ಕಣ್ಮರೆಯಾಗಿರುವ ಸುವರ್ಣ ತ್ರಿಭುಜ ಬೋಟ್ ಅಪಘಾತಕ್ಕೀಡಾಯಿತೇ?
ಉಡುಪಿ, ಜನವರಿ 14: ಮಲ್ಪೆಯಿಂದ ಆಳ ಸಮುದ್ರ ಮೀನುಗಾರಿಕೆಗೆ ಹೋಗಿದ್ದ ಸುವರ್ಣ ತ್ರಿಭುಜ ಬೋಟ್ ಅಪಘಾತಕ್ಕೀಡಾಯಿತೇ? ಇಂತಹದೊಂದು ಅನುಮಾನ ಕಾಡಲಾರಂಭಿಸಿದೆ. ಅದಕ್ಕೆ ಪುಷ್ಠಿ ನೀಡುವಂತೆ ಹಡಗೊಂದರ ವಯರ್ ಲೆಸ್ ಮೆಸೇಜ್ ಅನುಮಾನ ಹುಟ್ಟುಹಾಕಿದೆ. ಈ ಹಿನ್ನೆಲೆಯಲ್ಲಿ ಉಡುಪಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಮೀನುಗಾರಿಕೆಗೆ ಸುವರ್ಣ ತ್ರಿಭುಜ ಬೋಟ್ ನಲ್ಲಿ ತೆರಳಿದ್ದ ಮಲ್ಪೆಯ 7 ಮಂದಿ ಮೀನುಗಾರರು ನಾಪತ್ತೆಯಾಗಿ ಒಂದು ತಿಂಗಳು ಕಳೆದಿದೆ. ಆದರೆ ಇಲ್ಲಿಯವರೆಗೆ ನಾಪತ್ತೆಯಾಗಿರುವ ಮೀನುಗಾರರ ಬಗ್ಗೆ ಅಥವಾ ಕಣ್ಮರೆಯಾಗಿರುವ ಬೋಟ್ ಬಗ್ಗೆ ಸುಳಿವು ಕೂಡ ಸಿಕ್ಕಿಲ್ಲ. ಆದರೆ ನಾಪತ್ತೆಯಾಗಿರುವ ಬೋಟ್ ಹಾಗೂ ಅದರಲ್ಲಿದ್ದ ಮೀನುಗಾರರ ಶೋಧ ಕಾರ್ಯ ಮುಂದುವರೆದಿದೆ.
ಡಿಸೆಂಬರ್ 13 ರಂದು ಮಲ್ಪೆ ಬಂದರ್ ನಿಂದ ಹೊರಟಿದ್ದ ಸುವರ್ಣ ತ್ರಿಭುಜ ಬೋಟ್ ನ ಸಂಪರ್ಕ ಡಿಸೆಂಬರ್ 15 ರಂದು ಕಡಿತವಾಗಿತ್ತು. ಆನಂತರದಿಂದ ಈವರೆಗೆ ಬೋಟ್ ಮತ್ತು ಮೀನುಗಾರರ ಬಗ್ಗೆ ಸುಳಿವು ದೊರೆತಿಲ್ಲ.

ಈ ನಡುವೆ ಬೋಟ್ ಕಣ್ಮರೆಯಾದ ಪ್ರದೇಶದಲ್ಲಿ ಸಂಚರಿಸಿದ ಎಲ್ಲಾ ಹಡಗುಗಳ ಮಾಹಿತಿಯನ್ನು ಪೊಲೀಸರು ಕಲೆ ಹಾಕುತ್ತಿದ್ದಾರೆ. ಒಂದು ಮೂಲದ ಪ್ರಕಾರ ಆ ಭಾಗದಲ್ಲಿ ಹಾದು ಹೋದ ಹಡಗಿನ ಮೂಲಕ ಒಂದು ವಯರ್ ಲೆಸ್ ಮೆಸೇಜ್ ರವಾನಿಸಲಾಗಿತ್ತು. ಆ ಮೆಸೇಜಿನಲ್ಲಿ ಬೋಟು ಅಪಘಾತದ ಬಗ್ಗೆ ಪ್ರಸ್ತಾಪವಾಗಿತ್ತು ಎಂದು ಹೇಳಲಾಗಿದೆ.
ವಯರ್ ಲೆಸ್ ಮೆಸೆಜ್ ರವಾನಿಸಿದ ಆ ಹಡಗು ಯಾವುದು? ಯಾವ ಭಾಗದಲ್ಲಿ ಸಂಚರಿಸುತ್ತಿದ್ದಾಗ ಈ ವಯರ್ ಲೆಸ್ ಮೆಸೆಜ್ ರವಾನಿಸಲಾಗಿದೆ? ಅವರು ನೋಡಿದ ಬೋಟು ಅಪಘಾತದ ಯಾವುದು ಎಂಬುದನ್ನು ತಿಳಿಯಲು ಪೊಲೀಸರು ತನಿಖೆ ನಡೆಸುತ್ತಿದ್ದು, ಉಡುಪಿ ಪೊಲೀಸರು ಮಹಾರಾಷ್ಟ್ರದ ಮಾಲ್ವಾನಲ್ಲಿ ಬೀಡುಬಿಟ್ಟು ತನಿಖೆ ಮುಂದುವರಿಸಿದ್ದಾರೆ.
ಉಡುಪಿ ಎಸ್.ಪಿ ಮಾಲ್ವಾನ್ ಹಾಗೂ ಮಹಾರಾಷ್ಟ್ರದ ದೇವಘಡ ಎಸ್.ಪಿ ಜೊತೆ ನಿರಂತರ ಸಂಪರ್ಕದಲ್ಲಿದ್ದಾರೆ. ಅಲ್ಲಿನ ಮೀನುಗಾರ ಸಂಘಗಳಿಂದ ಸ್ಥಳೀಯ ಪೊಲೀಸ್ ಠಾಣೆಯ ಮೂಲಕ ಮಾಹಿತಿಯನ್ನು ಕೂಡ ಕಲೆ ಹಾಕುತ್ತಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications