ಉಡುಪಿ ಕೃಷ್ಣಮಠದ ರಥಬೀದಿಯಲ್ಲೀಗ ಸಪ್ತೋತ್ಸವ ಸಂಭ್ರಮ
ಉಡುಪಿ, ಜನವರಿ 11: ಪರ್ಯಾಯಕ್ಕೆ ದಿನಗಣನೆ ಆರಂಭವಾಗುತ್ತಿದ್ದಂತೆ ಶ್ರೀ ಕೃಷ್ಣಮಠದಲ್ಲಿ ಸಪ್ತೋತ್ಸವ ಆರಂಭಗೊಂಡಿದೆ. ರಾತ್ರಿ ತೆಪ್ಪೋತ್ಸವವಾದ ಬಳಿಕ ರಥಬೀದಿಯಲ್ಲಿ ರಥೋತ್ಸವ ಸಂಪನ್ನಗೊಂಡಿತು. ಎರಡು ರಥಗಳ ಪೈಕಿ ಒಂದರಲ್ಲಿ ಶ್ರೀಕೃಷ್ಣ ಮುಖ್ಯಪ್ರಾಣ, ಇನ್ನೊಂದರಲ್ಲಿ ಶ್ರೀ ಅನಂತೇಶ್ವರ ಮತ್ತು ಚಂದ್ರಮೌಳೀಶ್ವರ ದೇವರ ಉತ್ಸವ ಮೂರ್ತಿಗಳನ್ನು ಇರಿಸಿ ನೂರಾರು ಭಕ್ತರು ರಥವನ್ನು ಎಳೆದರು.
ಸಪ್ತೋತ್ಸವದಲ್ಲಿ ಶ್ರೀಕೃಷ್ಣಾಪುರ, ಶ್ರೀ ಅದಮಾರು, ಪಲಿಮಾರು ಕಿರಿಯ ಶ್ರೀಪಾದರು ಪಾಲ್ಗೊಂಡರು. ಇದು ಪಲಿಮಾರು ಮಠ ಪರ್ಯಾಯದ ಕೊನೆಯ ಸಪ್ತೋತ್ಸವವಾಗಿದ್ದು, 21 ಸೇವಾಕರ್ತರು ಹೆಸರು ನೋಂದಾಯಿಸಿದ್ದರು.

ಜನವರಿ 14ರಂದು ಮಕರ ಸಂಕ್ರಾಂತಿ ಉತ್ಸವದ ದಿನ ಬ್ರಹ್ಮರಥ ಸಹಿತ ಮೂರು ರಥಗಳ ಉತ್ಸವ ನಡೆಯಲಿದೆ. ಇದರಲ್ಲಿ ಒಂದು ರಥದಲ್ಲಿ ಕೃಷ್ಣ, ಇನ್ನೊಂದರಲ್ಲಿ ಮುಖ್ಯಪ್ರಾಣ, ಮತ್ತೊಂದು ರಥದಲ್ಲಿ ಅನಂತೇಶ್ವರ- ಚಂದ್ರೇಶ್ವರ ದೇವರ ಉತ್ಸವ ಮೂರ್ತಿಗಳನ್ನು ಇರಿಸಿ ರಥೋತ್ಸವ ನಡೆಸಲಾಗುತ್ತದೆ. ಮರುದಿನ ಅಂದರೆ 15ರಂದು ಚೂರ್ಣೋತ್ಸವ ಅಥವಾ ಹಗಲು ಉತ್ಸವ ನಡೆಯಲಿದೆ.

ಜನವರಿ 17 ರಂದು ಪಲಿಮಾರು ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರ ಈ ಪರ್ಯಾಯ ಅವಧಿಯ ಕೊನೆಯ ದಿನವಾಗಿದ್ದು, ಹದಿನೆಂಟರಿಂದ ಅದಮಾರು ಮಠದ ಪರ್ಯಾಯ ಪ್ರಾರಂಭವಾಗಲಿದೆ. ಈ ಸಂಬಂಧ ಎಲ್ಲ ಸಿದ್ಧತೆಗಳು ನಡೆಯುತ್ತಿದ್ದು, ಕೃಷ್ಣಮಠ ,ರಥಬೀದಿ ಮತ್ತು ಉಡುಪಿ ನಗರ ಮದುವಣಗಿತ್ತಿಯಂತೆ ಸಿಂಗಾರಗೊಳ್ಳುತ್ತಿದೆ.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications