ಉಡುಪಿ : ಸ್ಕೂಬಾ ಡೈವ್ ಮಾಡಿ ಕಡಲಾಳದ ಕರಾಮತ್ತು ನೋಡಿ
ಉಡುಪಿ ನವೆಂಬರ್ 13 : ಸಮುದ್ರದ ಆಳಕ್ಕಿಳಿದು ಅಲ್ಲಿನ ಜೀವ ವೈವಿಧ್ಯ ಹಾಗೂ ಅಲ್ಲಿಯ ಪ್ರಾಕೃತಿ ವಿಸ್ಮಯಗಳನ್ನು ಕಣ್ತುಂಬಿಕೊಳ್ಳುವ ಕನಸು ಹೊತ್ತ ಸಾಹಸಿ ಗಳಿಗೆ ಇದು ಸಂತಸದ ಸುದ್ದಿ.
ಸ್ಕೂಬಾ ಡೈವಿಂಗ್ ಮೂಲಕ ಕಡಲಾಳದ ಬೆರಗುಗಳಿಗೆ ಸಾಕ್ಷಿ ಯಾಗುವ ಸಾಹಸ ಜಲಕ್ರೀಡೆ ಉಡುಪಿಯ ಕಾಪು ಕಡಲತೀರದಲ್ಲಿ ಆರಂಭಗೊಂಡಿದೆ. ಉಡುಪಿ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಉಡುಪಿ ಜಿಲ್ಲಾಡಳಿತ ಸ್ಕೂಬಾ ಡೈವಿಂಗ್ ಜಲ ಸಾಹಸ ಕ್ರೀಡೆ ಆರಂಭಿಸಲು ಮುಂದಾಗಿದೆ.
ಉಡುಪಿ ಜಿಲ್ಲೆಯ ಕಡಲತಡಿಯಲ್ಲಿ ಕಳೆದ 2 ವರ್ಷಗಳಿಂದ ಈ ಸಾಹಸ ಜಲಕ್ರೀಡೆಗೆ ಸೂಕ್ತ ಜಾಗವನ್ನು ಪರಿಶೀಲನೆ ನಡೆಸಲಾಗುತ್ತಿತ್ತು. ಅಂತಿಮವಾಗಿ ಬೋಟ್ ಫೆಡರೇಷನ್ ನೀಡಿದ ಆಭಿಪ್ರಾಯದಂತೆ ಕಾಪು ಬೀಚ್ ನಿಂದ ಸಮುದ್ರದಲ್ಲಿ 8 ನಾಟಿಕಲ್ ಮೈಲ್ ದೂರದಲ್ಲಿನ, ಮೂಲ್ಕಿ ಪಾರ್ ಎಂಬಲ್ಲಿ ಸ್ಕೂಬಾ ಡೈವಿಂಗ್ ಗೆ ಅವಕಾಶ ದೊರೆತಿದೆ.
ಇಲ್ಲಿನ ಸಮುದ್ರದಾಳದಲ್ಲಿ ಹವಳದ ದಿಬ್ಬಗಳು, ಆಕರ್ಷಕ ಮೀನುಗಳು ಹಾಗೂ ವೈವಿಧ್ಯಮಯವಾದ ಜಲ ಜೀವರಾಶಿ ಇದೆ. ಅಲ್ಲದೇ ಇಲ್ಲಿ ನೀರಿನಾಳದ ದೃಶ್ಯಗಳು ಇತರೆಡೆಗಿಂತ ಅತ್ಯಂತ ಸ್ಪಷ್ಟವಾಗಿ ಗೋಚರಿಸುತ್ತವೆ.

