ಉಡುಪಿಯಲ್ಲೂ ನೀರಿಗೆ ಬರ..! ನಾಳೆಯಿಂದ ಎರಡು ದಿನಕ್ಕೊಮ್ಮೆ ನೀರು
ಉಡುಪಿ ನಗರಸಭಾ ವ್ಯಾಪ್ತಿಗೆ ನೀರು ಸರಬರಾಜು ಮಾಡುವ ಬಜೆ ಅಣೆಕಟ್ಟಿನಲ್ಲಿ ನೀರಿನ ಸಂಗ್ರಹದ ಮಟ್ಟ ತೀರಾ ಕುಸಿದಿದೆ. ಹೀಗಾಗಿ ನಗರಸಭಾ ವ್ಯಾಪ್ತಿಯಲ್ಲಿ ಮಾರ್ಚ್ 23ರಿಂದ ದಿನ ಬಿಟ್ಟು ದಿನ ನೀರು ಸರಬರಾಜು ಮಾಡಲು ತೀರ್ಮಾನಿಸಲಾಗಿದೆ.
ಉಡುಪಿ, ಮಾರ್ಚ್ 22: ಮಂಗಳೂರಿನ ರೀತಿಯಲ್ಲೇ ಉಡುಪಿಯಲ್ಲೂ ನೀರಿನ ಕೊರತೆ ಕಾಣಿಸಿಕೊಂಡಿದೆ.
ಉಡುಪಿ ನಗರಸಭಾ ವ್ಯಾಪ್ತಿಗೆ ನೀರು ಸರಬರಾಜು ಮಾಡುವ ಬಜೆ ಅಣೆಕಟ್ಟಿನಲ್ಲಿ ನೀರಿನ ಸಂಗ್ರಹದ ಮಟ್ಟ ತೀರಾ ಕುಸಿದಿದೆ. ಹೀಗಾಗಿ ಉಡುಪಿ ನಗರಸಭಾ ವ್ಯಾಪ್ತಿಯನ್ನು ಎರಡು ವಿಭಾಗಗಳನ್ನಾಗಿ ಮಾಡಲಾಗಿದ್ದು, ಮಾರ್ಚ್ 23ರಿಂದ ದಿನ ಬಿಟ್ಟು ದಿನ ಬೆಳಗ್ಗೆ 6 ಗಂಟೆಗೆ ನೀರು ಸರಬರಾಜು ಮಾಡಲು ನಗರಸಭೆ ತೀರ್ಮಾನಿಸಿದೆ.

ನೀರು ಸರಬರಾಜು ಹೇಗೆ..?
ಮಾರ್ಚ್ 23 ರಂದು ಕುಂಜಿಬೆಟ್ಟು, ತೆಂಕಪೇಟೆ, ಒಳಕಾಡು, ಬೈಲೂರು, ಕಿನ್ನಿಮೂಲ್ಕಿ, ಅಜ್ಜರಕಾಡು, ಅಂಬಲಪಾಡಿ, ಬನ್ನಂಜೆ, ಶಿರಿಬೀಡು, ಕೊಳ, ವಡಬಾಂಡೇಶ್ವರ, ಕಲ್ಮಾಡಿ, ಇಂದಿರಾ ನಗರ, ಚಿಟ್ಪಾಡಿ, ಬಡಗುಬೆಟ್ಟು, ಕೊಡವೂರು, ಕಸ್ತೂರ್ಬಾ ನಗರ, ಮಲ್ಪೆ ಸೆಂಟ್ರಲ್, ಇಂದ್ರಾಳಿ, ಸಗ್ರಿ, ಮೂಡುಪೆರಂಪಳ್ಳಿ ವಾರ್ಡ್ಗಳಿಗೆ ನೀರು ಸರಬರಾಜು ಮಾಡಲಾಗುತ್ತದೆ.[ಉಡುಪಿಯಲ್ಲಿ ರಾಜ್ಯದ ಪ್ರಪ್ರಥಮ ಒಳಾಂಗಣ ಟೆನಿಸ್ ಕೋರ್ಟ್]
ಮಾರ್ಚ್ 24ರಂದು ಸರಳೇಬೆಟ್ಟು, ಈಶ್ವರನಗರ, ಮಣಿಪಾಲ, ಕಕ್ಕುಂಜೆ, ಕರಂಬಳ್ಳಿ, ಮೂಡುಬೆಟ್ಟು, ಕೊಡಂಕೂರು, ನಿಟ್ಟೂರು, ಸುಬ್ರಹ್ಮಣ್ಯ ನಗರ, ಗೋಪಾಲಪುರ, ಕಡಿಯಾಳಿ, ಗುಂಡಿಬೈಲು, ಸೆಟ್ಟಿಬೆಟ್ಟು, ಪರ್ಕಳ ವಾರ್ಡ್ಗಳಿಗೆ ನೀರು ಸರಬರಾಜು ಮಾಡಲಾಗುತ್ತದೆ.
ಬಳಿಕ ಇದೇ ಮಾದರಿಯಲ್ಲಿ ದಿನ ಬಿಟ್ಟು ದಿನ ನೀರು ಸರಬರಾಜು ಮಾಡಲಾಗುತ್ತದೆ. ನಳ್ಳಿ ನೀರು ಬಂದ ದಿನ ಸಂಬಂಧಪಟ್ಟ ವಾರ್ಡ್ಗಳಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾದರೆ ಅಂತಹ ಮನೆಗಳಿಗೆ ಟ್ಯಾಂಕರ್ಗಳ ಮೂಲಕ ತಲಾ 500 ಲೀ. ನೀರು ಸರಬರಾಜು ಮಾಡಲಾಗುತ್ತದೆ.[ಉಡುಪಿ: ಅಪಾಯದಂಚಿನಲ್ಲಿ ಅಂಗನವಾಡಿ!]
ಕುಡಿಯುವ ನೀರಿಗೆ ಸಂಬಂಧಿಸಿ ದೂರುಗಳಿದ್ದಲ್ಲಿ ಮೊಬೈಲ್ ಸಂಖ್ಯೆ 8496989248, 8496989166, 8496989184, 8496989122ಕ್ಕೆ ಕರೆ ಮಾಡಬಹುದು. ಈ ಸಂಖ್ಯೆಗಳು ದೂರಿಗೆ ಸ್ಪಂದಿಸದಿದ್ದಲ್ಲಿ ನಗರಸಭೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಕೆ.ಗಣೇಶ್ (ಮೊ. 8496989759) ಅಥವಾ ಪರಿಸರ ಅಭಿಯಂತರ ರಾಘವೇಂದ್ರ ಬಿ.ಎಸ್. (9448507244) ಇವರಿಗೆ ಕರೆ ಮಾಡಬಹುದು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications