ಉಡುಪಿ: ಮಸೀದಿ ಕಟ್ಟಡದಲ್ಲಿದ್ದ SDPI ಅಧ್ಯಕ್ಷನ ಅಕ್ರಮ ಹೋಟೆಲ್ ತೆರವು
ಉಡುಪಿ, ಮಾರ್ಚ್ 26: ಉಡುಪಿಯಲ್ಲಿ ಬೆಳ್ಳಂಬೆಳಗ್ಗೆ ಬುಲ್ಡೋಜರ್ ಅಬ್ಬರಿಸಿದೆ. ನಗರದಲ್ಲಿ ಕಟ್ಟಿರುವ ಹಲವು ಅಕ್ರಮ ಕಟ್ಟಡಗಳ ತೆರವು ಕಾರ್ಯಾಚರಣೆಯನ್ನು ಉಡುಪಿ ನಗರಸಭೆ ಮಾಡಿದೆ.
ಉಡುಪಿ ಜಿಲ್ಲಾ ಎಸ್ಡಿಪಿಐ ಅಧ್ಯಕ್ಷ ಕಳೆದ ಹಲವು ವರ್ಷಗಳಿಂದ ಅಕ್ರಮ ಕಟ್ಟಡದಲ್ಲಿ ಹೋಟೆಲ್ ವ್ಯವಹಾರ ನಿರ್ವಹಿಸುತ್ತಿದ್ದು, ನಗರಸಭೆ ಹಲವು ನೋಟಿಸ್ ನೀಡಿದ ಬಳಿಕ ಹೋಟೆಲ್ ತೆರವುಗೊಳಿಸಿದ ಕಾರಣ ನಗರಸಭೆ ಅಧಿಕಾರಿಗಳು ಶನಿವಾರ ಬೆಳ್ಳಂಬೆಳಗ್ಗೆ ಬುಲ್ಡೋಜರ್ನಲ್ಲಿ ಹೋಟೆಲ್ ಕಟ್ಟಡ ನೆಲಸಮಗೊಳಿಸಿದೆ.
ಉಡುಪಿ ನಗರದ ಜಾಮೀಯಾ ಮಸೀದಿ ಕಾಂಪ್ಲೆಕ್ಸ್ನಲ್ಲಿ ಬುಲ್ಡೋಜರ್ ಘರ್ಜನೆ ಮಾಡಿದ್ದು, ಬೆಳ್ಳಂಬೆಳಗ್ಗೆ ಉಡುಪಿ ನಗರಸಭೆಯ ಕಾರ್ಯಾಚರಣೆ ಮಾಡಿದೆ. ಎಸ್ಡಿಪಿಐ ಜಿಲ್ಲಾಧ್ಯಕ್ಷ ನಜೀರ್ ಅಹಮ್ಮದ್ ಅವರ ಝರಾ ಹೋಟೆಲ್ ಅನ್ನು ನಗರಸಭೆ ಅಧಿಕಾರಿಗಳು ತೆರವುಗೊಳಿಸಿದರು.

ನಜೀರ್ ಅಹಮ್ಮದ್ ಅವರ ಹೋಟೆಲ್ ಕಳೆದ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದು ಅಕ್ರಮ ಕಟ್ಟಡದಲ್ಲಿದೆ. ಈ ಬಗ್ಗೆ ನಜೀರ್ ಅಹಮ್ಮದ್ ಅವರಿಗೆ ನಗರಸಭೆ ಹಲವು ಬಾರಿ ನೋಟಿಸ್ ನೀಡಿದರೂ ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗಿರಲಿಲ್ಲ. ಈ ಹಿನ್ನಲೆಯಲ್ಲಿ ನಗರಸಭೆ ಅಧಿಕಾರಿಗಳು ಇದೀಗ ಹೋಟೆಲ್ ತೆರವು ಮಾಡಿದ್ದಾರೆ.
ಹೋಟೆಲ್ ತೆರವು ಹಿನ್ನಲೆಯಲ್ಲಿ ನಜೀರ್ ಅಹಮ್ಮದ್ ಜೊತೆ ಅಧಿಕಾರಿಗಳು, ಪೊಲೀಸರು ಜೊತೆ ಮಾತುಕತೆ ಮಾಡಿದ್ದಾರೆ. ನಗರಸಭೆ ಸಿಬ್ಬಂದಿ, ಪೌರ ಕಾರ್ಮಿಕರಿಂದ ಅಂಗಡಿ ತೆರವು ಮಾಡಲಾಗಿದೆ. ಹೋಟೆಲ್ ಜೊತೆಗೆ ಕಟ್ಟಡದಲ್ಲಿರುವ ಝೈತರ್ ಆನ್ ಎಂಬ ಮಳಿಗೆಯೂ ತೆರವು ಮಾಡಲಾಗಿದೆ.
ಎಸ್ಡಿಪಿಐ ಜಿಲ್ಲಾಧ್ಯಕ್ಷನ ಅಕ್ರಮ ಕಟ್ಟಡ ತೆರವು ಹಿನ್ನಲೆಯಲ್ಲಿ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೂಡಾ ಮಾಡಲಾಗಿದೆ. ಹೋಟೆಲ್ ತೆರವು ಕಾರ್ಯಾಚರಣೆ ವೇಳೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅಧಿಕಾರಿಗಳು, ಈ ಹೋಟೆಲ್ ತೆರವು ಬಗ್ಗೆ ಕಳೆದ ಒಂದು ವರ್ಷದಿಂದ ನೋಟಿಸ್ ನೀಡುತ್ತಿದ್ದೇವೆ. ಅಕ್ರಮ ಕಟ್ಟಡ ತೆರವು ಬಗ್ಗೆ ಮೂರು ತಿಂಗಳಿನಿಂದ ನಗರಸಭೆಯಲ್ಲಿ ಚರ್ಚೆಯನ್ನು ಮಾಡಲಾಗಿದೆ. ನೋಟಿಸ್ ನೀಡಿಯೇ ಅಕ್ರಮ ಕಟ್ಟಡ ತೆರವುಗೊಳಿಸಲಾಗಿದೆ ಎಂದು ಹೇಳಿದ್ದಾರೆ.

ಈ ವೇಳೆ ಕೇವಲ ಈ ಕಟ್ಟಡ ಮಾತ್ರನಾ? ಬೇರೆ ಅಕ್ರಮ ಕಟ್ಟಡಗಳನ್ನು ಏನು ಮಾಡುತ್ತೀರಿ? ಎಂದು ಸ್ಥಳೀಯರು ಅಧಿಕಾರಿಗಳನ್ನು ಪ್ರಶ್ನಿಸಿದ್ದಾರೆ. ಉಡುಪಿ ನಗರದ ಎಲ್ಲಾ ಅಕ್ರಮ ಕಟ್ಟಡಗಳಿಗೆ ನೋಟಿಸ್ ನೀಡಲಾಗಿದೆ. ತೆರವುಗೊಳಿಸದಿದ್ದಲ್ಲಿ ಕಾರ್ಯಾಚರಣೆ ಮಾಡಿ ತೆರವು ಮಾಡುವುದಾಗಿ ಹೇಳಿದ್ದಾರೆ.
Recommended Video
ಉಡುಪಿಯಲ್ಲಿ ಹಿಜಾಬ್ ಹೋರಾಟಕ್ಕೆ, ಹಿಜಾಬ್ ಪರ ವಿದ್ಯಾರ್ಥಿನಿಯರಿಗೆ ಎಸ್ಡಿಪಿಐ ಮತ್ತು ಸಿಎಫ್ಐ ನೇರ ಬೆಂಬಲ ನೀಡಿತ್ತು. ಈ ಹಿನ್ನಲೆಯಲ್ಲಿ ಅವರನ್ನು ಟಾರ್ಗೆಟ್ ಮಾಡಲಾಗಿದೆ ಅಂತಾನೂ ಆರೋಪ ಮಾಡಲಾಗಿದೆ.
-
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral












Click it and Unblock the Notifications