ಗೋವಾ, ಮುಂಬೈ ನಲ್ಲೂ ಸ್ಕೂಬಾ ಡೈ ಮಾಡಿಸುವುದು ಇದೇ ಸಂಸ್ಥೆ
ಈ ಹಿನ್ನೆಲೆಯಲ್ಲಿ ಸ್ಕೂಬಾ ಡೈವಿಂಗ್ ನೆಡೆಸಲು ವೆಸ್ಟ್ ಕೋ ಅಡ್ವೆಂಚರ್ಸ್ ಕಂಪೆನಿ ಗುತ್ತಿಗೆ ಪಡೆದಿದ್ದು, ಇದೇ ಕಂಪನಿ ಗೋವಾ, ಮುಂಬೈ ಮತ್ತು ನೇತ್ರಾಣಿ ದ್ವೀಪದಲ್ಲಿ ಸ್ಕೂಬಾ ಡೈವಿಂಗ್ ಸಾಹಸ ಜಲಕ್ರೀಡೆಗೆ ವೇದಿಕೆ ಕಲ್ಪಿಸಿದೆ. ಈ ಸಂಸ್ಥೆ ಉಡುಪಿ ಜಿಲ್ಲಾಡಳಿತದೊಂದಿಗೆ 3 ವರ್ಷಗಳ ಸ್ಕೂಬಾ ಡೈವಿಂಗ್ ಸಾಹಸ ಜಲಕ್ರೀಡೆ ಸಡೆಸಲು ಗುತ್ತಿಗೆಪಡೆದುಕೊಂಡಿದೆ.

10 ವರ್ಷ ಮೇಲ್ಟಟ್ಟಿದ್ದರೆ ಸಾಕು
ಸ್ಕೂಬಾ ಡೈವಿಂಗ್ ಮಾಡಲು ಈಜು ಬಲ್ಲವರಾಗಿರಬೇಕು ಎಂಬ ನಿಯಮವೇನಿಲ್ಲ, 10 ವರ್ಷ ಮೇಲ್ಪಟ್ಟ ಎಲ್ಲರೂ ಭಾಗವಹಿಸಬಹುದಾಗಿದೆ. 71 ವರ್ಷದ ವೃದ್ದೆ ಒಬ್ಬರೂ ಈಗಲೂ ಸ್ಕೂಬಾ ಡೈವಿಂಗ್ ಮಾಡುತ್ತಿದ್ದಾರೆ ವೆಸ್ಟ್ ಕೋ ಅಡ್ವೆಂಚರ್ ನ ವ್ಯವಸ್ಥಾಪಕ ಪವನ್ ಶೌರಿ ತಿಳಿಸಿದ್ದಾರೆ.

ಹೃದಯ ಖಾಯಿಲೆ ಇದ್ದರೆ ಸ್ಕೂಬಾ ಡೈವ್ ಮಾಡುವುದು ನಿಷಿದ್ಧ
ಆದರೆ ಹೃದಯರೋಗ ಸೇರಿದಂತೆ ಯಾವುದೇ ಆರೋಗ್ಯ ಸಮಸ್ಯೆ ಇಲ್ಲ ಎಂಬುದರ ಕುರಿತು ಸ್ವಯಂ ಘೋಷಿತ ಪತ್ರಕ್ಕೆ ಸಹಿ ಮಾಡಬೇಕಾಗುತ್ತದೆ. ಸಂಸ್ಥೆ ಯಲ್ಲಿ ನುರಿತ ತರಬೇತುದಾರರಿದ್ದು, ಅವರ ಸಹಾಯದಿಂದ ಡೈವಿಂಗ್ ಮಾಡಬಹುದಾಗಿದೆ ಎಂದು ತಿಳಿಸಿದ್ದಾರೆ.

ಒಬ್ಬರಿಗೆ 3500 ರೂಪಾಯಿ ಮಾತ್ರ
ಡೈವಿಂಗ್ ಮಾಡಲು ಅಗತ್ಯವಿರುವ ಎಲ್ಲಾ ರೀತಿಯ, 35 ಲಕ್ಷ ವೆಚ್ಚದ ಜೀವ ರಕ್ಷಕ ಉಪಕರಣಗಳನ್ನು ಸಂಸ್ಥೆ ಹೊಂದಿದ್ದು, ಪ್ರಾರಂಭಿಕ ಶುಲ್ಕವಾಗಿ ಒಬ್ಬರಿಗೆ 3500 ರೂ ನಿಗಧಿಪಡಿಸಿದೆ ಎಂದು ಅವರು ಸ್ಪಷ್ಟಪಡಿಸಿದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications