ಉಡುಪಿ ಸ್ವರ್ಣ ಗೋಪುರಕ್ಕೆ 5ಲಕ್ಷ ರೂ. ಘೋಷಿಸಿದ ಟಿ.ಎ.ಶರವಣ
ಉಡುಪಿ, ನವೆಂಬರ್ 29 : ಉಡುಪಿ ಶ್ರೀಕೃಷ್ಣ ಮಠದ 120 ಕೆಜಿ ತೂಕದ ಸುವರ್ಣ ಗೋಪುರ ಪ್ರಾರಂಭೋತ್ಸವ ಕಾರ್ಯಕ್ರಮ ಆರಂಭವಾಗಿದೆ. ಪರಿಷತ್ ಸದಸ್ಯ, ಜೆಡಿಎಸ್ ನಾಯಕ ಟಿ.ಎ.ಶರವಣ ಅವರು ಇದಕ್ಕೆ 5 ಲಕ್ಷ ರೂ. ನೀಡುವುದಾಗಿ ಘೋಷಣೆ ಮಾಡಿದರು.
ಬುಧವಾರ ಉಡುಪಿಯ ರಾಜಾಂಗಣದಲ್ಲಿ ಪರಮಪೂಜ್ಯ ಶ್ರೀ ಶ್ರೀ ವಿದ್ಯಾ ತೀರ್ಥ ಶ್ರೀಪಾದರ ದಿವ್ಯ ಸಾನಿಧ್ಯದಲ್ಲಿ ಸುವರ್ಣ ಗೋಪುರ ಪ್ರಾರಂಭೋತ್ಸವ ಕಾರ್ಯಕ್ರಮಕ್ಕೆ ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ ಚಾಲನೆ ನೀಡಿದರು.
ಸಮಾರಂಭದಲ್ಲಿ ಮಾತನಾಡಿದ ಅವರು, 5 ಲಕ್ಷ ರೂಪಾಯಿಗಳನ್ನು ತಮ್ಮ ಸ್ವಂತ ಖರ್ಚಿನಿಂದ ಈ ಪುಣ್ಯದ ಕಾರ್ಯಕ್ರಮಕ್ಕೆ ನೀಡುವುದಾಗಿ ಘೋಷಣೆ ಮಾಡಿದರು. ಕರ್ನಾಟಕ ಜ್ಯುವೆಲರಿ ಅಸೋಸಿಯೇಷನ್ ವತಿಯಿಂದ ಹಿಂದೂ ದೇವಾಲಯದ ಸುವರ್ಣ ಕಾರ್ಯಕ್ರಮಕ್ಕೆ ಸಂಪೂರ್ಣ ಬೆಂಬಲವನ್ನು ನೀಡುವುದಾಗಿ ಭರವಸೆ ನೀಡಿದರು.
ಉಡುಪಿ ಶ್ರೀ ಕೃಷ್ಣ ಮಠದ ಗರ್ಭಗುಡಿಗೆ ಗೋಪುರಕ್ಕೆ 100 ಕೆಜಿ ಬಂಗಾರದ ತಗಡನ್ನು ಹೊದಿಸುವ ಕಾರ್ಯಕ್ಕೆ ಬುಧವಾರ ಚಾಲನೆ ಸಿಕ್ಕಿದ್ದು, 100 ದಿನದಲ್ಲಿ ಈ ಕಾರ್ಯ ಪೂರ್ಣಗೊಳ್ಳುವ ನಿರೀಕ್ಷೆ ಇದೆ...

ಗರ್ಭಗುಡಿಯ ಚಿನ್ನದ ಗೋಪುರ
ಉಡುಪಿ ಶ್ರೀ ಕೃಷ್ಣ ಮಠದ ಗರ್ಭಗುಡಿಗೆ ಗೋಪುರಕ್ಕೆ 100 ಕೆಜಿ ಬಂಗಾರದ ತಗಡನ್ನು ಹೊದಿಸುವ ಕಾರ್ಯಕ್ಕೆ ಬುಧವಾರ ಚಾಲನೆ ಸಿಕ್ಕಿದೆ. ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ ಅವರು ಈ ಕಾರ್ಯಕ್ಕೆ 5 ಲಕ್ಷ ರೂಪಾಯಿಗಳನ್ನು ತಮ್ಮ ಸ್ವಂತ ಖರ್ಚಿನಿಂದ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

ನಾಗರಾಜ್ ಶರ್ಮಾ ಅವರಿಂದ ಕಾರ್ಯ
ಬುಧವಾರ ನಡೆದ ಸಮಾರಂಭದಲ್ಲಿ ಸ್ವರ್ಣ ಗೋಪುರದ ಉಸ್ತುವಾರಿ ಕಾರ್ಯವನ್ನು ಯು.ವೆಂಕಟೇಶ್ ಸೇಠ್, ಮರದ ಕೆತ್ತನೆ ಕೆಲಸವನ್ನು ಗಣೇಶ್ ಹಿರಿಯಡ್ಕ, ಚಿನ್ನದ ಕೆಲಸವನ್ನು ಅಶೋಕ್, ಗಣಪತಿ ಆಚಾರ್ಯ, ಸುರೇಶ್ ಸೇಠ್ ಅವರಿಗೆ ವಹಿಸಲಾಯಿತು. ತಗಡಿನ ಕೆಲವನ್ನು ನಾಗರಾಜ್ ಶರ್ಮಾ ಅವರಿಗೆ ನೀಡಲಾಗಿದೆ.

ಚಿನ್ನದ ಹೊದಿಕೆ ಕಾರ್ಯ
ರಾಜಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಿನ್ನದ ನಾಣ್ಯ, ಗಟ್ಟಿ ಕರಗಿಸಿ ಸಾಂಕೇತಿಕವಾಗಿ ತಗಡಿಗೆ ಆಕಾರ ನೀಡಲಾಯಿತು. ಸಮಾರಂಭದಲ್ಲಿ ಮಾತನಾಡಿದ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು, 'ಗೋಪುರಕ್ಕೆ ಮಾಡುವ ಚಿನ್ನದ ಹೊದಿಕೆ ಶ್ರೀ ಕೃಷ್ಣನ ವಿಗ್ರಹಕ್ಕೆ ಮಾಡಿದಂತಾಗುತ್ತದೆಯೇ ವಿನಃ ಮಣ್ಣಿಗೆ ಮಾಡುವ ಹೊದಿಕೆಯಲ್ಲ. ಭಕ್ತರ ಸಹಕಾರದಿಂದ ಈ ಕಾರ್ಯ ಕೈಗೊಂಡಿದ್ದೇನೆ' ಎಂದರು.

ಪಾರದರ್ಶಕವಾಗಿ ಕೆಲಸ
ಗೋಪುರದ ಚಿನ್ನದ ಹೊದಿಕೆ ಕಾರ್ಯ ರಥಬೀದಿ ಸಮೀಪವೇ ಪಾರದರ್ಶಕವಾಗಿ ನಡೆಯಲಿದೆ. ಸಿಸಿ ಕ್ಯಾಮರಾವನ್ನು ಜೋಡಿಸಲಾಗುತ್ತಿದೆ. ಭಕ್ತರು ಬಂಗಾರದ ಕೆಲಸ ನೋಡಲು ಮುಕ್ತ ಅವಕಾಶ ನೀಡಲಾಗಿದೆ. ಭಕ್ತರು ನೀಡುವ ಸಲಹೆಯನ್ನು ಸಹ ಸ್ವೀಕಾರ ಮಾಡಲಾಗುತ್ತದೆ.

ಹಲವು ಭಕ್ತರಿಂದ ಚಿನ್ನದ ಕಾಣಿಕೆ
ಚಿನ್ನದ ಹೊದಿಕೆ ಕಾರ್ಯ 100 ದಿನದಲ್ಲಿ ಪೂರ್ಣಗೊಳ್ಳುವ ನಿರೀಕ್ಷೆಇದೆ. ಈ ಕಾರ್ಯಕ್ಕೆ ಗಣಿ ಉದ್ಯಮಿ ಪತ್ತಿಕೊಂಡ ಪ್ರಭಾಕರ್ 2 ಕೆಜಿ, ಚೆನ್ನೈನ ಭಾಸ್ಕರ್ ಅವರು 1 ಕೆಜಿ, ಅನಂತ ಸಂಡೂರು ಅವರು 1 ಕೆಜಿ, ರಮೇಶ್ ಪೆಜತ್ತಾಯ ಮತ್ತು ಶ್ರೀನಿವಾಸ ಪೆಜತ್ತಾಯ ಸಹೋದರರು 1 ಕೆಜಿ, ಮುಂಬೈನ ವಿಜಯಾನಂದ ಅವರು 1 ಕೆಜಿ, ಹೈದರಾಬಾದ್ ರಮೇಶ್ 1 ಕೆಜಿ, ಸಮರ್ಪಣ ಸಮೂಹ ಸಂಸ್ಥೆಗಳ ಸಿಇಒ ದಿಲೀಪ್ ಸತ್ಯ 1 ಕೆಜಿ ಚಿನ್ನವನ್ನು ಕಾಣಿಕೆಯಾಗಿ ನೀಡಿದರು.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Rate March 23: ಚಿನ್ನ - ಬೆಳ್ಳಿ ದರ ಭಾರೀ ಕುಸಿತ: ಒಂದೇ ದಿನದಲ್ಲಿ ಶೇ. 4% ಇಳಿಕೆ, ಬಂಗಾರ ಪ್ರಿಯರಿಗೆ ಸಿಹಿ ಸುದ್ದಿ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ












Click it and Unblock the Notifications