ಹಿರಿಯ ಪತ್ರಕರ್ತ ಅಮ್ಮೆಂಬಳ ಆನಂದರಿಗೆ ರಾಜ್ಯೋತ್ಸವ ಪ್ರಶಸ್ತಿ ಗರಿ
ಉಡುಪಿ, ನವೆಂಬರ್. 29: ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಹಿರಿಯ ಪತ್ರಕರ್ತ, ಸಮಾಜವಾದಿ ಹೋರಾಟಗಾರ ಅಮ್ಮೆಂಬಳ ಆನಂದ (92) ಅವರನ್ನು ರಾಜ್ಯ ಸರಕಾರ ಆಯ್ಕೆ ಮಾಡಿದೆ.
ಕರ್ನಾಟಕ ವಿಶ್ವವಿದ್ಯಾಲಯದ ಮಾಜಿ ಸೆನೆಟ್ ಸದಸ್ಯರು ಆಗಿದ್ದ ಅಮ್ಮೆಂಬಳ ಆನಂದ ಅವರು ಹುಟ್ಟಿದ್ದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ. ಆದರೆ ಕಾರ್ಯ ಕ್ಷೇತ್ರ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ. ನಿವೃತ್ತ ಜೀವನ ಉಡುಪಿ ಜಿಲ್ಲೆಯಲ್ಲಿ.
ಹೀಗೆ 3 ಜಿಲ್ಲೆಗಳ ಒಡನಾಟ ಹೊಂದಿರುವ ಅಮ್ಮೆಂಬಳ ಅವರು, ಹಿರಿಯ ಸಮಾಜವಾದಿ ನೇತಾರರಾದ ಕಮಲಾದೇವಿ ಚಟ್ಟೋಪಾಧ್ಯಾಯ, ದಿನಕರ ದೇಸಾಯಿ, ಅಮ್ಮೆಂಬಳ ಬಾಳಪ್ಪ, ಜಾರ್ಜ ಫೆರ್ನಾಂಡಿಸ್ ಅವರೊಂದಿಗೆ ನಿಕಟ ಸಂಪರ್ಕ ಹೊಂದಿದ್ದರು.

ಚಿನ್ನಯ ಹಾಗೂ ತಿರುಮಲೆ ದಂಪತಿಯ ಪುತ್ರರಾಗಿರುವ ಇವರು ಬಂಟಾಳ್ವ ತಾಲೂಕಿನ ಅಮ್ಮೆಂಬಳದಲ್ಲಿ 1927ರಲ್ಲಿ ಜನಿಸಿದರು.ಪ್ರಾಥಮಿಕ ಶಿಕ್ಷಣವನ್ನು ಬಿಜೈಯಲ್ಲಿ ಹಾಗೂ ಹೈಸ್ಕೂಲ್ ಶಿಕ್ಷಣವನ್ನು ಕೆನರಾ ಹೈಸ್ಕೂಲಿನಲ್ಲಿ ಪೂರೈಸಿದ ಇವರು, ಕಂಕನಾಡಿಯಲ್ಲಿದ್ದ ಭತ್ತ ಸಂಶೋಧನಾ ಕೇಂದ್ರದಲ್ಲಿ ಕ್ಷೇತ್ರ ಸಹಾಯಕರಾಗಿ ಮತ್ತು ಬೆಸೆಂಟ್ ಶಿಕ್ಷಣ ಸಂಸ್ಥೆಯಲ್ಲಿ ಕೆಲಕಾಲ ಉದ್ಯೋಗದಲ್ಲಿದ್ದರು.
ಮಂಗಳೂರಿನ ನವಭಾರತ ಪತ್ರಿಕೆಯಲ್ಲಿ ಉಪಸಂಪಾದಕರಾಗಿ ವೃತ್ತಿ ಜೀವನ ಆರಂಭಿಸಿದ ಅವರು ನಂತರ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾಕ್ಕೆ ತೆರಳಿ ಕೆನರಾ ವೆಲ್ ಫೇರ್ ಟ್ರಸ್ಟ್ ವಾರಪತ್ರಿಕೆ ಜನಸೇವಕ ಸಂಪಾದಕರಾಗಿ 17 ವರ್ಷ ಸೇವೆ ಸಲ್ಲಿಸಿದರು.
ಬಳಿಕ ಡೆಕ್ಕನ್ ಹೆರಾಲ್ಡ್ , ಪ್ರಜಾವಾಣಿ ಪತ್ರಿಕೆಯಲ್ಲಿ 30 ವರ್ಷ, ಸಂಯುಕ್ತ ಕರ್ನಾಟಕ ಪತ್ರಿಕೆಯಲ್ಲಿ 35 ವರ್ಷ ಕಾರ್ಯನಿರ್ವಹಿಸಿದ್ದು, ನಿವೃತ್ತಿ ಬಳಿಕ ಮಣಿಪಾಲದಲ್ಲಿ ಮಗಳ ಮನೆಯಲ್ಲಿ ಜೀವನದ ಸಂಧ್ಯಾ ಕಾಲವನ್ನು ಕಳೆಯುತ್ತಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications