದಲ್ಲಿ ವಿರಾಜಮಾನರಾಗಿದ್ದ ಶ್ರೀ ಪಲಿಮಾರು ಮಠಾಧೀಶ ಶ್ರೀ ವಿದ್ಯಾಧೀಶತೀರ್ಥರಲ್ಲಿಗೆ ತೆರಳಿ ತಲೆಬಾಗಿ ತನಗೆ ಪ್ರಣವ ಮಂತ್ರೋಪದೇಶವನ್ನು ಅನುಗ್ರಹಿಸುವಂತೆ ಪ್ರಾರ್ಥಿಸಿದರು.
-
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
ವೈಭವ್ ಸೂರ್ಯವಂಶಿ ಅದೃಷ್ಟದ ಮೇಲೆ ಸವಾರಿ ಮಾಡುತ್ತಿದ್ದಾರೆ: ಕೊಡಗಿನ ರಾಬಿನ್ ಉತ್ತಪ್ಪ ಎಚ್ಚರಿಕೆಯ ಸಲಹೆ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ












Click it and Unblock the Notifications